Breaking; ಕೆಎಸ್ಆರ್ಟಿಸಿ ಟಿಕೆಟ್ನಲ್ಲಿ ಜೈ ಮಹಾರಾಷ್ಟ್ರ ಬರಹ!
ಗದಗ, ಅಕ್ಟೋಬರ್ 05; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬಸ್ ಟಿಕೆಟ್ನಲ್ಲಿ ಜೈ ಮಹಾರಾಷ್ಟ್ರ ಎಂಬ ಮುದ್ರಣ ಕಂಡು ಜನರು ಆಕ್ರೋಶಗೊಂಡಿದ್ದಾರೆ.
ಗದಗ ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ಮೇಲಿನ ಬರಹದಲ್ಲಿ ಯಡವಟ್ಟು ಮಾಡಿಕೊಂಡಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಟಿಕೆಟ್ನಲ್ಲಿ ಮಹಾರಾಷ್ಟ್ರ ಪರವಾದ ಮುದ್ರಣ ಕಂಡು ಬಂದಿದೆ.
ಜೈ ಮಹಾರಾಷ್ಟ್ರ, ಮಹಾರಾಷ್ಟ್ರ ರಾಜ್ಯ ಪರಿವಾಹನ ಎಂದು ಟಿಕೆಟ್ನಲ್ಲಿ ಮುದ್ರಿಸಲಾಗಿದೆ. ಟಿಕೆಟ್ ನೋಡಿದ ಪ್ರಯಾಣಿಕರು ರಸ್ತೆ ಸಾರಿಗೆ ಸಂಸ್ಥೆ ವಿರುದ್ಧ ಆಕ್ರೋಶ ಹೊರ ಹಾಕಿದರು.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಿಂದ ಗದಗ ನಗರಕ್ಕೆ ಬರುವ ಬಸ್ನ ಟಿಕೆಟ್ ಮೇಲೆ ವಾ. ಕ. ರ. ಸಾ. ಸಂಸ್ಥೆ ಗದಗ ಘಟಕ ಎಂದು ಮುದ್ರಿಸಲಾಗಿದೆ. ಇದೇ ಟಿಕೆಟ್ನಲ್ಲಿ ಮಹಾರಾಷ್ಟ್ರ ಪರವಾದ ಬರಹ ಪತ್ತೆಯಾಗಿದೆ.
ಬಸ್ ಟಿಕೆಟ್ನ ಮಧ್ಯಭಾಗದಲ್ಲಿ ಮಹಾರಾಷ್ಟ್ರ ರಾಜ್ಯ ಪರಿವಾಹನ, ಜೈ ಮಹಾರಾಷ್ಟ್ರ ಎಂದು ಮುದ್ರಿಸಲಾಗಿದೆ. ತಪ್ಪಾಗಿ ಮುದ್ರಣವಾಗಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ.
ಜೈ ಮಹಾರಾಷ್ಟ್ರ ಬರಹ ಇರುವ ಟಿಕೆಟ್ ವಿತರಣೆ ಮಾಡುತ್ತಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ಟಿಕೆಟ್ ಮುದ್ರಣಗೊಂಡ ಬಳಿಕ ಅದನ್ನು ಪರಿಶೀಲನೆ ನಡೆಸದೇ ಸಿಬ್ಬಂದಿಗಳಿಗೆ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಟಿಕೆಟ್ನಲ್ಲಿ ರಾಜ್ಯದ ಲಾಂಛನವಾಗಿರುವ ಗಂಡಭೇರುಂಡ ಇರುತ್ತದೆ. ಆದರೆ ಗದಗದಲ್ಲಿ ನೀಡುತ್ತಿರುವ ಟಿಕೆಟ್ ಲಾಂಛನ ಇರುತ್ತದೆ. ಆದರೆ ಗದಗ ವಿಭಾಗದಿಂದ ನೀಡುತ್ತಿರುವ ಟಿಕೆಟ್ನಲ್ಲಿ ಮಾತ್ರ ಮಹಾರಾಷ್ಟ್ರ ಜೈ ಎಂದು ಇರುವ ಟಿಕೆಟ್ ಹಂಚಿಕೆಯಾಗಿದೆ. ಕೆಲವು ಬಸ್ಗಳಲ್ಲಿ ಮಾತ್ರ ಇಂತಹ ಟಿಕೆಟ್ ಹಂಚಿಕೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾಹಿತಿ ತಿಳಿದ ಬಳಿಕ ಕನ್ನಡಪರ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿದವು. ಗದಗ ನಗರದ ಹಳೆ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ, ಯಡವಟ್ಟು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications