ಐಟಿ ದಾಳಿ ವಿಚಾರ : ಡಿ.ಕೆ.ಶಿವಕುಮಾರ್ ಅರ್ಜಿಯ ತೀರ್ಪು ಜೂ.25ಕ್ಕೆ

Recommended Video

      ಡಿಕೆಶಿ ವಿಚಾರಕ್ಕೆ ಸಂಬಂಧಪಟ್ಟಂತೆ ಜೂ.25ಕ್ಕೆ ಮಹತ್ವದ ಆದೇಶ | Oneindia Kannada

      ಬೆಂಗಳೂರು, ಜೂನ್ 12 : ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ ಜೂನ್ 25ಕ್ಕೆ ಆದೇಶ ಕಾಯ್ದಿರಿಸಿದೆ. ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು.

      ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ತೀರ್ಪು ಕಾಯ್ದಿರಿಸಿದರು. ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈ ಬಿಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

      ಬೆಂಗಳೂರು ಮತ್ತು ದೆಹಲಿಯ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ 2017ರಲ್ಲಿ ಐಟಿ ದಾಳಿ ನಡೆದಿತ್ತು. ದಾಳಿಯ ವೇಳೆ ನಿವಾಸಗಳಲ್ಲಿ 8.59 ಕೋಟಿಗೂ ಅಧಿಕ ಮೊತ್ತದ ಹಣ ಪತ್ತೆಯಾಗಿತ್ತು. ಈ ಹಣಕ್ಕೆ ಅಗತ್ಯ ದಾಖಲೆಗಳನ್ನು ನೀಡಿಲ್ಲ.

      IT raid on DK Shivakumar house : Court reserved the order

      ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದೆ. ಜಾರಿ ನಿರ್ದೇಶನಾಲಯದ ಪರ ಹೆಚ್ಚುವರಿ ಸಾಲಿಟರ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ವಾದ ಮಂಡನೆ ಮಾಡಿದ್ದಾರೆ.

      ಆರೋಪಿಗಳು ಆದಾಯ ತೆರಿಗೆ ಕಾಯ್ದೆ 1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ. ಹವಾಲಾ ಮೂಲಕ ಬೆಂಗಳೂರಿನಿಂದ ದೆಹಲಿಯ ಸಫ್ದರ್ ಜಂಗ್ ಎನ್ಕ್ಲೇವ್‌ಗೆ ಹಣ ಸ ಸಾಗಣೆ ಮಾಡಿದ್ದಾರೆ ಎಂದು ವಾದ ಮಂಡಿಸಿದ್ದಾರೆ.

      ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್, ಎನ್.ರಾಜೇಂದ್ರ ಮತ್ತು ಆಂಜನೇಯ, ಹನುಮಂತಯ್ಯ ಅವರು ಆರೋಪಿಗಳಾಗಿದ್ದಾರೆ. ಎಲ್ಲರೂ ಪ್ರಕರಣದಿಂದ ತಮ್ಮನ್ನು ಕೈ ಬಿಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+