ಐಎಸ್ಐಎಸ್ ವಶದಿಂದ ಇಬ್ಬರು ಕನ್ನಡಿಗರ ರಕ್ಷಣೆ
ಬೆಂಗಳೂರು, ಆಗಸ್ಟ್ 1 : ಐಎಸ್ಐಎಸ್ ಉಗ್ರರು ಅಪಹರಣ ಮಾಡಿದ್ದ ಭಾರತೀಯ ಪೈಕಿ ಇಬ್ಬರು ಕನ್ನಡಿಗರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಇಬ್ಬರು ಉಗ್ರರ ವಶದಲ್ಲಿದ್ದು, ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕೋಲಾರದ ವಿಜಯ್ ಕುಮಾರ್ ಮತ್ತು ರಾಯಚೂರಿನ ಲಕ್ಷ್ಮೀಕಾಂತ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದಾರೆ. ನಾಲ್ವರು ಭಾರತೀಯರನ್ನು ಉಗ್ರರು ಶುಕ್ರವಾರ ಅಪಹರಣ ಮಾಡಿದ್ದರು. [ನಾಲ್ವರು ಭಾರತೀಯರ ಅಪಹರಣ]

ಕರ್ನಾಟಕ ಮೂಲದ ಇಬ್ಬರು ಹಾಗೂ ಆಂಧ್ರಪ್ರದೇಶದ ಇಬ್ಬರು ಸೇರಿದಂತೆ ನಾಲ್ವರು ಭಾರತೀಯರನ್ನು ಲಿಬಿಯಾದಲ್ಲಿ ಶುಕ್ರವಾರ ಅಪಹರಣ ಮಾಡಲಾಗಿತ್ತು. ಆಂಧ್ರ ಪ್ರದೇಶದ ಬಲರಾಮ್, ಗೋಪಿ ಅವರನ್ನು ಬಿಡುಗಡೆಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. [ISIS ಸೇರಿದ್ದ ಕರ್ನಾಟಕದ ಮೂವರ ಸಾವು?]
Welcome news from Libya. 2 of the 4 detained Indians brought back safely to University of Sirte. Our efforts continue for the remaining two.
— Vikas Swarup (@MEAIndia) July 31, 2015 ಐಎಸ್ಐಎಸ್ ಉಗ್ರರು ಅಪಹರಣ ಮಾಡಿದವರನ್ನು ಬಿಡುಗಡೆ ಮಾಡಲು ಯಾವುದೇ ಬೇಡಿಕೆ ಇಟ್ಟಿಲ್ಲ. ಲಿಬಿಯಾದಲ್ಲಿ ಐಎಸ್ಐಎಸ್ ಪ್ರಬಲ್ಯ ಹೆಚ್ಚಾಗುತ್ತಿದ್ದಂತೆ ಇಂತಹ ಅಪಹರಣಗಳು ನಿರಂತರವಾಗಿ ನಡೆಯುತ್ತಿವೆ. ಲಿಬಿಯಾದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರ ಸ್ವರೂಪ ಪಡೆದುಕೊಂಡರೆ ದೇಶವನ್ನು ತೊರೆಯುವಂತೆ ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚಿಸಿದೆ.
39 ಜನರ ಕಥೆ ಏನು? : ಅಂದಹಾಗೆ ಐಎಸ್ಐಎಸ್ ಉಗ್ರರು ಇರಾಕ್ನಲ್ಲಿ 39 ಭಾರತೀಯರನ್ನು ಅಪಹರಿಸಿದ್ದರು. ಆದರೆ, ಇದುವರೆಗೆ ಅವರ ಬಗ್ಗೆ ಮಾಹಿತಿ ಲಭ್ಯವಾಗುತ್ತಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳುತ್ತಿದೆ. ಇದು ಬಿಟ್ಟರೆ ಬೇರೆ ಯಾವುದೇ ಮಾಹಿತಿಗಳು ಸಿಗುತ್ತಿಲ್ಲ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications