Yuva Nidhi: ಯುವನಿಧಿ ಪಡೆಯಲು ಪ್ರತಿ ತಿಂಗಳು ಈ ದಾಖಲೆ ಸಲ್ಲಿಸುವುದು ಕಡ್ಡಾಯ
ಬೆಂಗಳೂರು, ಫೆಬ್ರವರಿ 15: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಯುವ ನಿಧಿ ಯೋಜನೆ ಆರಂಭವಾಗಿ ಒಂದು ತಿಂಗಳು ಕಳೆಯುತ್ತಿದ್ದು, ನೊಂದಣಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳು ಪ್ರತಿ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವ ನಿಧಿ ಯೋಜನೆಗೆ ನೊಂದಣಿ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರ ಯುವನಿಧಿ ಯೋಜನೆಯನ್ನು ವಿದ್ಯಾವಂತ ನಿರುದ್ಯೋಗಿಗಳಿಗೆ ನೀಡುತ್ತಿದ್ದು, 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರು ಈ ಯುವನಿಧಿ ಯೋಜನೆ ಪಡೆಯಲು ಅರ್ಹರಾಗಿದ್ದಾರೆ.

ಪದವೀಧರರಿಗೆ 3,000 ರೂಪಾಯಿ ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸರ್ಕಾರದಿಂದ ಸಿಗಲಿದೆ. ಈ ಭತ್ಯೆಯು ಅಭ್ಯರ್ಥಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ವರೆಗೆ ಸರ್ಕಾರ ನೀಡಲಿದೆ. ಆದರೆ ಅರ್ಜಿದಾರರಿಗೆ ಸರ್ಕಾರದಿಂದ ಕೆಲವು ಷರತ್ತುಗಳನ್ನು ವಿಧಿಸಲಾಗಿದ್ದು, ಈ ಹಿಂದೆ ನೀಡಿದ್ದ ಷರತ್ತುಗಳ ಜೊತೆಗೆ ಇನ್ನೊಂದು ಮುಖ್ಯವಾದ ಕರಾರು ಹಾಕಲಾಗಿದೆ.
ಯುವ ನಿಧಿ ಯೋಜನೆಯ ಫಲಾನುಭವಿಗಳು ಈ ಯೋಜನೆಯಡಿ ಪ್ರತಿ ತಿಂಗಳು ಹಣ ಪಡೆಯಬೇಕೆಂದರೆ ಪ್ರತಿ ತಿಂಗಳು ನಮಗೆ ಕೆಲಸ ಸಿಕ್ಕಿಲ್ಲ, ಉನ್ನತ ಶಿಕ್ಷಣಕ್ಕೆ ದಾಖಲಾಗಿಲ್ಲ ಎಂದು ಸ್ವಯಂ ಘೋಷಿಸಿದ ಪ್ರಮಾಣ ಪತ್ರವನ್ನು ನಿಗದಿತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು. ಒಂದು ವೇಳೆ ಯಾವುದಾರೂ ಒಂದು ತಿಂಗಳು ಈ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡದೇ ಇದ್ದರೆ, ಯುವ ನಿಧಿ ಯೋಜನೆಯಿಂದ ಬರುವ ಹಣ ಸ್ಥಗಿತಗೊಳ್ಳಿದೆ.
ಯುವನಿಧಿಗೆ ಇರುವ ಷರತ್ತುಗಳೇನು..?
ರಾಜ್ಯ ಸರ್ಕಾರದಿಂದ ನೀಡುವ ಈ ಯುವ ನಿಧಿ ಯೋಜನೆ ಹಣ ಪದವಿ ಅಥವಾ ಡಿಪ್ಲೊಮಾ ಮುಗಿಸಿ ಆರು ತಿಂಗಳಾದರೂ ಉದ್ಯೋಗ ಸಿಗದೆ ಉದ್ಯೋಗ ಅರಸುತ್ತಿರುವವರಿಗರ ಸಿಗಲಿದೆ, ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಅಥವಾ ಬೆಂಗಳೂರು ಒನ್, ಗ್ರಾಮ ಒನ್ನಲ್ಲಿ ಅರ್ಜಿ ಸಲ್ಲಿಸಬೇಕು .ಈ ಯೋಜನೆ ಒಬ್ಬ ಅಭ್ಯರ್ಥಿಗೆ ಎರಡು ವರ್ಷ ಮಾತ್ರ ಸಿಗಲಿದ್ದು, ಎರಡು ವರ್ಷದ ಮಧ್ಯದಲ್ಲಿ ಅಭ್ಯರ್ಥಿಗೆ ಉದ್ಯೋಗ ಸಿಕ್ಕರೆ ಸರ್ಕಾರದಿಂದ ಬರುವ ಹಣ ಸ್ಥಗಿತಗೊಳ್ಳಿದೆ. ಒಂದು ವೇಳೆ ಉದ್ಯೋಗ ದೊರೆತ ನಂತರ ಅಭ್ಯರ್ಥಿ ಸರ್ಕಾರಕ್ಕೆ ತಿಳಿಸದೇ ಯುವ ನಿಧಿ ಯೋಜನೆಯ ಹಣ ಪಡೆದರೆ, ಅಂತವರ ವಿರುದ್ಧ ಕ್ರಮವಾಗಲಿದ್ದು, ಸರ್ಕಾರ ಭಾರೀ ಮೊತ್ತದ ದಂಡ ವಿಧಿಸಲಿದೆ.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್












Click it and Unblock the Notifications