ವಿಜಯಪುರ ಜೈಲಿನಲ್ಲಿ ಐಟಂ ಡ್ಯಾನ್ಸ್, ಮೂವರ ಅಮಾನತು
ವಿಜಯಪುರ, ಜನವರಿ 28 : ವಿಜಯಪುರ ಜೈಲಿನಲ್ಲಿ ಗಣರಾಜ್ಯೋತ್ಸವದಂದು ನಡೆದ ಐಟಂ ಡ್ಯಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜನವರಿ 26ರಂದು 38 ಕೈದಿಗಳನ್ನು ಸನ್ನಡೆತೆ ಆಧಾರದ ಮೇಲೆ ಬಿಡುಗಡೆ ಮಾಡಿದ ಬಳಿಕ ಜೈಲಿನಲ್ಲಿ ಐಟಂ ಡ್ಯಾನ್ಸ್ ನಡೆದಿತ್ತು.
ಕಾರಾಗೃಹ ಇಲಾಖೆ ಎಡಿಜಿಪಿ ಸತ್ಯನಾರಾಯಣರಾವ್ ಅವರು ಗುರುವಾರ ವಿಜಯಪುರ ಜೈಲಿಗೆ ಭೇಟಿ ನೀಡಿದ್ದರು. ಭೇಟಿಯ ಬಳಿಕ ಜೈಲಿನ ಪ್ರಭಾರಿ ಅಧೀಕ್ಷಕ ಅಂಬೇಕರ್, ಮುಖ್ಯ ವಾರ್ಡರ್ ಜಿ.ಎಂ.ಗುಂಡಹಳ್ಳಿ, ವಾರ್ಡ್ರ್ ಸಂಪತ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. [ಪುನಃ ಜೈಲಿಗೆ ಹಾಕಿ ಎನ್ನುವ ಮೈಸೂರು ಮಹಿಳೆ ಗೋಳು ಏನು?]

ಜೈಲಿನಲ್ಲಿ ಐಟಂ ಡ್ಯಾನ್ಸ್ ನಡೆದ ಬಗ್ಗೆ ತನಿಖೆ ನಡೆಸಲು ವಿಜಯಪುರ ಎಸ್ಪಿ ಎಸ್.ಎನ್.ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿತ್ತು. ಪ್ರಾಥಮಿಕ ವರದಿಯಲ್ಲಿ ಐಟಂ ಡ್ಯಾನ್ಸ್ ನಡೆದಿರುವುದು ನಿಜ ಎಂದು ತಿಳಿದುಬಂದ ಹಿನ್ನಲೆಯಲ್ಲಿ ಮೂವರನ್ನು ಅಮಾನತು ಮಾಡಿ, ಆದೇಶ ಹೊರಡಿಸಲಾಗಿದೆ. [ಗಣರಾಜ್ಯೋತ್ಸವದಲ್ಲಿ ಸೇನಾ ಶಕ್ತಿ ಅನಾವರಣ]
WATCH: (26/1/16) Inmates rewarded for good behaviour with a dance show in jail in Vijaypur(Karnataka)https://t.co/ZQ3FIAH4RN
— ANI (@ANI_news) January 28, 2016 ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಗಣರಾಜ್ಯೋತ್ಸವದಂದು 38 ಕೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಸಚಿವರು, ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಸಮಾರಂಭ ನಡೆದ ವೇದಿಕೆಯಲ್ಲಿಯೇ ಯುವತಿಯೊಬ್ಬಳು ಐಟಂ ಡ್ಯಾನ್ಸ್ ಮಾಡಿದ್ದಳು. ಡ್ಯಾನ್ಸ್ ಮಾಡಿದ ಯುವತಿ ಮೇಲೆ ವ್ಯಕ್ತಿಯೊಬ್ಬ ದುಡ್ಡಿನ ಸುರಿಮಳೆಗೈದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
ಶಿಕ್ಷೆ ಪೂರ್ಣಗೊಳ್ಳದ ನೂರಾರು ಕೈದಿಗಳು ಈ ಐಟಂ ಡ್ಯಾನ್ಸ್ಗೆ ಸಾಕ್ಷಿಯಾಗಿದ್ದರು. ಡ್ಯಾನ್ಸ್ ಮಾಡಲೆಂದೇ ಯುವತಿಯನ್ನು ಮುಂಬೈನಿಂದ ಕರೆಸಲಾಗಿತ್ತು ಎಂಬ ಆರೋಪವೂ ಇದೆ. ಈ ಟ್ಯಾನ್ಸ್ ಪ್ರಕರಣದ ಬಗ್ಗೆ ತನಿಖೆ ನಡೆಸಲು ಬೆಂಗಳೂರಿನಿಂದ ವಿಶೇಷ ತಂಡ ಆಗಮಿಸಲಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications