ಬಿಜೆಪಿಯ ಡೋಂಗಿತನದಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ: ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 24: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೆ ಇಷ್ಟೊಂದು ಅಡೆತಡೆಗಳನ್ನು ಹಾಕುತ್ತಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ.
ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಡೀಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರತ್ತೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆಗೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದ್ರೆ ಈ ರೀತಿ ಮಹಿಳೆಯರಿಗೆ ವಂಚನೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯವರನ್ನು ಕಳುಹಿಸಿದ್ದು?
ಮಹಿಳಾ ಮೀಸಲಾತಿ ಬಿಲ್ ಸಿದ್ಧಪಡಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಇದೆ. ಮಹಿಳಾ ಮೀಸಲಾತಿಯಲ್ಲೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ಇರಬೇಕು ಎನ್ನುವುದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಅದರಲ್ಲೂ ಶೇ 33 ಮಾತ್ರವಲ್ಲ, ಶೇ 50 ರಷ್ಟು ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅವರು ತಿಳಿಸಿದ್ದಾರೆ.
ಈಗ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024 ರಲ್ಲೂ ಜಾರಿ ಆಗುವುದಿಲ್ಲ. 2029 ರಲ್ಲೂ ಜಾರಿ ಆಗುವುದಿಲ್ಲ, 2034 ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ.
ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಿದ್ದರಿಂದ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಿದ್ದಾರೆ. ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡಿಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರೆಸಬೇಕು ಎಂದು ಕರೆ ನೀಡಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications