ರಾಜ್ಯದಲ್ಲಿ ನಡೆದ ಐಟಿ ದಾಳಿಯಲ್ಲಿ ಈ ವರೆಗೆ ಸಿಕ್ಕ ಹಣ 1.66 ಕೋಟಿ!
ಬೆಂಗಳೂರು, ಮಾರ್ಚ್ 28: ಇಂದು ರಾಜ್ಯದಾದ್ಯಂತ ನಡೆದಿರುವ ಐಟಿ ದಾಳಿಯಲ್ಲಿ ಈವರೆಗೆ 1.66 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಐಟಿ ಅಧಿಕಾರಿಗಳು ಸುದ್ದಿ ಮಾಧ್ಯಮಗಳೊಂದಿಗೆ ಈ ವಿಷಯ ಹಂಚಿಕೊಂಡಿದ್ದು, 24 ಸ್ಥಳಗಳಲ್ಲಿ ದಾಳಿ ಮಾಡಲಾಗಿದ್ದು, 13 ಕಾಂಟ್ರಾಕ್ಟರ್ಗಳು, 4 ಎಂಜಿನಿಯರ್ ಅವರುಗಳ ತನಿಖೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಐಟಿ ದಾಳಿ ಮಾಡಿ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ: ಎಚ್ಡಿಕೆ
ಬೆಳಿಗ್ಗೆಯಿಂದ ಇಲ್ಲಿಯವರೆಗೆ ಮಾಡಿದ ತನಿಖೆಯಲ್ಲಿ ಈವರೆಗೆ 1.66 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ, ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.
ಸಚಿವ ಪುಟ್ಟರಾಜು ಸೇರಿದಂತೆ ಇನ್ನೂ ಹಲವು ಪ್ರಮುಖ ಜೆಡಿಎಸ್-ಕಾಂಗ್ರೆಸ್ ಮುಖಂಡರು, ಶಾಸಕ-ಸಚಿವರ ಆಪ್ತರ ಮೇಲೆ ಐಟಿ ದಾಳಿ ನಡೆದಿದೆ. ಕನಕಪುರ ತಾಲ್ಲೂಕು ಕಚೇರಿಗೆ ಹೋಗಿ ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ಅವರ ಆಸ್ತಿಗಳ ಕುರಿತು ಸಹ ತನಿಖೆ ನಡೆಸಲಾಗಿದೆ.
ನನ್ನದು ಸ್ವಾತಿ ನಕ್ಷತ್ರ, ನನ್ನನ್ನು ಏನೂ ಮಾಡಲು ಆಗುವುದಿಲ್ಲ; ರೇವಣ್ಣ
ಇಂದು ನಡೆದಿರುವ ಐಟಿ ದಾಳಿಯು ಜೆಡಿಎಸ್-ಕಾಂಗ್ರೆಸ್ ಮುಖಂಡರನ್ನು ಕೆರಳಿಸಿದ್ದು, ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್, ಡಿ.ಕೆ.ಶಿವಕುಮಾರ್ ಅವರುಗಳು ಇಂದು ಭಾರಿ ಪ್ರತಿಭಟನೆಯನ್ನು ಮಾಡಿದ್ದಾರೆ.