ಡಿಸಿಎಂ ಡಿಕೆಶಿ ಭೇಟಿಯಾದ ಜಗನ್ ಮೋಹನ್ ರೆಡ್ಡಿ ಸಹೋದರಿ
ಬೆಂಗಳೂರು, ಮೇ 29; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತಕ್ಕಿಂತ ಅಧಿಕ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ವಿವಿಧ ರಾಜ್ಯಗಳ ನಾಯಕರು ನೂತನ ಸರ್ಕಾರಕ್ಕೆ ಶುಭ ಹಾರೈಕೆ ಮಾಡುತ್ತಿದ್ದಾರೆ.
ಸೋಮವಾರ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ರೆಡ್ಡಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿದರು.

ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ರೆಡ್ಡಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ವೈ. ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕರು ಅವರು. ಕೆ. ಚಂದ್ರಶೇಖರಾವ್ ಸರ್ಕಾರದ ವಿರುದ್ಧ ಹೋರಾಟಗಳನ್ನು ಮಾಡುವ ಮೂಲಕ ಈ ವರ್ಷ ನಡೆಯುವ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ, ಅವರ ಕುಟುಂಬ ರಾಜಕೀಯದ ಹೊರತಾಗಿಯೂ ಕರ್ನಾಟಕದ ಜೊತೆ ಉತ್ತಮ ಬಾಂಧವ್ಯ ಹೊಂದಿದೆ. ಬೆಂಗಳೂರಿನಲ್ಲಿ ಐಷಾರಾಮಿ ಬಂಗಲೆಯನ್ನು ಜಗನ್ ಹೊಂದಿದ್ದಾರೆ. ರಾಜ್ಯದಲ್ಲಿ ಅನೇಕ ಉದ್ಯಮಗಳನ್ನು ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ವೈ. ಎಸ್. ಶರ್ಮಿಳಾ ರೆಡ್ಡಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿಯಾಗಿ ಸೌಹಾರ್ದಯುತವಾಗಿ ಶುಭ ಕೋರಿದರು. ಡಿ. ಕೆ. ಶಿವಕುಮಾರ್ ಈ ಕುರಿತ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ವೈ. ಎಸ್. ಶರ್ಮಿಳಾ ರೆಡ್ಡಿ; ವೈ. ಎಸ್. ಜಗನ್ ಮೋಹನ್ ರೆಡ್ಡಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ. ಆಂಧ್ರ ಪ್ರದೇಶದಲ್ಲಿ ಅವರ ಪಕ್ಷ ಅಧಿಕಾರದಲ್ಲಿದೆ. ಜಗನ್ ಮೋಹನ್ ರೆಡ್ಡಿ ತಂಗಿ ವೈ. ಎಸ್. ಶರ್ಮಿಳಾ ತೆಲಂಗಾಣ ರಾಜ್ಯದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅದಕ್ಕಾಗಿಯೇ ಅವರು ತಂದೆಯ ಹೆಸರನ್ನು ಒಳಗೊಂಡ ವೈಎಸ್ಆರ್ ತೆಲಂಗಾಣ ಪಕ್ಷ ಸ್ಥಾಪನೆ ಮಾಡಿದ್ದಾರೆ. ತೆಲಂಗಾಣದಲ್ಲಿ ರಾಜಕೀಯ ನಡೆಸುವ ಕುರಿತು ಅಣ್ಣ ಮತ್ತು ತಂಗಿಯ ನಡುವೆ ಭಿನ್ನಾಭಿಪ್ರಾಯವಿದೆ.
ತೆಲಂಗಾಣದಲ್ಲಿ ರಾಜಕೀಯ ಪಕ್ಷ ಸ್ಥಾಪನೆ ಮಾಡಲು ಜಗನ್ ಮೋಹನ್ ರೆಡ್ಡಿ ಒಪ್ಪಿಗೆ ನೀಡಿರಲಿಲ್ಲ ಎಂಬ ಸುದ್ದಿ ಇದೆ. ಆದರೆ ಪಕ್ಷದ ನಾಯಕರ ಪ್ರಕಾರ ವೈ. ಎಸ್. ಶರ್ಮಿಳಾ ಯಾವುದೇ ತೀರ್ಮಾನ ಕೈಗೊಳ್ಳಲು ಸ್ವತಂತ್ರರು. ಆದ್ದರಿಂದ ತಂದೆಯ ಹುಟ್ಟಿದ ಹಬ್ಬದ ದಿನವೇ ತೆಲಂಗಾಣದಲ್ಲಿ ಅವರು ರಾಜಕೀಯ ಪಕ್ಷವನ್ನು ಆರಂಭಿಸಿದ್ದಾರೆ.
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಈ ವರ್ಷದ ಡಿಸೆಂಬರ್ ವೇಳೆಗೆ ಚುನಾವಣೆ ನಡೆಯಲಿದೆ. ಸದ್ಯ ರಾಜ್ಯದಲ್ಲಿ ಕೆ. ಚಂದ್ರಶೇಖರರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷ ಅಧಿಕಾರದಲ್ಲಿದೆ. ರಾಷ್ಟ್ರ ರಾಜಕೀಯದ ಮೇಲೆಯೂ ಕಣ್ಣಿಟ್ಟಿರುವ ಅವರು ಟಿಆರ್ಎಸ್ ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂದು ಬದಲಾವಣೆ ಮಾಡಿದ್ದಾರೆ.
2019ರ ಚುನಾವಣೆಯಲ್ಲಿ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರ ನೇತೃತ್ವದ ಸರ್ಕಾರ ಹೀನಾಯ ಸೋಲು ಕಂಡು ವೈಎಸ್ಆರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ವೈ. ಎಸ್. ಶರ್ಮಿಳಾ ಅವರ ಪಾತ್ರವೂ ಮಹತ್ವದ್ದಾಗಿದೆ. ಸುಮಾರು 1,600 ಕಿ. ಮೀ. ಸಂಚಾರ ನಡೆಸಿ, 39 ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿ ಅವರು ಪಕ್ಷವನ್ನು ಸಂಘಟನೆ ಮಾಡಿದ್ದರು. ಆದ್ದರಿಂದ ತೆಲಂಗಾಣ ರಾಜ್ಯಕ್ಕೆ ಅವರು ಆಗಮಿಸಿದ್ದು, ಸಹಜವಾಗಿಯೇ ಇತರ ಪಕ್ಷಗಳ ಆತಂಕಕ್ಕೆ ಕಾರಣವಾಗಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications