Get Updates
Get notified of breaking news, exclusive insights, and must-see stories!

ಗೃಹ ಸಚಿವರ ಸಲಹೆಗಾರರಾಗಿ ಕೆಂಪಯ್ಯ ನೇಮಕ

ಬೆಂಗಳೂರು,ಆ.2: ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಸಲಹೆಗಾರರನ್ನಾಗಿ ಸಿಎಂ ಸಿದ್ದರಾಮಯ್ಯ ನೇಮಕಗೊಳಿಸಿದ್ದಾರೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಅವರಿಗೆ ರಾಜ್ಯ ಸಚಿವರಿಗೆ ದೊರೆಯುವ ವೇತನ, ಸಿಬ್ಬಂದಿ ಮತ್ತು ಸೌಲಭ್ಯ ದೊರೆಯಲಿದೆ.

ಕಾಂಗ್ರೆಸ್‌ನಲ್ಲಿ ಅಸಮಾಧಾನ: ಈ ಆದೇಶದ ಪ್ರಕಟಗೊಂಡಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಇದನ್ನು ವಿರೋಧಿಸಿ ಕೆಲವು ಶಾಸಕರು, ಪಕ್ಷದ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Kempaiah ips

ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಕೆಂಪಯ್ಯ ಅವರನ್ನು ತಮಗೆ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲು ಮುಂದಾಗಿದ್ದರು ಹೇಳಲಾಗುತಿತ್ತು. ಆದರೆ ಮಂತ್ರಿಗಳು ಮತ್ತು ಶಾಸಕರ ವಿರೋಧದಿಂದಾಗಿ ಈ ಪ್ರಸ್ತಾವಕ್ಕೆ ತಡೆ ಬಿದ್ದಿತ್ತು.[ಸಿದ್ದರಾಮಯ್ಯ ಸಲಹೆಗಾರರಾಗಿ ಕೆಂಪಯ್ಯ ನೇಮಕ?]

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು: ರಾಜ್ಯದ ಇತಿಹಾಸದಲ್ಲಿ ಗೃಹ ಸಚಿವರಿಗೆ ಸಲಹೆಗಾರರೊಬ್ಬರ ನೇಮಕವಾಗಿರುವುದು ಇದೇ ಮೊದಲು. ಈ ಹಿಂದೆ ಡಿಸೋಜಾ ಎಂಬ ನಿವೃತ್ತ ಅಧಿಕಾರಿಯನ್ನು ಬೆಂಗಳೂರಿನ ಭದ್ರತಾ ವ್ಯವಸ್ಥೆ ಕುರಿತು ಸಲಹೆ ನೀಡಲು ಗೃಹ ಸಚಿವ ಕೆ.ಜೆ. ಜಾರ್ಜ್‌ ನೇಮಿಸಿದ್ದರು. ಡಿಸೋಜಾ ಅವರ ಕಾರ್ಯ‌ವ್ಯಾಪ್ತಿ ಬೆಂಗಳೂರಿಗೆ ಮಾತ್ರ ಸಿಮೀತವಾಗಿದ್ದರೆ, ಕೆಂಪಯ್ಯ ಅವರ ಕಾರ್ಯ‌ವ್ಯಾಪ್ತಿ ಇಡೀ ರಾಜ್ಯ

ಕೆಂಪಯ್ಯ ಅವರ ಕೆಲಸವೇನು?: ರಾಜ್ಯ ಪೊಲೀಸ್‌ ವ್ಯವಸ್ಥೆ ಸುಧಾರಣೆ, ವರ್ಗಾವಣೆ, ಆಡಳಿತಾತ್ಮಕ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮಹತ್ವದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಗೃಹ ಸಚಿವರಿಗೆ ಸಲಹೆ ನೀಡುವುದು.[ಸಿಎಂ ಸಿದ್ದು ಆಪ್ತರಾಗಿರುವ ಕೆಂಪಯ್ಯ]

ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ರದ್ದು: ಕೆಂಪಯ್ಯ ಅವರನ್ನು ಗೃಹ ಸಚಿವರಿಗೆ ಸಲಹೆಗಾರರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಏಳು ಜನ ಪೊಲೀಸ್‌ ಅಧಿಕಾರಿಗಳ ವರ್ಗ‌ ರದ್ದಾಗಿದೆ.[ಕರ್ನಾಟಕ: ಐಪಿಎಸ್‌ ಅಧಿಕಾರಿಗಳ ವರ್ಗಾವರ್ಗಿ‌]

ಸೋನಿಯಾ ನಾರಂಗ್‌ ಅವರು ರಾಜ್ಯ ಮೀಸಲು ಪೊಲೀಸ್‌ ಪಡೆಯ 1ನೇ ಬೆಟಾಲಿಯನ್‌ನ ಕಮಾಂಡೆಂಟ್‌ ಆಗಿ ಹುದ್ದೆಯಲ್ಲೇ ಮುಂದುವರಿಯಲಿದ್ದಾರೆ.

ಗುಲ್ಬರ್ಗ ಪೊಲೀಸ್‌ ತರಬೇತಿ ಶಾಲೆಯ ಪ್ರಾಂಶುಪಾಲರ ಹುದ್ದೆಗೆ ವರ್ಗವಾಗಿದ್ದ ಬಿ.ಶಿವಕುಮಾರ್‌ ಅವರನ್ನು ಈ ಹಿಂದೆ ಇದ್ದ ತರಬೇತಿ ವಿಭಾಗದ ಡಿಐಜಿ ಹುದ್ದೆಯಲ್ಲೇ ಮುಂದುವರಿಸಲಾಗಿದೆ.

ಶರತ್‌ಚಂದ್ರ ಅವರು ಪೂರ್ವ ವಲಯದ (ಕಾನೂನು, ಸುವ್ಯವಸ್ಥೆ) ಜಂಟಿ ಪೊಲೀಸ್‌ ಕಮಿಷನರ್‌ ಆಗಿ ಮುಂದುವರಿಯಲಿದ್ದಾರೆ. ರವಿಕಾಂತೇಗೌಡ ಅವರನ್ನು ವಿಜಾಪುರ ಎಸ್ಪಿಯಾಗಿ ವರ್ಗಾವಣೆ ಮಾಡಿದ್ದನ್ನು ರದ್ದು ಮಾಡಿದ್ದು, ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

ಅಪರಾಧ, ತಾಂತ್ರಿಕ ಸೇವೆ ವಿಭಾಗದ ಎಡಿಜಿಪಿ ಎನ್.ಎಸ್‌ ಮೇಘರಿಕ್‌ ಅವರಿಗೆ ಪೊಲೀಸ್‌ ಆಧುನೀಕರಣ, ಸಂವಹನ, ಸಾಗಣೆ ವಿಭಾಗದ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಆಂತರಿಕ ಭದ್ರತೆ ವಿಭಾಗದ ಐಜಿಪಿ ಸಿ.ಎಚ್‌. ಪ್ರತಾಪ್‌ ರೆಡ್ಡಿ ಅವರಿಗೆ ಅರಣ್ಯ ಘಟಕದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+