Jagdish Shettar Resigns: ಟಿಕೆಟ್ ಗಾಗಿ ಬಂಡಾಯ; ಸಂಧಾನ ವಿಫಲ! ಬಿಜೆಪಿಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್
ಬೆಂಗಳೂರು,ಏಪ್ರಿಲ್17: ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ರಾಜ್ಯ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ಗಾಗಿ ಬಿಜೆಪಿ ಪಾಳಯದಲ್ಲಿ ಬಂಡಾಯದ ಬೆಂಕಿ ಜೋರಾಗಿದ್ದು, ಸಾಲು ಸಾಲು ನಾಯಕರು ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಇದೀಗ ಜಗದೀಶ್ ಶೆಟ್ಟರ್ ಅವರು ಸಹ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆ ವಿಫಲಾದ ಕಾರಣ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದರು. ಇದೀಗ ಕಾಂಗ್ರೆಸ್ ನಾಯಕರು ನಡೆಸಿದ ಮಾತುಕತೆ ಸಕ್ಸಸ್ ಆಗಿರುವ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಲಿಂಗಾಯತ ನಾಯಕರ ಜೊತೆಗೆ ಜಗದೀಶ್ ಶೆಟ್ಟರ್ ಚರ್ಚೆ ನಡೆಸಿದ ಬಳಿಕ ಆಪ್ತ ಸಹಾಯಕರ ಮೂಲಕ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ.
ಭಾನುವಾರ ರಾತ್ರಿ ಬಿಜೆಪಿಗೆ ರಾಜಿನಾಮೆ ಘೋಷಿಸಿದ್ದ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅಧಿಕೃತವಾಗಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಶಿರಸಿಗೆ ಆಪ್ತ ಸಹಾಯಕರ ಮೂಲಕ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ.
ಇನ್ನೂ ರಾಜೀನಾಮೆ ಸಲ್ಲಿಕೆಗೂ ಮುನ್ನ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ, ಖುದ್ದು ಮನವೊಲಿಕೆಗೆ ಯತ್ನಿಸಲಾಯಿತು. ದೂರವಾಣಿ ಮೂಲಕ ಮಾತನಾಡಿದ ಬಳಿಕವೂ, ಒಪ್ಪದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ಇನ್ನೂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಜಗದೀಶ್ ಶೆಟ್ಟರ್ ಅವರನ್ನು ಕೇಂದ್ರದ ಸಚಿವರನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಹೇಳಿದ್ರೂ ಹಠಮಾಡಿ ಕಾಂಗ್ರೆಸ್ ಸೇರಲು ಹೊರಟಿರೋದು ಅಕ್ಷಮ್ಯ ಅಪರಾಧ. ನಾಡಿನ ಜನ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದರು. ಪಕ್ಷ ತೊರೆಯುತ್ತಿರೋದು ಯಾಕೆ, ನಾವು ಏನು ಕಡಿಮೆ ಮಾಡಿದ್ದೇವೆ? ಎಂದು ಶೆಟ್ಟರ್ ಅವರನ್ನ ಪ್ರಶ್ನಿಸಿದ್ದಾರೆ. ಶೆಟ್ಟರ್ ಅವರನ್ನು ಮಂತ್ರಿ, ವಿರೋಧ ಪಕ್ಷದ ನಾಯಕ,ಮುಖ್ಯಮಂತ್ರಿಯನ್ನಾಗಿಯೂ ಮಾಡಲಾಯಿತು, ಪಕ್ಷ ಎಲ್ಲ ಗೌರವ ಕೊಟ್ಟಿದೆ ಎಂದು ಶೆಟ್ಟರ್ ವಿರುದ್ದ ಅಸಮಾಧಾನ ಹೊರಹಾಕಿದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications