ನೈಸ್ ಸಂಸ್ಥೆ ಅಕ್ರಮ; ನನಗೆ ಬೆದರಿಕೆ ಕರೆ ಎಂದ ಶಾಸಕ ಟಿಬಿ ಜಯಚಂದ್ರ

ಬೆಂಗಳೂರು, ಜುಲೈ 28: ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದು ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ಜಿಲ್ಲೆಯ ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದ್ದು ಈ ಬಗ್ಗೆ ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ. ಇನ್ನೂ ರೈತರ ಹಗರಣದ ವಿಚಾರವಾಗಿ ಕಳೆದ ಎರಡು ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ ಬಿ ಜಯಚಂದ್ರ, ಈ ವೇಳೆ ರೈತರ ಜೊತೆ ಚರ್ಚೆ ಮಾಡಿದ್ದರು. ಭೇಟಿ ಬಳಿಕ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ ಎಂದು ತಿಳಿಸಿದ್ದಾರೆ.

tb-jayachandra

ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ ಎಂದು ಹೇಳಿದರು. ರೈತರು ಆಹ್ವಾನಿಸಿದ್ದರಿಂದ ಬಿಡದಿಗೆ ಹೋಗಿದ್ದೆ. ರೈತರನ್ನು ಭೇಟಿ ಮಾಡಿ ಬಂದ ಬಳಿಕ ಬೆದರಿಕೆ ಕರೆ ಶುರುವಾಗಿದೆ. ನೀವು ಈ ಕ್ಷೇತ್ರದಲ್ಲಿ ಎಲೆಕ್ಷನ್​ಗೆ ನಿಲ್ಲಬೇಕಾ. ನಿಮಗೂ ಇದಕ್ಕೂ ಏನು ಸಂಬಂಧ. ಯಾಕೆ ಬರ್ತಿರಾ ಅಂತ ಕರೆಯ ಮೂಲಕ ಕೇಳುತ್ತಿದ್ದರು ಎಂದರು.

ಇನ್ನೂ ನಾನು ಸಾರ್ವಜನಿಕ ಜೀವನದಲ್ಲಿ 45 ವರ್ಷಗಳಿಂದ ಇದ್ದೇನೆ. ಇದಕ್ಕೆಲ್ಲ ಹೆದರಲ್ಲ. ಕೂಡಲೇ ಸರ್ಕಾರ ರೈತರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಈ ರಿಪೋರ್ಟ್ ಅಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+