ಮಾಂಸಾಹಾರ ಸೇವಿಸಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಸಿದ್ದರಾಮಯ್ಯ ಭೇಟಿ : ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು, ಫೆಬ್ರವರಿ 08: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಬುಧವಾರ ಮಧ್ಯಾಹ್ನ ದೆಹಲಿಯಲ್ಲಿ ಮಾಂಸಾಹಾರ ಸೇವಿಸಿ ರಾತ್ರಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಭೇಟಿ ಕೊಟ್ಟ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದು, ಇದು ಬಹಳ ದುರದೃಷ್ಟಕರ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳು ಎಂಬುದನ್ನು ಎಲ್ಲೋ ಒಂದು ಕಡೆ ಮರೆಯುತ್ತಿದ್ದಾರೆ ಎಂಬುದು ನನ್ನ ಭಾವನೆ. ಇದು ಮೊದಲ ಬಾರಿ ಏನಲ್ಲ. ಹಲವು ಸಂದರ್ಭಗಳಲ್ಲಿ ಈ ರೀತಿ ಘಟನೆಗಳು ಪುನರಾವರ್ತನೆ ಆಗಿವೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ದೇವರ ಬಗ್ಗೆ ಎಷ್ಟು ಭಕ್ತಿ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದು ಬೇರೆ ಮಾತು. ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅವರ ನಡವಳಿಕೆಯನ್ನು ಸಮಾಜ, ಪ್ರತಿಯೊಬ್ಬರೂ ಗಮನಿಸುತ್ತಾರೆ. ಈ ಘಟನೆ ನಿಜವಾಗಿಯೂ ಖಂಡನೀಯ. ಅದರಲ್ಲೂ ಸುತ್ತೂರಿನ ಪವಿತ್ರ ಗದ್ದುಗೆಗೆ ಭೇಟಿ ಕೊಟ್ಟದ್ದು ನಿಜವಾಗಲೂ ಒಂದು ದುರಂತ ಎಂದು ತಿಳಿಸಿದರು.

 It Is A Tragedy That Siddaramaiah Visited The Suttur Math After Eating Meat

ಯಾಕೆ ಪದೇಪದೇ ಇಂಥ ಘಟನೆ ನಡೆಯುತ್ತದೆ ಎಂದು ಅವರೇ ಉತ್ತರಿಸಬೇಕು. ಒಂದು ಕಡೆ ಭಾಷಣ ಮಾಡಿದ ಮುಖ್ಯಮಂತ್ರಿಯವರು ಅಣ್ಣ ಬಸವಣ್ಣನನ್ನು ನೆನಪು ಮಾಡಿಕೊಳ್ಳುತ್ತಾರೆ. ಅಂದರೆ, ಅವರ ನಡೆಗೂ ನುಡಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಲ್ಲ ಭಕ್ತರ ಭಾವನೆಗೆ ಧಕ್ಕೆ ಬರುವಂತೆ ಮುಖ್ಯಮಂತ್ರಿಗಳು ನಡೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಸಂಬಂಧ ಸರ್ವೇ ಫಲಿತಾಂಶದ ಕುರಿತು ಮಾತನಾಡಿ, ಇಡೀ ದೇಶದಲ್ಲಿ ನರೇಂದ್ರ ಮೋದಿಜೀ ಅವರ ಪರವಾದ ಅಲೆ ಇದೆ. ಸಹಜವಾಗಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣವಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇಶದ ಜನರಿಗೆ ಮನವರಿಕೆ ಆಗಿದೆ. ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿ ಇಟ್ಟುಕೊಂಡಿದ್ದೇವೆ.

28 ಸೀಟುಗಳ ಮತ ಎಣಿಕೆ ಸಂದರ್ಭದಲ್ಲಿ ಒಂದೊಂದು ಸೀಟು ಗೆಲ್ಲಲು ಕೂಡ ಕಾಂಗ್ರೆಸ್‍ನವರು ಪರಿತಪಿಸುತ್ತಾರೆ. ಅಂಥ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ಮೋದಿ ಮತ್ತೊಮ್ಮೆ ಎಂಬ ವಿಷಯದಲ್ಲಿ ಮತದಾರರೂ ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

 It Is A Tragedy That Siddaramaiah Visited The Suttur Math After Eating Meat

ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ ಅವರ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ. 10ರಂದು ರಾತ್ರಿ ನೇರವಾಗಿ ದೆಹಲಿಯಿಂದ ಮೈಸೂರಿಗೆ ತಲುಪುತ್ತಾರೆ. 11ರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದುಕೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಸಂಜೆ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯೂ ನಡೆಯಲಿದೆ.

ನಾನು ಇವತ್ತು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಂಖ್ಯೆ 454, 455ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. 2047ನೇ ಇಸವಿಗೆ ಭಾರತವು 'ವಿಕಸಿತ ಭಾರತ'ವಾಗಿ ಪರಿವರ್ತನೆ ಹೊಂದಬೇಕು; ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಕನಸು ನನಸಾಗಲು ಗ್ರಾಮಗಳೂ ಅಭಿವೃದ್ಧಿ ಹೊಂದಬೇಕಿದೆ ಎಂದು ವಿಶ್ಲೇಷಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕು ಎಂದರು.

ಈ ನಿಟ್ಟಿನಲ್ಲಿ 'ಗ್ರಾಮ ಚಲೋ' ಅಭಿಯಾನವು ಉತ್ತಮ ಅಭಿಯಾನ ಆಗಲಿದೆ. ಈ ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರಕಾರವು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಕೊಟ್ಟ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸಲಾಗುತ್ತದೆ ಎಂದು ತಿಳಿಸಿದರು.

ಈ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. 'ಮೋದಿ ಮತ್ತೊಮ್ಮೆ' ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಯುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರೂ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸುತ್ತಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+