ಜನನ ಪ್ರಮಾಣ ಪತ್ರ ವಿತರಣೆ, ಹೊಸ ಆದೇಶದ ಬಗ್ಗೆ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 25: ಜನನ ಪ್ರಮಾಣ ಪತ್ರ ವಿತರಣೆಯಲ್ಲಿ ಕೆಲವು ಬದಲಾವಣೆಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ, ಆರೋಗ್ಯ ಸೌಧ ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ-ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇವೆಗಳು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ 4ನೇ ವರದಿಯ ಶಿಫಾರಸ್ಸಿನಂತೆ. ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು, ಇವರ ಪತ್ರವನ್ನು ಉಲ್ಲೇಖ ಮಾಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರದ ವಿತರಣೆಯ ಕುರಿತು ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 4ನೇ ವರದಿಯ ಶಿಫಾರಸು ಸಂಖ್ಯೆ 131ಕ್ಕೆ ಸಂಬಂಧಿಸಿದಂತೆ ಜನನ ಪತ್ರವನ್ನು ನೀಡುವಾಗ ಅಧಿಕಾರಿಗಳು ಯಾವುದೇ ತಪ್ಪುಗಳನ್ನು ಮಾಡಬಾರದು. ಅದನ್ನು ಸರಿಪಡಿಸುವುದು ಕಷ್ಟ ಎಂದು ತಿಳಿಸಲಾಗಿದೆ.
ತುರ್ತು ಸಂದರ್ಭದಲ್ಲಿ ಜನನ ಪ್ರಮಾಣ ಪತ್ರವನ್ನು ಒಂದು ದಿನದೊಳಗೆ ಒದಗಿಸುವುದು. ಅರ್ಜಿದಾರರು ಒದಗಿಸಿದ ದಾಖಲೆಗಳನ್ನು ಸುರಕ್ಷಿತ ಕಸ್ಟಡಿಯಲ್ಲಿ ಇಡಬೇಕು ಮತ್ತು ಅವರು ಮತ್ತ ದಾಖಲೆಗಳನ್ನು ಸಲ್ಲಿಸುವಂತೆ ಕೇಳಬಾರದು.
ಅರ್ಜಿಯ ಪ್ರಕ್ರಿಯೆಯ ಹಂತದಲ್ಲಿ ಅರ್ಜಿದಾರರಿಗೆ ಎಸ್ಎಮ್ಎಸ್ ಕಳುಹಿಸಲು ಮತ್ತು ಸೇವೆಯನ್ನು ಅನುಮೋದಿಸಿದಾಗ, ಆನ್ಲೈನ್ ಮೂಲಕ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿರಬೇಕೆಂದು ಸಲಹೆ ನೀಡಿದರು.
ಶಿಫಾರಸ್ಸು ಎರಡು ಸೇವೆಗಳಿಗೆ ಸಕಾಲದ ಸಮಯದ ಮಿತಿಯನ್ನು 15 ದಿನಗಳಿಂದ 7 ದಿನಗಳವರೆಗೆ ಕಡಿಮೆ ಮಾಡಬಹುದು ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶಿಫಾರಸು ಮಾಡಿದೆ.
ಜನನ ಮರಣ ನೋಂದಣಿಯ ಪ್ರಕ್ರಿಯೆಯ ಹಂತದಲ್ಲಿ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅವರ ನಿರ್ದೇಶಕರು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದವರು ಈ ಕಳಕಂಡಂತೆ ಕ್ರಮವಹಿಸಲಾಗಿರುತ್ತದೆ.
* ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಅಧಿಕಾರಿಗಳು ಯಾವುದೇ ತಪ್ಪುಗಳನ್ನು ಮಾಡದಂತೆ ಎಚ್ಚರಿಕೆ ವಹಿಸುವುದು.
* ನೋಂದಣಿ ಕುರಿತಂತೆ ಅರ್ಜಿದಾರರಿಗೆ ಎಸ್ಎಮ್ಎಸ್ ಕಳುಹಿಸಲಾಗುತ್ತಿದೆ
* ಇ-ಜನ್ಮ ತಂತ್ರಾಂಶದಲ್ಲಿ ಅನುಮೋದನೆಯಾಗಿರುವ ಜನನ ಮರಣ ಪ್ರಮಾಣ ಪತ್ರದಲ್ಲಿ ಸೇವಾಸಿಂಧು ತಂತ್ರಾಂಶದ ಮೂಲಕ ಡೌನ್ ಲೋಡ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.
* ಸಕಾಲದಲ್ಲಿ ಜನನ, ಮರಣ ಪ್ರಮಾಣ ಪತ್ರಗಳನ್ನು ಪಡೆಯಲು 07 ದಿನಗಳ ಕಾಲಾವಧಿಯನ್ನು ನಿಗದಿಪಡಿಸಲಾಗಿದೆ.
* ಅರ್ಜಿದಾರರು ಒದಗಿಸಿದ ದಾಖಲೆಗಳನ್ನು ಸುರಕ್ಷಿತ ಕಸ್ಟಡಿಯಲ್ಲಿ ಇಡಬೇಕು ಮತ್ತು ಅವರು ಮತ್ತೆ ದಾಖಲೆಗಳನ್ನು ಸಲ್ಲಿಸಲು ಕೇಳಬಾರದು.
ಈ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ ಎಂದು ಆದೇಶ ಹೇಳಿದೆ.
-
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications