ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಐಟಿ ಇಲಾಖೆಯಿಂದ ಡಿಕೆ ಶಿವಕುಮಾರ್ ಗೆ ಸಮನ್ಸ್
ಬೆಂಗಳೂರು, ಆಗಸ್ಟ್ 06: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯಿಂದ ಭಾನುವಾರದಂದು ಸಮನ್ಸ್ ಜಾರಿ ಮಾಡಲಾಗಿದೆ.
ಡಿ.ಕೆ. ಶಿವಕುಮಾರ್, ಮಾವ ತಿಮ್ಮಯ್ಯ, ಸೋದರಿ ಪದ್ಮಾ, ಆಪ್ತ ಜ್ಯೋತಿಷಿ ದ್ವಾರಕಾನಾಥ್ ಮತ್ತು ಉದ್ಯಮಿ ಸಚಿನ್ ನಾರಾಯಣ್ ಅವರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಐಟಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.
ದಾಳಿ ವೇಳೆ ಸಿಕ್ಕ ದಾಖಲೆಗಳ ಬಗ್ಗೆ ಡಿಕೆಶಿ ಮತ್ತು ಇತರೆ ಆರೋಪಿಗಳಿಂದ ವಿವರಣೆ ಪಡೆಯಲು ಸಮನ್ಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ಡಿಕೆಶಿ ಎರಡು ದಿನ ಕಾಲಾವಕಾಶ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ವಿಚಾರಣೆ ನಂತರ ಡಿ.ಕೆ. ಶಿವಕುಮಾರ್ ಬೇನಾಮಿ ಆಸ್ತಿ ಮಾಡಿರುವುದು ಸಾಬೀತಾದರೆ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ.
Comments
dk shivakumar it raid karnataka government bengaluru corruption ಡಿಕೆ ಶಿವಕುಮಾರ್ ಐಟಿ ದಾಳಿ ಕರ್ನಾಟಕ ಸರ್ಕಾರ ಬೆಂಗಳೂರು ಭ್ರಷ್ಟಾಚಾರ
English summary
Following raids, the Income Tax department has issued summons to Karnataka minister D K Shivakumar. The senior Congress leader has been asked to appear in person before officials of the IT department.
Story first published: Sunday, August 6, 2017, 13:37 [IST]