ಕಾಂಗ್ರೆಸ್ ಪಕ್ಷಕ್ಕೆ ಜಾಫರ್ ಷರೀಫ್ ಗುಡ್ ಬೈ!
ಬೆಂಗಳೂರು, ಮಾ. 26 : ಕಾಂಗ್ರೆಸ್ ಹಿರಿಯ ಮುಖಂಡ ಜಾಫರ್ ಷರೀಫ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಪಕ್ಷದೊಂದಿಗಿನ ದಶಕಗಳ ಸಂಬಂಧವನ್ನು ಕಡಿದುಕೊಂಡಿದ್ದಾರೆ. ಷರೀಫ್ ಅವರು ಯಾವುದೇ ಪಕ್ಷ ಸೇರದೆ, ಅಭ್ಯರ್ಥಿ ಪರವಾಗಿ ಪ್ರಚಾರ ಮಾಡದೆ ತಟಸ್ಥವಾಗಿ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ಮೆಕ್ಕಾ ಪ್ರವಾಸದಲ್ಲಿರುವ ಜಾಫರ್ ಷರೀಫ್ ಮಂಗಳವಾರ ಅಲ್ಲಿಂದಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಷರೀಫ್ ಅವರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ. ಅವರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಜಾಫರ್ ಷರೀಫ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಹಬ್ಬಿದ್ದವು. ಆದರೆ, ಭಾನುವಾರ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಷರೀಫ್ ಜೆಡಿಎಸ್ ಸೇರುವ ಸುದ್ದಿಗಳಿಗೆ ತೆರೆ ಎಳೆದಿದ್ದರು. [ಷರೀಫ್ ಪಕ್ಷ ಬಿಡೋಲ್ಲ, ಜೆಡಿಎಸ್ ಲೆಕ್ಕಾ ಉಲ್ಟಾ]
ಆದರೆ, ಮಂಗಳವಾರ ಮೆಕ್ಕಾದಿಂದ ಫ್ಯಾಕ್ಸ್ ಮೂಲಕ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಷರೀಫ್ ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ತೊರೆದಿರುವ ಷರೀಫ್ ಜೆಡಿಎಸ್ ಸೇರಿದಂತೆ ಯಾವುದೇ ಇತರ ಪಕ್ಷಗಳನ್ನು ಸೇರುವುದಿಲ್ಲ, ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ತಿಳಿದುಬಂದಿದೆ.
ಮಾ. 19ರಿಂದ ಮೆಕ್ಕಾ ಯಾತ್ರೆಯಲ್ಲಿರುವ ಷರೀಫ್ ಅವರು ಮುಂದಿನ 15 ರಿಂದ 20 ದಿನಗಳ ಕಾಲ ಮೆಕ್ಕಾ ಹಾಗೂ ಮದೀನಾಗಳಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದುಬಂದಿದೆ. ಬಹುತೇಕ ಚುನಾವಣಾ ಪ್ರಕ್ರಿಯೆ ಕರ್ನಾಟದಲ್ಲಿ ಮುಗಿದ ಬಳಿಕ ಅವರು ವಾಪಸ್ ಬರುವ ಸಾಧ್ಯತೆ ಇದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]
ದಶಕಗಳ ಸಂಬಂಧ : ಕಾಂಗ್ರೆಸ್ ಪಕ್ಷದೊಂದಿಗೆ ಜಾಫರ್ ಷರೀಫ್ ಅವರದ್ದು ದಶಕಗಳ ಸಂಬಂಧ ಇಂದಿರಾಗಾಂಧಿ ನಿಕಟವರ್ತಿಯಾಗಿದ್ದ ಷರೀಫ್, ಬೆಂಗಳೂರು ಉತ್ತರದಿಂದ 7 ಬಾರಿ ಹಾಗೂ ಕನಕಪುರ ಕ್ಷೇತ್ರದಿಂದ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದರು. 1991-95ರ ವರೆಗೆ ಕೇಂದ್ರ ರೈಲ್ವೆ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈ ತಪ್ಪಿತ್ತು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications