ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ನಡೆದ ಐಟಿ ದಾಳಿಯಲ್ಲಿ ಈ ವರೆಗೆ ಸಿಕ್ಕ ಹಣ 1.66 ಕೋಟಿ!

|
Google Oneindia Kannada News

ಬೆಂಗಳೂರು, ಮಾರ್ಚ್ 28: ಇಂದು ರಾಜ್ಯದಾದ್ಯಂತ ನಡೆದಿರುವ ಐಟಿ ದಾಳಿಯಲ್ಲಿ ಈವರೆಗೆ 1.66 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಐಟಿ ಅಧಿಕಾರಿಗಳು ಸುದ್ದಿ ಮಾಧ್ಯಮಗಳೊಂದಿಗೆ ಈ ವಿಷಯ ಹಂಚಿಕೊಂಡಿದ್ದು, 24 ಸ್ಥಳಗಳಲ್ಲಿ ದಾಳಿ ಮಾಡಲಾಗಿದ್ದು, 13 ಕಾಂಟ್ರಾಕ್ಟರ್‌ಗಳು, 4 ಎಂಜಿನಿಯರ್‌ ಅವರುಗಳ ತನಿಖೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಐಟಿ ದಾಳಿ ಮಾಡಿ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ: ಎಚ್‌ಡಿಕೆ ಐಟಿ ದಾಳಿ ಮಾಡಿ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ: ಎಚ್‌ಡಿಕೆ

ಬೆಳಿಗ್ಗೆಯಿಂದ ಇಲ್ಲಿಯವರೆಗೆ ಮಾಡಿದ ತನಿಖೆಯಲ್ಲಿ ಈವರೆಗೆ 1.66 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ, ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.

IT department seized Rs 1.66 crore cash in Karnataka raids

ಸಚಿವ ಪುಟ್ಟರಾಜು ಸೇರಿದಂತೆ ಇನ್ನೂ ಹಲವು ಪ್ರಮುಖ ಜೆಡಿಎಸ್-ಕಾಂಗ್ರೆಸ್ ಮುಖಂಡರು, ಶಾಸಕ-ಸಚಿವರ ಆಪ್ತರ ಮೇಲೆ ಐಟಿ ದಾಳಿ ನಡೆದಿದೆ. ಕನಕಪುರ ತಾಲ್ಲೂಕು ಕಚೇರಿಗೆ ಹೋಗಿ ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ಅವರ ಆಸ್ತಿಗಳ ಕುರಿತು ಸಹ ತನಿಖೆ ನಡೆಸಲಾಗಿದೆ.

ನನ್ನದು ಸ್ವಾತಿ ನಕ್ಷತ್ರ, ನನ್ನನ್ನು ಏನೂ ಮಾಡಲು ಆಗುವುದಿಲ್ಲ; ರೇವಣ್ಣ ನನ್ನದು ಸ್ವಾತಿ ನಕ್ಷತ್ರ, ನನ್ನನ್ನು ಏನೂ ಮಾಡಲು ಆಗುವುದಿಲ್ಲ; ರೇವಣ್ಣ

ಇಂದು ನಡೆದಿರುವ ಐಟಿ ದಾಳಿಯು ಜೆಡಿಎಸ್-ಕಾಂಗ್ರೆಸ್ ಮುಖಂಡರನ್ನು ಕೆರಳಿಸಿದ್ದು, ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್, ಡಿ.ಕೆ.ಶಿವಕುಮಾರ್ ಅವರುಗಳು ಇಂದು ಭಾರಿ ಪ್ರತಿಭಟನೆಯನ್ನು ಮಾಡಿದ್ದಾರೆ.

English summary
IT department seized Rs 1.66 crore cash in Karnataka raids. 24 premises were covered in the raid which started today morning. 13 contractors & 4 engineers are being searched. Searches still underway.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X