ಐಟಿ ದಾಳಿ LIVE: ಶಾಕೂ ಇಲ್ಲ ಏನೂ ಇಲ್ಲ, ಇದಕ್ಕೆಲ್ಲ ನಾವು ಹೆದರುವುದಿಲ್ಲ: ರೇವಣ್ಣ
ಮೈಸೂರು, ಹಾಸನ, ಮಾರ್ಚ್ 28: ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ, ಸಿಎಸ್ ಪುಟ್ಟರಾಜು, ಎಂಎಲ್ಸಿ ಬಿಎಂ ಫಾರೂಕ್ ಸೇರಿದಂತೆ 10 ಪ್ರಭಾವಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚುನಾವಣೆ ವೇಳೆ ಕೋಟ್ಯಂತರ ಹಣ ಸಾಗಣೆ ಶಂಕೆ ಹಿನ್ನೆಲೆ ಐಟಿ ದಾಳಿ ನಡೆಸಲಾಗಿದೆ. ತುಮಕೂರು, ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ ಭಾಗದಲ್ಲಿ ಹಣ ಸಾಗಣೆ ಶಂಕೆ ಹಿನ್ನೆಲೆ ದಾಳಿ ನಡೆದಿದೆ. ಮಂಡ್ಯಕ್ಕೆ ಹಣ ಸಾಗಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಮನೆ ಮೇಲೆ ಐಟಿ ದಾಳಿ
ಚುನಾವಣಾ ಅಕ್ರಮದ ಬಗ್ಗೆ ವಾರದಿಂದ ಕಣ್ಣಿಟ್ಟಿದ್ದ ಐಟಿ ಅಧಿಕಾರಿಗಳು ಮೈಸೂರು, ಮಂಡ್ಯದಲ್ಲಿ ಅಕ್ರಮವಾಗಿ ಹಣ ಸಾಗಾಟದಲ್ಲಿ ಸಚಿವ ಸಿ.ಎಸ್. ಪುಟ್ಟರಾಜು ಪ್ರಮುಖ ಪಾತ್ರ ವಹಿಸಿರುವ ಅನುಮಾನದಿಂದ ದಾಳಿ ನಡೆಸಿದ್ದಾರೆ.
ಎಚ್.ಡಿ. ರೇವಣ್ಣ ಸಚಿವರಾಗಿರುವ ಲೋಕೋಪಯೋಗಿ ಇಲಾಖೆಯ ಹಾಸನ ಕಚೇರಿ ಮೇಲೆ ಕೂಡ ಐಟಿ ದಾಳಿ ನಡೆದಿದ್ದು, ಹಾಸನದ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಂಜುನಾಥ್ ಅವರ ವಿಚಾರಣೆ ನಡೆಸಲಾಗುತ್ತಿದೆ. ಹಾಗೇ, ಇಲಾಖೆಗೆ ಸಂಬಂಧಿಸಿದ ಪ್ರಮುಖ ಕಡತಗಳ ಪರಿಶೀಲನೆ ಮಾಡಲಾಗುತ್ತಿದೆ.
ಸಿಎಂ ಆಪ್ತ ಸಿಎಸ್ ಪುಟ್ಟರಾಜು ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಅತ್ತ ಸಚಿವ ಎಚ್ ಡಿ ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಮುಂದುವರೆದ ಐಟಿ ಇಲಾಖೆ ದಾಳಿ : ಸಿಎಂ ಆಪ್ತ ಪುಟ್ಟರಾಜುಗೆ ಬಿಸಿ
ರಾಯಗೌಡ ಅವರ ಚೆನ್ನರಾಯಪಟ್ಟಣದ ನಿವಾಸವೂ ಸೇರಿದಂತೆ ಒಟ್ಟು 10 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಡ್ಯದಲ್ಲಿ ದಾಳಿ ಮಾಡಿದ ಐಟಿ ಅಧಿಕಾರಿಗಳ ಮತ್ತೊಂದು ತಂಡವೇ ಈ ದಾಳಿ ಮಾಡಿದ್ದು, ಸುಮಾರು 10 ಕಡೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಎಚ್ ಡಿ ರೇವಣ್ಣ ಅವರ ಮೂವರು ಆಪ್ತರಿಗೆ ಸೇರಿದೆ ಎನ್ನಲಾದ 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ವಿವಿಧೆಡೆ ರಾತ್ರೋರಾತ್ರಿ ಆದಾಯ ತೆರಿಗೆ ದಾಳಿ!
ಮೂಲಗಳ ಪ್ರಕಾರ ರೇವಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುತ್ತಿಗೆದಾರರಾದ ನಾರಾಯಣ ರೆಡ್ಡಿ, ಅಶ್ವತ್, ರಾಯಗೌಡ ಅವರ ಹಾಸನದ ಮನೆಗಳ ಮೇಲೆ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅವರ ಮನೆಗಳು ಮಾತ್ರವಲ್ಲದೇ ಅವರ ಬೆಂಬಲಿಗರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜೆಡಿಎಸ್ ಮುಖಂಡರಿಂದ ಸಿಎಂ ಕುಮಾರಸ್ವಾಮಿ ಭೇಟಿ
ಕೇಂದ್ರದಿಂದ ಐಟಿ, ಸಿಬಿಐ ದುರ್ಬಳಕೆ
ಐಟಿ ದಾಳಿಯಿಂದ ದೇವೇಗೌಡರು ಹೆದರಲ್ಲ
ನಮಗೆ ಶಾಕೂ ಇಲ್ಲ ಏನೂ ಇಲ್ಲ
ಐಟಿ ದಾಳಿ ಮಾಡಿಸುವ ಪವರ್ ನನಗಿಲ್ಲ: ಸುಮಲತಾ ಅಂಬರೀಷ್
ಪುಟ್ಟರಾಜು ಅಣ್ಣನ ಮಗನ ಮನೆ ಮೇಲೆ ಐಟಿ ದಾಳಿ
ಬಿಜೆಪಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ
ಐಟಿ ಅಧಿಕಾರಿಗಳು ಅಮಿತ್ ಷಾ ಏಜೆಂಟ್ಗಳು
Karnataka: Income-Tax raids are underway at residence of JD(S) leader & Karnataka Minor Irrigation Minister CS Puttaraju in Mandya pic.twitter.com/BrEX9LBnOa
— ANI (@ANI) March 28, 2019