ಅಮಾನತ್ ಬ್ಯಾಂಕ್ ಅವ್ಯವಹಾರ, ಉಪವಾಸ ಕೂತ ಜಾಫರ್ ಷರೀಫ್
ಬೆಂಗಳೂರು, ಮೇ 06 : ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅಮಾನತ್ ಬ್ಯಾಂಕ್ ಅವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ಅವರ ಬೇಡಿಕೆಯಾಗಿದೆ.
ಶಿವಾಜಿನಗರದಲ್ಲಿರುವ ಅಮಾನತ್ ಕೋ ಆಪರೇಟಿವ್ ಬ್ಯಾಂಕ್ ಮುಂದೆ ಗುರುವಾರ ಸಿ.ಕೆ.ಜಾಫರ್ ಷರೀಫ್ ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಇಂದು ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. 1975ರ ಸುಮಾರಿಗೆ ಸ್ಥಾಪನೆಯಾದ ಬ್ಯಾಂಕ್ನಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ. [ಕೆನರಾ ಜೊತೆ ಅಮಾನತ್ ಬ್ಯಾಂಕ್ ವಿಲೀನ]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜಾಫರ್ ಷರೀಫ್ ಅವರು ಹಗರಣದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅವರು ಇದುವರೆಗೂ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಉಪವಾಸ್ ಸತ್ಯಾಗ್ರಹ ಆರಂಭಿಸಿದ್ದಾರೆ. [ಅಮಾನತ್ ವಿಲೀನಕ್ಕೆ ಕೆನರಾ ಸಮ್ಮತಿ]
ಏನಿದು ಅವ್ಯವಹಾರ? : 1975ರ ಸುಮಾರಿಗೆ ಆರಂಭವಾದ ಅಮಾನತ್ ಕೋ ಆಪರೇಟಿವ್ ಬ್ಯಾಂಕ್ 1998ರ ತನಕ ಸರಿಯಾಗಿ ನಡೆಯುತ್ತಿತ್ತು. ಆದರೆ, ನಂತರ ಬ್ಯಾಂಕ್ ದಿವಾಳಿಯಾಯಿತು. ಬ್ಯಾಂಕ್ ಲೆಕ್ಕಪತ್ರಗಳ ತಪಾಸಣೆ ನಡೆಸಿದ್ದ ಸಹಕಾರಿ ಸಂಘಗಳ ನೋಂದಣಿ ಇಲಾಖೆಯು ಅವ್ಯವಹಾರ ಪತ್ತೆ ಹಚ್ಚಿತ್ತು.
ಬ್ಯಾಂಕ್ನಲ್ಲಿ 102 ಕೋಟಿ ಬೋಗಸ್ ಸಾಲ ಮತ್ತು 50 ಕೋಟಿ ಬಡ್ಡಿ ಹಣ ದುರುಪಯೋಗವಾಗಿದೆ. ತಪ್ಪಿತಸ್ಥರಿಂದ ಹಣ ವಸೂಲಿ ಮಾಡಲು ನಿರ್ಧರಿಸಿದ ಸಹಕಾರಿ ಸಂಘಗಳ ನೋಂದಣಿ ಇಲಾಖೆಯು ಬ್ಯಾಂಕ್ ಆಡಳಿತ ಮಂಡಳಿಯನ್ನು ರದ್ದುಪಡಿಸಿ ಆಡಳಿತಾಧಿಕಾರಿ ನೇಮಿಸಿತ್ತು. ಆದರೆ, ಹಣ ಮಾತ್ರ ಇನ್ನೂ ವಸೂಲಿಯಾಗಿಲ್ಲ.
ಅಮಾನತ್ ಬ್ಯಾಂಕ್ ನಲ್ಲಿ ಒಟ್ಟು 2.20 ಲಕ್ಷ ಗ್ರಾಹಕರಿದ್ದು, ಅದರಲ್ಲಿ 90 ಸಾವಿರ ಖಾತೆದಾರರಿದ್ದಾರೆ. ಹಣ ವಸೂಲಿ ಆಗದಿರುವುದಕ್ಕೆ ಅವರು ಆತಂಕಗೊಂಡಿದ್ದಾರೆ. ಬ್ಯಾಂಕ್ನಲ್ಲಿ ನಡೆದ ಅವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಷರೀಫ್ ಪ್ರತಿಭಟನೆ ಆರಂಭಿಸಿದ್ದಾರೆ.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ











Click it and Unblock the Notifications