ಐಎಸ್ಐಎಸ್ ವಶದಿಂದ ಇಬ್ಬರು ಕನ್ನಡಿಗರ ರಕ್ಷಣೆ
ಬೆಂಗಳೂರು, ಆಗಸ್ಟ್ 1 : ಐಎಸ್ಐಎಸ್ ಉಗ್ರರು ಅಪಹರಣ ಮಾಡಿದ್ದ ಭಾರತೀಯ ಪೈಕಿ ಇಬ್ಬರು ಕನ್ನಡಿಗರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಇಬ್ಬರು ಉಗ್ರರ ವಶದಲ್ಲಿದ್ದು, ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕೋಲಾರದ ವಿಜಯ್ ಕುಮಾರ್ ಮತ್ತು ರಾಯಚೂರಿನ ಲಕ್ಷ್ಮೀಕಾಂತ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದಾರೆ. ನಾಲ್ವರು ಭಾರತೀಯರನ್ನು ಉಗ್ರರು ಶುಕ್ರವಾರ ಅಪಹರಣ ಮಾಡಿದ್ದರು. [ನಾಲ್ವರು ಭಾರತೀಯರ ಅಪಹರಣ]

ಕರ್ನಾಟಕ ಮೂಲದ ಇಬ್ಬರು ಹಾಗೂ ಆಂಧ್ರಪ್ರದೇಶದ ಇಬ್ಬರು ಸೇರಿದಂತೆ ನಾಲ್ವರು ಭಾರತೀಯರನ್ನು ಲಿಬಿಯಾದಲ್ಲಿ ಶುಕ್ರವಾರ ಅಪಹರಣ ಮಾಡಲಾಗಿತ್ತು. ಆಂಧ್ರ ಪ್ರದೇಶದ ಬಲರಾಮ್, ಗೋಪಿ ಅವರನ್ನು ಬಿಡುಗಡೆಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. [ISIS ಸೇರಿದ್ದ ಕರ್ನಾಟಕದ ಮೂವರ ಸಾವು?]
Welcome news from Libya. 2 of the 4 detained Indians brought back safely to University of Sirte. Our efforts continue for the remaining two.
— Vikas Swarup (@MEAIndia) July 31, 2015 ಐಎಸ್ಐಎಸ್ ಉಗ್ರರು ಅಪಹರಣ ಮಾಡಿದವರನ್ನು ಬಿಡುಗಡೆ ಮಾಡಲು ಯಾವುದೇ ಬೇಡಿಕೆ ಇಟ್ಟಿಲ್ಲ. ಲಿಬಿಯಾದಲ್ಲಿ ಐಎಸ್ಐಎಸ್ ಪ್ರಬಲ್ಯ ಹೆಚ್ಚಾಗುತ್ತಿದ್ದಂತೆ ಇಂತಹ ಅಪಹರಣಗಳು ನಿರಂತರವಾಗಿ ನಡೆಯುತ್ತಿವೆ. ಲಿಬಿಯಾದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರ ಸ್ವರೂಪ ಪಡೆದುಕೊಂಡರೆ ದೇಶವನ್ನು ತೊರೆಯುವಂತೆ ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚಿಸಿದೆ.
39 ಜನರ ಕಥೆ ಏನು? : ಅಂದಹಾಗೆ ಐಎಸ್ಐಎಸ್ ಉಗ್ರರು ಇರಾಕ್ನಲ್ಲಿ 39 ಭಾರತೀಯರನ್ನು ಅಪಹರಿಸಿದ್ದರು. ಆದರೆ, ಇದುವರೆಗೆ ಅವರ ಬಗ್ಗೆ ಮಾಹಿತಿ ಲಭ್ಯವಾಗುತ್ತಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳುತ್ತಿದೆ. ಇದು ಬಿಟ್ಟರೆ ಬೇರೆ ಯಾವುದೇ ಮಾಹಿತಿಗಳು ಸಿಗುತ್ತಿಲ್ಲ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications