Get Updates
Get notified of breaking news, exclusive insights, and must-see stories!

ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌ ಸ್ಪರ್ಧೆ ಫಿಕ್ಸ್:‌ ಯಡಿಯೂರಪ್ಪ ಕೊಟ್ಟ ಅಭಯವೇನು?

ಬೆಂಗಳೂರು, ಮಾರ್ಚ್ 16: ಲೋಕಸಮರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಆಡಳಿತರೂಢ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಕಮಲ-ದಳ ನಾಯಕರು ಮೈತ್ರಿಯಾಗಿದ್ದು, ಸದ್ಯ 20 ಕ್ಷೇತ್ರಗಳ ಅಭ್ಯರ್ಥಿಯನ್ನ ಬಿಜೆಪಿ ಹೈಕಮಾಂಡ್‌ ಘೋಷಿಸಿದೆ. ಉಳಿದ 8 ಕ್ಷೇತ್ರಗಳ ಫೈಕಿ ಬೆಳಗಾವಿ ಅಭ್ಯರ್ಥಿಯನ್ನ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

ಹೌದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಹಿನ್ನೆಲೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಇದೀಗ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದು, ಧಾರವಾರ, ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದರು.ಆದರೆ, ಬಿಜೆಪಿ ಹೈಕಮಾಂಡ್‌ ಮರಳಿ ಕುಂದನಗರ ಬೆಳಗಾವಿಯಲ್ಲಿ ಕಮಲ ಅರಳಿಸಲು ಮುಂದಾಗಿದೆ. ಹೀಗಾಗಿ ಬೆಳಗಾವಿಯ ಹಾಲಿ ಸಂಸದೆಯಾಗಿರುವ ಮಂಗಳ ಅಂಗಡಿ ಅವರ ವಿರುದ್ಧವಾಗಿ ಕ್ಷೇತ್ರದಲ್ಲಿ ಉತ್ತಮ ಅಲೆ ಇಲ್ಲ. ಹೀಗಾಗಿ ಜಗದೀಶ್‌ ಶೆಟ್ಟರ್‌ ಅವರನ್ನ ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌ ಹಾಕಿಕೊಂಡಿದೆ.

Jagadish Shettar is contesting from Belagavi Lok Sabha constituency Says BS Yediyurappa

ಈಗಾಗಲೇ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಟಿಕೆಟ್‌ ಘೋಷಿಸಿರುವ ಬಿಜೆಪಿ ಹೈಕಮಾಂಡ್‌ ಇನ್ನೂ 8 ಕ್ಷೇತ್ರಗಳ ಟಿಕೆಟ್‌ ಬಾಕಿ ಉಳಿದಿದೆ. ಈ 8 ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆ ಮಂಡ್ಯ, ಹಾಸನ, ಹಾಗೂ ಕೋಲಾರ ಕ್ಷೇತ್ರವ್ನ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ. ಚಿತ್ರದುರ್ಗ, ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ರಾಯಚೂರು ಕ್ಷೇತ್ರಗಳಲ್ಲಿ ಯಾರನ್ನ ಅಭ್ಯರ್ಥಿಯನ್ನ ಕಣಕ್ಕಿಳಿಸುವ ಕುರಿತು ಹೆಚ್ಚು ಗೊಂದಲಗಳು ಸೃಷ್ಟಿಯಾಗಿದ್ದು, ಬೆಳಗಾವಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನ ಕಣಕ್ಕಿಳಿಸುವುದಾಗಿ ಯಡಿಯೂರಪ್ಪ ಅವರು ಹೇಳಿದ್ದಾರೆ.

ಈ ಕುರಿತು ಮಾಜಿ ಮುಖ್ಯಮಂತ್ರಿಯಾದ ಬಿ ಎಸ್‌ ಯಡಿಯೂರಪ್ಪ ಅವರು ಮಾತನಾಡಿ, ಜಗದೀಶ್‌ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧೆ ಮಾಡಲು ಇಷ್ಟ ಇರಲಿಲ್ಲ. ನಾನು ಕರೆದು ಮಾತಾಡಿದ್ದೇನೆ. ಕೊನೆಗೆ ಅವರು ಬೆಳಗಾವಿಯಿಂದ ಸ್ಪರ್ಧೆ ಗೆ ಒಪ್ಪಿಕೊಂಡಿದ್ದಾರೆ. ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ನಾನು ಶಟ್ಟರ್‌ ಅವರ ಜೊತೆಗೆ ಮಾತನಾಡಿದ್ದೇನೆ, ನೀವು ಸ್ಪರ್ಧೆ ಮಾಡಿದರೇ ಗೆಲ್ಲುವು ನಮ್ಮದೆ ಎಂಬ ಬಗ್ಗೆ ಚರ್ಚೆ ಮಾಡಿದ್ದೇನೆ. ಎಲ್ಲಾರು ಒಟ್ಟಾಗಿ ಕೈ ಜೋಡಿಸೋಣ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಯಡಿಯೂರಪ್ಪ ಅವರು ಅಭಯ ನೀಡಿದ್ದಾರೆ.

Jagadish Shettar is contesting from Belagavi Lok Sabha constituency Says BS Yediyurappa

ಶೆಟ್ಟರ್‌ ಅವರನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅವರು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಹೇಗೆ ಎನ್ನುವ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಬಗ್ಗೆ ಬಿ ಎಸ್‌ ಯಡಿಯೂರಪ್ಪ ಅವರು ಸಹ ಸ್ಪರ್ಧೆ ಮಾಡಿ ಗೆಲ್ಲುತ್ತೀರಿ ಎಂದು ಹೇಳಿದ್ದು, ಯಡಿಯೂರಪ್ಪ ಅವರು ಕೊಟ್ಟ ಅಭಯದ ಮೇಲೆ ಅಂತಿಮವಾಗಿ ಶೆಟ್ಟರ್ ಬೆಳಗಾವಿಯಿಂದ ಕಣಕ್ಕಿಳಿಯಲು ಸಮ್ಮತಿ ಸೂಚಿಸಿದ್ದಾರೆ.

ಬೆಳಗಾವಿ ಕ್ಷೇತ್ರದಿಂದ ಜಗದೀಶ್​ ಶೆಟ್ಟರ್​ ಅವರಿಗೆ ಬಿಜೆಪಿ ಟಿಕೆಟ್​ ಫಿಕ್ಸ್ ಆಗಿದೆ. ಇತ್ತ ಹಾಲಿ ಬೆಳಗಾವಿ ಸಂಸದೆಯಾಗಿರುವ ಮಂಗಳಾ ಅಂಗಡಿ ಅವರು ಸಹ ಜಗದೀಶ್‌ ಶೆಟ್ಟರ್‌ ಅವರಿಗೆ ಹೈಕಮಾಂಡ್‌ ಟಿಕೆಟ್‌ ಕೊಡಲು ನಿರ್ಧರಿಸಿದೆ. . ಶೆಟ್ಟರ್​ಗೆ ಟಿಕೆಟ್ ಕೊಟ್ಟರೆ ಅವರ ಜತೆ ಪ್ರಚಾರ ಮಾಡುತ್ತೇನೆ ಎಂದು ಮಂಗಳ ಅಂಗಡಿ ಅವರು ಹೇಳಿದ್ದು, ಇಂದು ಅಥವಾ ನಾಳೆ ಬಿಜೆಪಿಯ ಮೂರನೇ ಪಟ್ಟಿ ಪ್ರಕಟವಾಗಲಿದ್ದು, ಬಾಕಿ ಉಳಿದ ಐದು ಕ್ಷೇತ್ರಗಳ ಹೆಸರು ಸಹ ಘೋಷಣೆಯಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+