Yuva Nidhi: ಯುವನಿಧಿ ಪಡೆಯಲು ಪ್ರತಿ ತಿಂಗಳು ಈ ದಾಖಲೆ ಸಲ್ಲಿಸುವುದು ಕಡ್ಡಾಯ
ಬೆಂಗಳೂರು, ಫೆಬ್ರವರಿ 15: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಯುವ ನಿಧಿ ಯೋಜನೆ ಆರಂಭವಾಗಿ ಒಂದು ತಿಂಗಳು ಕಳೆಯುತ್ತಿದ್ದು, ನೊಂದಣಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳು ಪ್ರತಿ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವ ನಿಧಿ ಯೋಜನೆಗೆ ನೊಂದಣಿ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರ ಯುವನಿಧಿ ಯೋಜನೆಯನ್ನು ವಿದ್ಯಾವಂತ ನಿರುದ್ಯೋಗಿಗಳಿಗೆ ನೀಡುತ್ತಿದ್ದು, 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರು ಈ ಯುವನಿಧಿ ಯೋಜನೆ ಪಡೆಯಲು ಅರ್ಹರಾಗಿದ್ದಾರೆ.

ಪದವೀಧರರಿಗೆ 3,000 ರೂಪಾಯಿ ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸರ್ಕಾರದಿಂದ ಸಿಗಲಿದೆ. ಈ ಭತ್ಯೆಯು ಅಭ್ಯರ್ಥಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ವರೆಗೆ ಸರ್ಕಾರ ನೀಡಲಿದೆ. ಆದರೆ ಅರ್ಜಿದಾರರಿಗೆ ಸರ್ಕಾರದಿಂದ ಕೆಲವು ಷರತ್ತುಗಳನ್ನು ವಿಧಿಸಲಾಗಿದ್ದು, ಈ ಹಿಂದೆ ನೀಡಿದ್ದ ಷರತ್ತುಗಳ ಜೊತೆಗೆ ಇನ್ನೊಂದು ಮುಖ್ಯವಾದ ಕರಾರು ಹಾಕಲಾಗಿದೆ.
ಯುವ ನಿಧಿ ಯೋಜನೆಯ ಫಲಾನುಭವಿಗಳು ಈ ಯೋಜನೆಯಡಿ ಪ್ರತಿ ತಿಂಗಳು ಹಣ ಪಡೆಯಬೇಕೆಂದರೆ ಪ್ರತಿ ತಿಂಗಳು ನಮಗೆ ಕೆಲಸ ಸಿಕ್ಕಿಲ್ಲ, ಉನ್ನತ ಶಿಕ್ಷಣಕ್ಕೆ ದಾಖಲಾಗಿಲ್ಲ ಎಂದು ಸ್ವಯಂ ಘೋಷಿಸಿದ ಪ್ರಮಾಣ ಪತ್ರವನ್ನು ನಿಗದಿತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು. ಒಂದು ವೇಳೆ ಯಾವುದಾರೂ ಒಂದು ತಿಂಗಳು ಈ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡದೇ ಇದ್ದರೆ, ಯುವ ನಿಧಿ ಯೋಜನೆಯಿಂದ ಬರುವ ಹಣ ಸ್ಥಗಿತಗೊಳ್ಳಿದೆ.
ಯುವನಿಧಿಗೆ ಇರುವ ಷರತ್ತುಗಳೇನು..?
ರಾಜ್ಯ ಸರ್ಕಾರದಿಂದ ನೀಡುವ ಈ ಯುವ ನಿಧಿ ಯೋಜನೆ ಹಣ ಪದವಿ ಅಥವಾ ಡಿಪ್ಲೊಮಾ ಮುಗಿಸಿ ಆರು ತಿಂಗಳಾದರೂ ಉದ್ಯೋಗ ಸಿಗದೆ ಉದ್ಯೋಗ ಅರಸುತ್ತಿರುವವರಿಗರ ಸಿಗಲಿದೆ, ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಅಥವಾ ಬೆಂಗಳೂರು ಒನ್, ಗ್ರಾಮ ಒನ್ನಲ್ಲಿ ಅರ್ಜಿ ಸಲ್ಲಿಸಬೇಕು .ಈ ಯೋಜನೆ ಒಬ್ಬ ಅಭ್ಯರ್ಥಿಗೆ ಎರಡು ವರ್ಷ ಮಾತ್ರ ಸಿಗಲಿದ್ದು, ಎರಡು ವರ್ಷದ ಮಧ್ಯದಲ್ಲಿ ಅಭ್ಯರ್ಥಿಗೆ ಉದ್ಯೋಗ ಸಿಕ್ಕರೆ ಸರ್ಕಾರದಿಂದ ಬರುವ ಹಣ ಸ್ಥಗಿತಗೊಳ್ಳಿದೆ. ಒಂದು ವೇಳೆ ಉದ್ಯೋಗ ದೊರೆತ ನಂತರ ಅಭ್ಯರ್ಥಿ ಸರ್ಕಾರಕ್ಕೆ ತಿಳಿಸದೇ ಯುವ ನಿಧಿ ಯೋಜನೆಯ ಹಣ ಪಡೆದರೆ, ಅಂತವರ ವಿರುದ್ಧ ಕ್ರಮವಾಗಲಿದ್ದು, ಸರ್ಕಾರ ಭಾರೀ ಮೊತ್ತದ ದಂಡ ವಿಧಿಸಲಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್












Click it and Unblock the Notifications