Get Updates
Get notified of breaking news, exclusive insights, and must-see stories!

Jagadish Shettar: ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಲಿಂಗಾಯತರ ಸಭೆ: ಜಗದೀಶ್‌ ಶೆಟ್ಟರ್‌ ಏನಂದ್ರು?

ಹುಬ್ಬಳ್ಳಿ, ಫೆಬ್ರವರಿ 06: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ವಿಚಾರವಾಗಿ ಲಿಂಗಾಯತರು ಪ್ರತ್ಯೇಕ ಸಭೆ ಮಾಡಿಲ್ಲ. ವೈಯಕ್ತಿಕ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಯತ್ನಾಳ್ ಮತ್ತಿತರರು ನೀಡಿರೋ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ಅವರು ಹೇಳಿದರು.

ಈ ಕುರಿತು ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಜಗದೀಶ್‌ ಶೆಟ್ಟರ್‌ ಅವರು, ಈಗಾಗಲೇ ರಾಜ್ಯಧ್ಯಕ್ಷ ಸ್ಥಾನದಲ್ಲಿ ಒಬ್ಬರು ಇದ್ದಾರೆ. ಈಗ ಚುನಾವಣೆಯೂ ಬಂದಿದೆ, ಯಾರನ್ನು ನೇಮಕ ಮಾಡಬೇಕು, ಯಾರನ್ನು ಬೇಡ ಅನ್ನೋದರ ಬಗ್ಗೆ ಹೈಕಮಾಂಡ್ ಸರ್ವಾನುಮತದ ನಿರ್ಣಯ ಕೈಗೊಳ್ಳುತ್ತಾರೆ ಎಂದು ಹೇಳಿದರು.

Jagadish Shettar Reaction To The Lingayat Meeting Regarding Change Of President

ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮದ ಮುಂದೆ ಚರ್ಚಿಸಲ್ಲ‌ ಎಂದ ಅವರು, ಜಗದೀಶ್ ಶೆಟ್ಟರ್ ರಾಜ್ಯಾಧ್ಯಕ್ಷರಾಗ್ತಾರಾ ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಕೊಡುವ ಜವಾಬ್ದಾರಿಯನ್ನು ಅಷ್ಟೇ ನಿರ್ವಹಿಸುತ್ತೇನೆ ಎಂದು ಹೇಳಿದರು.

ಮೋದಿಯವರನ್ನು ಬದಲಾಯಿಸುವ ಚರ್ಚೆ ನಡೆದಿದೆ ಎಂಬ ಸಂತೋಷ್ ಲಾಡ್ ಹೇಳಿಕೆಗೆ ತಿರುಗೇಟು ನೀಡಿದ್ದು, ಸಂತೋಷ ಲಾಡ್ ಅವರೇ ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ನಂತರ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದರು. ಪ್ರಧಾನಿ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿ‌.‌ ಕಾಂಗ್ರೆಸ್ ನವರಿಗೆ ಮುಸ್ಲಿಂ, ಅಲ್ಪಸಂಖ್ಯಾತರನ್ನು ಬಿಟ್ಟರೇ ಬೇರೆ ಗೊತ್ತಿಲ್ಲ‌. ದೆಹಲಿಯ ಎಕ್ಸಿಟ್ ಪೋಲ್ ಏನಾಗಿದೆ ಅಂತ ಎಲ್ಲರಿಗೂ ಗೊತ್ತು‌ ಎಂದು ತಿಳಿಸಿದರು.

ದೆಹಲಿಯಲ್ಲಿ ಕಾಂಗ್ರೆಸ್ ಗೆ ಒಂದು ಅಥವಾ ಎರಡು ಸೀಟು ಬಂದರೆ ದೊಡ್ಡ ಮಾತು‌.‌ ನರೇಂದ್ರ ಮೋದಿ ಬದಲಾವಣೆಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ ನೀವು ಮೊದಲು ರಾಹುಲ್ ಗಾಂಧಿಯನ್ನು ಬದಲಾಯಿಸಿ. ಆಗಲಾದರೂ ಕಾಂಗ್ರೆಸ್ ಸುಧಾರಿಸುತ್ತದೆ. ಮೋದಿ ಯಂತಹ ದೊಡ್ಡ ವ್ಯಕ್ತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡುವುದು ಸರಿಯಲ್ಲ. ಮೋದಿ ಬದಲಾವಣೆ ಬಗ್ಗೆ ಯಾರು ಮಾತನಾಡಿದ್ದಾರೆ ಅಂತ ಬಹಿರಂಗಪಡಿಸಲಿ. ಎಲ್ಲಿ ಚರ್ಚೆ ನಡೆದಿದೆ ಅಂತ ಬಹಿರಂಗವಾಗಿ ಹೇಳಲಿ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಜಗದೀಶ್‌ ಶೆಟ್ಟರ್‌ ಅವರು ಆಗ್ರಹಿಸಿದರು.

ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸೋಕೆ ಆಗಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಅದರಿಂದಾಗಿಯೇ ಕಿರುಕುಳ ಮತ್ತಷ್ಟು ಹೆಚ್ಚಳವಾಗಲಿದೆ. ಸರ್ಕಾರ ಕಾನೂನು ಮಾಡೋದ್ರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಮಾಡಲು ಆಗಲ್ಲ. ಬಡ, ಮಧ್ಯಮ ವರ್ಗದವರಿಗೆ ಸುಲಭವಾಗಿ ಸಾಲ ಸಿಗುವ ವ್ಯವಸ್ಥೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳನ್ನು ಪರಿಣಾಮಕಾರಿ ಜಾರಿಗೆ ತರಬೇಕು ಎಂದರು.

ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವಂತಾಗಬೇಕು. ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಟ್ಟರೆ ಮೈಕ್ರೋ ಫೈನಾನ್ಸ್ ಮತ್ತು ಖಾಸಗಿ ಲೇವಾದೇವಿದಾರರ ಅಡ್ರೆಸ್ಸೇ ಇರಲ್ಲ. ಸರ್ಕಾರ ಕಠಿಣ ಕ್ರಮ ಕೈಗೊಂಡಷ್ಟು ಬಡವರಿಗೆ ಸಾಲ ಸಿಗದಂತಾಗುತ್ತದೆ. ಬಡವರು ಬೀದಿಗೆ ಬಿದ್ದು, ಆತ್ಮಹತ್ಯೆಗಳು ಮತ್ತೆ ಹೆಚ್ಚಾಗುತ್ತೆ. ಸಾಲ ಸುಲುಭವಾಗಿ ಸಿಗುವಂತಹ ಪರ್ಯಾಯ ವ್ಯವಸ್ಥೆ ತರಬೇಕು. ಇರೋ ಕಾನೂನನ್ನೇ ಜಾರಿಗೆ ತಂದರೆ ಸಾಕು. ಪೊಲೀಸ್ ವ್ಯವಸ್ಥೆ ಮತ್ತು ಖಾಸಗಿ ಲೇವಾದೇವಿದಾರರ ನಡುವೆ ಒಳ ಒಪ್ಪಂದವಿದೆ. ಇದ್ದಂತಹ ಕಾನೂನಿನಲ್ಲಿ ಮನಿಲೆಂಡರ್ಸ್ ನ್ನು ಬಂಧಿಸಬಹುದು ಎಂದು ಸಲಹೆ ನೀಡಿದರು.

ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಪ್ರಯೋಜನವಿಲ್ಲ. ಹಲವೆಡೆ ಆತ್ಮಹತ್ಯೆಗಳು ಮುಂದುವರೆದಿದೆ. ಸರ್ಕಾರ ಯಾವ ಅಧಿಕಾರಿ ಮೇಲೆ ಕ್ರಮ ಕೈಗೊಂಡಿದೆ..?ಮುಖ್ಯಮಂತ್ರಿ ಹೇಳಿದರು ಕಾನೂನು ಜಾರಿಗೆ ಬರ್ತಿಲ್ಲ. ಕಾನೂನು ಜಾರಿಗೆ ತರದ ಅಧಿಕಾರಿಗಳನ್ನು ಹೊಣೆ ಮಾಡಿ. ಒಬ್ಬ ಅಧಿಕಾರಿಯನ್ನಾದರೂ ಅಮಾನತ್ತು ಮಾಡಿ ಸಿಎಂ ಅವರದ್ದು ಖಡಕ್ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+