ಬಿಜಾಪುರದ ಅಬ್ದುಲ್ ಐಎಸ್ಐಎಸ್ ಸೇರಿಲ್ಲ, ಸೌದಿಯಲ್ಲಿದ್ದಾನೆ
ಬಿಜಾಪುರ, ಡಿಸೆಂಬರ್ 02 : ಐಎಸ್ಐಎಸ್ ಉಗ್ರ ಸಂಘಟನೆ ಸೇರಿದ್ದ ಕರ್ನಾಟಕ ಮೂಲದ ಅಬ್ದುಲ್ ಖುದ್ದೂಸ್ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿತ್ತು. ಪೊಲೀಸರು ಖುದ್ದೂಸ್ ಮನೆಗೆ ಭೇಟಿ ನೀಡಿದಾಗ ಆತ ಬದುಕಿರುವ ಮತ್ತು ಸೌದಿ ಅರೆಬೀಯಾದಲ್ಲಿ ಕೆಲಸ ಮಾಡುತ್ತಿರುವ ವಿಷಯ ಬಹಿರಂಗವಾಗಿದೆ.
ಕರ್ನಾಟಕ ಮೂಲದ ಫಯಾಜ್ ಮೊಹಮದ್, ಅಬ್ದುಲ್ ಖುದ್ದೂಸ್ ಮತ್ತು ಉಮರ್ ಸುಭಾನ್ ಎಂಬುವವರು ಐಎಸ್ಐಎಸ್ ಸೇರಿದ್ದಾರೆ. ಅವರು ಅಲ್ಲಿ ಮೃತಪಟ್ಟಿದ್ದಾರೆ ಎಂದು ಗುಪ್ತಚರ ಇಲಾಖೆ ಶಂಕೆ ವ್ಯಕ್ತಪಡಿಸಿತ್ತು. ಬಿಜಾಪುರದ ಖುದ್ದೂಸ್ ಹೆಸರನ್ನು ಮೃತಪಟ್ಟವರ ಪಟ್ಟಿಗೆ ಸೇರಿಸಲಾಗಿತ್ತು. [ISIS ಸೇರಿದ್ದ ಮೂವರ ಸಾವು?]

ಈ ಪಟ್ಟಿ ಹಿಡಿದು ಪೊಲೀಸರು ಅಬ್ದುಲ್ ಖುದ್ದೂಸ್ ಅವರ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಆತನ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಣೆ ಮಾಡಲು ಮುಂದಾಗಿದ್ದಾರೆ. ಆಗ ಖುದ್ದೂಸ್ ಕುಟುಂಬದವರು ಆತ ಬದುಕಿದ್ದಾನೆ ಸೌದಿ ಅರೇಬಿಯಾದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿಸಿದ್ದಾರೆ. [ಐಸಿಸ್ ಸರ್ವನಾಶಕ್ಕೆ ಪಣತೊಟ್ಟ ವೀರ ಯೋಧ ಅಬು]
ಪೊಲೀಸರು ಖುದ್ದೂಸ್ಗೆ ಕರೆ ಮಾಡುವಂತೆ ಕುಟುಂಬದವರಿಗೆ ಸೂಚನೆ ನೀಡಿದ್ದಾರೆ. ಅವರು ಕರೆ ಮಾಡಿದಾಗ ವಿಡಿಯೋ ಚಾಟ್ ಮೂಲಕ ಆತ ಪೊಲೀಸರ ಸಮ್ಮುಖದಲ್ಲಿಯೇ ಕುಟುಂಬದವರ ಜೊತೆ ಮಾತುಕತೆ ನಡೆಸಿದ್ದಾನೆ. ಈ ಬೆಳವಣಿಗೆ ಬಗ್ಗೆ ತಕ್ಷಣ ಪೊಲೀಸರು ಕೇಂದ್ರ ಗೃಹ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. [ಉಗ್ರರಿಗೆ ತಿರುಗೇಟು, ಕರ್ನಾಟಕ ಮಸೀದಿಗಳು ಗ್ರೇಟು]
ಭಾರತದಿಂದ ಸಿರಿಯಾಕ್ಕೆ ತೆರಳಿ ಐಎಸ್ಐಎಸ್ ಸೇರಿರಬಹುದು ಎಂದು ತಯಾರಿಸಿರುವ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಇಲಾಖೆ ಸಿದ್ಧಪಡಿಸಿರುವ ಪಟ್ಟಿಯ ಪ್ರಕಾರ ಕರ್ನಾಟಕ 6 ಜನರು ಐಎಸ್ಐಎಸ್ ಸಂಘಟನೆ ಸೇರಿದ್ದಾರೆ ಎಂದು ಶಂಕಿಸಲಾಗಿದೆ.
ಅಬ್ದುಲ್ ಖುದ್ದೂಸ್ ಸೇರಿದಂತೆ ಮೂವರು ಯುದ್ಧದ ಸಂದರ್ಭದಲ್ಲಿ ಸಿರಿಯಾದಲ್ಲಿ ಮೃತಪಟ್ಟಿದ್ದರು ಎಂದು ಪಟ್ಟಿ ಮಾಡಲಾಗಿತ್ತು. ಆದರೆ, ಈಗ ಖುದ್ದೂಸ್ ಜೀವಂತವಾಗಿರುವುದು ಖಚಿತವಾದ ಕಾರಣ, ಆತನ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications