JDS-BJP Alliance: ಜೆಡಿಎಸ್ ಸೆಕ್ಯೂಲರ್ ಪದ ತೆಗೆಯುವುದು ಸೂಕ್ತ: ಜಮೀರ್ ಅಹಮದ್ ಕಿಡಿ
ಬೆಂಗಳೂರು,ಸೆಪ್ಟೆಂಬರ್ 23: ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷ ಕ್ಕೆ ಅನುಕೂಲ ಆಗಲಿದ್ದು, ಇದೀಗ ಜೆಡಿಎಸ್ ಬಿಜೆಪಿ ಬಿ ಟೀಮ್ ಎಂಬುದು ಸಾಬೀತಾಗಿದ್ದು, ಜೆಡಿಎಸ್ ಇನ್ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಜಮೀರ್ ಅಹಮದ್ ಖಾನ್ ಅವರು, ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದ್ದು, ಜೆಡಿಎಸ್ ಇನ್ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ಹೇಳಿದ್ದಾರೆ. ಅಲ್ಲದೇ 2019 ರಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ನಾವು ಪ್ರತ್ಯೇಕ ವಾಗಿ ಹೋಗಿದ್ದರೆ ಕನಿಷ್ಠ ಹತ್ತು ಸ್ಥಾನ ಗೆಲ್ಲುತ್ತಿದ್ದೆವು. ಜೆಡಿಎಸ್ ಜತೆ ಹೋಗಿದ್ದಕ್ಕೆ ಒನ್ ಡಿಜಿಟ್ ಗೆ ಇಳಿದೆವು. 2024 ರ ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಸ್ಥಿತಿ ಯೂ ಇದೇ ಆಗಲಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ನಾಯಕರ ಜೊತೆಗೆ ಮೈತ್ರಿ ಮಾತುಕತೆಗೆ ದೆಹಲಿಗೆ ಹೋಗಿದ್ದಾರೆ. ಈ ಮೈತ್ರಿ ಮಾತುಕತೆ ಗೆ ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಕರೆದಿಲ್ಲ. ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ ಎಂದು ಕರೆದಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಪ್ರಶ್ನಿಸಿದ್ದಾರೆ.
ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ. ಹಿಂದೆ ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದಕ್ಕೆ ನನ್ನ ಒಪ್ಪಿಗೆ ಇರಲಿಲ್ಲ ಎಂದು ಹೇಳಿದ್ದ ಮಾಜಿ ಪ್ರಧಾನಿ ದೇವೇಗೌಡರು ಇದೀಗ ಏನು ಹೇಳುತ್ತಾರೆ. ಮೈತ್ರಿ ಬಗ್ಗೆ ಅವರು ಮೌನ ವಹಿಸಿರುವುದು ಯಾಕೆ ಎಂದು ಕೇಳಿದ್ದಾರೆ.
ಜೆಡಿಎಸ್ -ಬಿಜೆಪಿ ಮೈತ್ರಿ ಯಿಂದ ಇದೀಗ ಕಾಂಗ್ರೆಸ್ ಪಕ್ಷ ಒಂದೇ ಜಾತ್ಯತೀತ ಎಂಬುದು ಸಾಬೀತಾಗಿದೆ. ಯಾವುದೇ ಸಿದ್ಧಾಂತ ಇಲ್ಲದ ಮೈತ್ರಿ ಎಂಬುದು ರಾಜ್ಯದ ಜನತೆಗೂ ಸ್ಪಷ್ಟತೆ ಸಿಕ್ಕಿದೆ. ಮೈತ್ರಿಯಿಂದ ಕಾಂಗ್ರೆಸ್ ಗೆ ಲಾಭ ಆಗಲಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕುರಿತು ವಾಗ್ದಾಳಿ ನಡೆಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications