ಡಿಸಿಎಂ ಡಿಕೆಶಿ ಭೇಟಿಯಾದ ಜಗನ್ ಮೋಹನ್ ರೆಡ್ಡಿ ಸಹೋದರಿ
ಬೆಂಗಳೂರು, ಮೇ 29; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತಕ್ಕಿಂತ ಅಧಿಕ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ವಿವಿಧ ರಾಜ್ಯಗಳ ನಾಯಕರು ನೂತನ ಸರ್ಕಾರಕ್ಕೆ ಶುಭ ಹಾರೈಕೆ ಮಾಡುತ್ತಿದ್ದಾರೆ.
ಸೋಮವಾರ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ರೆಡ್ಡಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿದರು.

ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ರೆಡ್ಡಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ವೈ. ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕರು ಅವರು. ಕೆ. ಚಂದ್ರಶೇಖರಾವ್ ಸರ್ಕಾರದ ವಿರುದ್ಧ ಹೋರಾಟಗಳನ್ನು ಮಾಡುವ ಮೂಲಕ ಈ ವರ್ಷ ನಡೆಯುವ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ, ಅವರ ಕುಟುಂಬ ರಾಜಕೀಯದ ಹೊರತಾಗಿಯೂ ಕರ್ನಾಟಕದ ಜೊತೆ ಉತ್ತಮ ಬಾಂಧವ್ಯ ಹೊಂದಿದೆ. ಬೆಂಗಳೂರಿನಲ್ಲಿ ಐಷಾರಾಮಿ ಬಂಗಲೆಯನ್ನು ಜಗನ್ ಹೊಂದಿದ್ದಾರೆ. ರಾಜ್ಯದಲ್ಲಿ ಅನೇಕ ಉದ್ಯಮಗಳನ್ನು ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ವೈ. ಎಸ್. ಶರ್ಮಿಳಾ ರೆಡ್ಡಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿಯಾಗಿ ಸೌಹಾರ್ದಯುತವಾಗಿ ಶುಭ ಕೋರಿದರು. ಡಿ. ಕೆ. ಶಿವಕುಮಾರ್ ಈ ಕುರಿತ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ವೈ. ಎಸ್. ಶರ್ಮಿಳಾ ರೆಡ್ಡಿ; ವೈ. ಎಸ್. ಜಗನ್ ಮೋಹನ್ ರೆಡ್ಡಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ. ಆಂಧ್ರ ಪ್ರದೇಶದಲ್ಲಿ ಅವರ ಪಕ್ಷ ಅಧಿಕಾರದಲ್ಲಿದೆ. ಜಗನ್ ಮೋಹನ್ ರೆಡ್ಡಿ ತಂಗಿ ವೈ. ಎಸ್. ಶರ್ಮಿಳಾ ತೆಲಂಗಾಣ ರಾಜ್ಯದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅದಕ್ಕಾಗಿಯೇ ಅವರು ತಂದೆಯ ಹೆಸರನ್ನು ಒಳಗೊಂಡ ವೈಎಸ್ಆರ್ ತೆಲಂಗಾಣ ಪಕ್ಷ ಸ್ಥಾಪನೆ ಮಾಡಿದ್ದಾರೆ. ತೆಲಂಗಾಣದಲ್ಲಿ ರಾಜಕೀಯ ನಡೆಸುವ ಕುರಿತು ಅಣ್ಣ ಮತ್ತು ತಂಗಿಯ ನಡುವೆ ಭಿನ್ನಾಭಿಪ್ರಾಯವಿದೆ.
ತೆಲಂಗಾಣದಲ್ಲಿ ರಾಜಕೀಯ ಪಕ್ಷ ಸ್ಥಾಪನೆ ಮಾಡಲು ಜಗನ್ ಮೋಹನ್ ರೆಡ್ಡಿ ಒಪ್ಪಿಗೆ ನೀಡಿರಲಿಲ್ಲ ಎಂಬ ಸುದ್ದಿ ಇದೆ. ಆದರೆ ಪಕ್ಷದ ನಾಯಕರ ಪ್ರಕಾರ ವೈ. ಎಸ್. ಶರ್ಮಿಳಾ ಯಾವುದೇ ತೀರ್ಮಾನ ಕೈಗೊಳ್ಳಲು ಸ್ವತಂತ್ರರು. ಆದ್ದರಿಂದ ತಂದೆಯ ಹುಟ್ಟಿದ ಹಬ್ಬದ ದಿನವೇ ತೆಲಂಗಾಣದಲ್ಲಿ ಅವರು ರಾಜಕೀಯ ಪಕ್ಷವನ್ನು ಆರಂಭಿಸಿದ್ದಾರೆ.
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಈ ವರ್ಷದ ಡಿಸೆಂಬರ್ ವೇಳೆಗೆ ಚುನಾವಣೆ ನಡೆಯಲಿದೆ. ಸದ್ಯ ರಾಜ್ಯದಲ್ಲಿ ಕೆ. ಚಂದ್ರಶೇಖರರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷ ಅಧಿಕಾರದಲ್ಲಿದೆ. ರಾಷ್ಟ್ರ ರಾಜಕೀಯದ ಮೇಲೆಯೂ ಕಣ್ಣಿಟ್ಟಿರುವ ಅವರು ಟಿಆರ್ಎಸ್ ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂದು ಬದಲಾವಣೆ ಮಾಡಿದ್ದಾರೆ.
2019ರ ಚುನಾವಣೆಯಲ್ಲಿ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರ ನೇತೃತ್ವದ ಸರ್ಕಾರ ಹೀನಾಯ ಸೋಲು ಕಂಡು ವೈಎಸ್ಆರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ವೈ. ಎಸ್. ಶರ್ಮಿಳಾ ಅವರ ಪಾತ್ರವೂ ಮಹತ್ವದ್ದಾಗಿದೆ. ಸುಮಾರು 1,600 ಕಿ. ಮೀ. ಸಂಚಾರ ನಡೆಸಿ, 39 ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿ ಅವರು ಪಕ್ಷವನ್ನು ಸಂಘಟನೆ ಮಾಡಿದ್ದರು. ಆದ್ದರಿಂದ ತೆಲಂಗಾಣ ರಾಜ್ಯಕ್ಕೆ ಅವರು ಆಗಮಿಸಿದ್ದು, ಸಹಜವಾಗಿಯೇ ಇತರ ಪಕ್ಷಗಳ ಆತಂಕಕ್ಕೆ ಕಾರಣವಾಗಿದೆ.
-
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications