ನವರಾತ್ರಿ ಸಂಭ್ರಮದಲ್ಲೇ ಬಿಎಸ್‌ವೈ ಪಟಾಲಂಗೆ ಶಾಕ್ ಕೊಟ್ಟ ಐಟಿ ಅಧಿಕಾರಿಗಳು

ಬೆಂಗಳೂರು, ಅ. 07: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸೇರಿದಂತೆ ರಾಜ್ಯದಲ್ಲಿ ಐವತ್ತು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಮತ್ತು ಅಕ್ರಮ ಆದಾಯ ಗಳಿಕೆ ಕುರಿತು ಖಚಿತ ಮಾಹಿತಿ ಆಧರಿಸಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಂಗಳೂರಿನ 50 ಕಡೆ ಏಕ ಕಾಲಕ್ಕೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಶೋಧ ನಡೆಸುತ್ತಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಉಮೇಶ್ ಅವರ ರಾಜಾಜಿನಗರದ ರಾಮಮಂದಿರ ಮನೆ ಮೇಲೆ ದಾಳಿ ನಡೆದಿದೆ. ವೃತ್ತಿಯಲ್ಲಿ ಬಿಎಂಟಿಸಿ ಚಾಲಕನಾಗಿದ್ದ ಉಮೇಶ್ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕನಾಗಿ ಕೆಲಸ ನಿರ್ವಹಣೆಗೆ ನಿಯೋಜನೆಗೊಂಡಿದ್ದರು. ಬಿ.ಎಸ್. ವೈ. ಸಿಎಂ ಆದ ಬಳಿಕ ಶಿವಾನಂದ ವೃತ್ತದಲ್ಲಿರುವ ಧವಳಿಗಿರಿ ಮನೆಯಲ್ಲಿಯೇ ಇರುತ್ತಿದ್ದರು. ಬಿ.ಎಸ್. ವೈ ಅವರಿಗೆ ಸೇರಿದ ಕೆಲವು ಕಾರ್ಯಕ್ರಮಗಳನ್ನು ಉಮೇಶ ನೋಡಿಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಬಿ.ಎಸ್. ಯಡಿಯೂರಪ್ಪ ಅವರ ಪುತ್ರರಾದ ಬಿ. ವೈ. ವಿಜಯೇಂದ್ರ ಹಾಗೂ ರಾಘವೇಂದ್ರ ಬಳಿಯೂ ಆಪ್ತರಾಗಿ ಗುರುತಿಸಿಕೊಂಡಿದ್ದರು ಉಮೇಶ್ ಮನೆ ಸೇರಿದಂತೆ ಅವರ ಆಪ್ತರ ಮನೆಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ.

ಚಾಲಕನಾಗಿರುವ ಉಮೇಶ್, ನಾಗಸಂದ್ರ ಮೆಟ್ರೋ ಹಿಂಭಾಗದಲ್ಲಿ ಕೋಟಿಗಟ್ಟಲೆ ವೆಚ್ಚ ಮಾಡಿ ಬಂಗಲೆ ನಿರ್ಮಾಣ ಮಾಡಿದ್ದಾರೆ. ಯಡಿಯೂರಪ್ಪ ಅವರು ಇಟ್ಟಿರುವ ಧವಳಗಿರಿ ಹೆಸರನ್ನು ಉಮೇಶ್ ತಮ್ಮ ಮನೆಗೂ ಇಟ್ಟಿದ್ದರು. ಇದೀಗ ಐಟಿ ಅಧಿಕಾರಿಗಳ ದಾಳಿಗೆ ತುತ್ತಾಗಿದ್ದಾರೆ.ಆದಾಯ, ತೆರಿಗೆ ವಂಚನೆ ಸಂಬಂಧ ಮಹತ್ವದ ದಾಖಲೆಗಳನ್ನು ವಶಪಡಸಿಕೊಂಡಿದ್ದಾರೆ. ಚಾರ್ಟೆಡ್ ಅಕೌಂಟೆಂಟ್ ಲಕ್ಷ್ಮೀ ಕಾಂತ್ ಸೇರಿದಂತೆ ಹಲವು ಉದ್ಯಮಿಗಳ ಮನೆಗಳ ಮೇಲೂ ದಾಳಿ ನಡೆದಿದೆ.

IT Raid in Bengaluru in 50 Places Including Former CM BS Yediyurappa PA Umesh

ನೀರಾವರಿ ಇಲಾಖೆಯ ಕಾಮಗಾರಿ, ಅನುಷ್ಠಾನ, ಗುತ್ತಿಗೆಯನ್ನು ಉಮೇಶ್ ನೋಡಿಕೊಳ್ಳುತ್ತಿದ್ದರು. ಹಲವು ಗುತ್ತಿಗೆದಾರರ ನಡುವೆ ನಿಕಟ ಸಂಪರ್ಕ ಹೊಂದಿದ್ದ ಉಮೇಶ್ ಮೇಲ್ನೋಟಕ್ಕೆ ರಾಮಮಂದಿರದ ಬಾಡಿಗೆ ಮನೆಯಲ್ಲಿಯೇ ಇರುವುದಾಗಿ ಬಿಂಬಿಸಿಕೊಂಡಿದ್ದರು. ಉಮೇಶ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಈ ದಾಳಿಯಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಕ್ಕಳಿಗೂ ಕಂಟಕ ಎದುರಾಗಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.

IT Raid in Bengaluru in 50 Places Including Former CM BS Yediyurappa PA Umesh

Recommended Video

      RCB ನಿನ್ನೆ ಸೋಲಲು Padikkal ಮುಖ್ಯ ಕಾರಣವೇ | Oneindia Kannada

      ಬೆಳಗ್ಗೆ ಐದು ಗಂಟೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿ.ಎಸ್. ವೈ ಆಪ್ತ ಸಹಾಯಕ ಉಮೇಶ್ ಅವರ ಸಂಬಂಧಿಕರ ಆರು ಮನೆಗಳ ಮೇಲೆ ಕೂಡ ತಲಾಷೆ ನಡಸಲಾಗಿದೆ. ಕಳೆದ ಆರು ತಿಂಗಳಿನಿಂದ ಉಮೇಶ್ ಅವರ ಆರ್ಥಿಕ ವಹಿವಾಟಿನ ಮೇಲೆ ಐಟಿ ಅಧಿಕಾರಿಗಳು ನಿಗಾ ಇಟ್ಟು ದಾಖಲೆಗಳನ್ನು ಸಂಗ್ರಹಿಸಲಾಗಿತ್ತು. ಬಿಎಸ್‌ವೈ ಅವರ ಕುಟುಂಬ ರಾಮಲಿಂಗಂ ಕನ್‌ಸ್ಟ್ರಕ್ಷನ್ ನಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ, ಇಡಿ ಅಧಿಕಾರಿಗಳಿಗೆ ಕೂಡ ದೂರು ನೀಡಲಾಗಿತ್ತು. ಇದೀಗ ಐಟಿ ದಾಳಿ ನಡೆದಿದ್ದು, ಬಿ.ಎಸ್. ವೈ ಕುಟುಂಬಕ್ಕೂ ಕಂಟಕ ಎದುರಾಗಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+