ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಮನೆ ಮೇಲೆ ಐಟಿ ದಾಳಿ
ರಾಯಚೂರು, ಮಾ. 12 : ಲಿಂಗಸಗೂರು ಕ್ಷೇತ್ರದ ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. 2013ರಲ್ಲಿಯೂ ಮಾನಪ್ಪ ವಜ್ಜಲ್ ಅವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು.
ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಲಿಂಗಸಗೂರು ಪಟ್ಟಣದಲ್ಲಿರುವ ಶಾಸಕ ಮಾನಪ್ಪ ವಜ್ಜಲ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ನಡೆಯುವ ಸಂದರ್ಭದಲ್ಲಿ ಶಾಸಕರು ಬೆಂಗಳೂರಿನಲ್ಲಿದ್ದರು.

ಮಾನಪ್ಪ ವಜ್ಜಲ್ ಮನೆಯಲ್ಲಿದ್ದ ಅವರ ಸಹೋದರರಿಗೆ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ದಾಳಿಯ ವೇಳೆ 2 ಕೋಟಿ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. [ಮಾನಪ್ಪ ವಜ್ಜಲ್ ಮನೆ ಮೇಲೆ ಐಟಿ ದಾಳಿ]
ದಾಳಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಾನಪ್ಪ ವಜ್ಜಲ್ ಅವರು, 'ನಾನು ಹಾಗೂ ನನ್ನ ಸಹೋದರ ಗುತ್ತಿಗೆದಾರರಾಗಿದ್ದೇವೆ. ಕೆಲವು ದಾಖಲೆಗಳನ್ನು ಸಲ್ಲಿಸುವಂತೆ ಐಟಿ ಅಧಿಕಾರಿಗಳು ಸೂಚಿಸಿದ್ದಾರೆ' ಎಂದು ತಿಳಿಸಿದ್ದಾರೆ.
2013ರಲ್ಲಿಯೂ ದಾಳಿ ನಡೆದಿತ್ತು : ಶಾಸಕ ಮಾನಪ್ಪ ವಜ್ಜಲ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿರುವುದು ಇದೇ ಮೊದಲಲ್ಲ. ಲಿಂಗಸಗೂರಿನಲ್ಲಿ ವೈಭವೋಪೇತ ಬಂಗಲೆ ನಿರ್ಮಿಸಿದ್ದಾರೆ ಎಂಬ ದೂರಿನ ಅನ್ವಯ 2013ರಲ್ಲಿಯೂ ಅವರ ಮನೆ ಮೇಲೆ ದಾಳಿ ನಡೆದಿತ್ತು.
ವಜ್ಜಲ್ ಕುರಿತು : 2008ರ ಚುನಾವಣೆಯಲ್ಲಿ ಮಾನಪ್ಪ ವಜ್ಜಲ್ ಲಿಂಗಸಗೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. 2013ರ ಚುನಾವಣೆ ವೇಳೆಯಲ್ಲಿ ಬಿಜೆಪಿಯಿಂದ ಹೊರಬಂದ ವಜ್ಜಲ್ ಜೆಡಿಎಸ್ ಸೇರಿದ್ದರು. ಲಿಂಗಸಗೂರು ಕ್ಷೇತ್ರದಿಂದ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications