ಜೈನ ಮುನಿ ಹತ್ಯೆ: ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ. ಅದರಲ್ಲಿ ತಪ್ಪೇನಿದೆ: ನಳಿನ್ಕುಮಾರ್ ಕಟೀಲ್
ಬೆಂಗಳೂರು, ಜುಲೈ 11: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ನಂದಿ ಪರ್ವತ ಆಶ್ರಮದ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಭೀಕರ ಹತ್ಯೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ.
ಇತ್ತೀಚೆಗೆ ಹತ್ಯೆಯಾದ, ಶ್ರೀ ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ ನಳಿನ್ಕುಮಾರ್ ಕಟೀಲ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ಮಾಹಿತಿ ಪಡೆಯಿತು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಹವನ್ನು 30 ಕಿಮೀ ಒಯ್ದು ಚಿಂದಿಚಿಂದಿ ಮಾಡಿದ್ದಾರೆ. ಕೊಳವೆಬಾವಿಯೊಳಗೆ ಹಾಕಿದ್ದು, 2 ದಿನಗಳ ಬಳಿಕ ವಿಷಯ ಹೊರಬಂದಿದೆ. ಇದರ ಹಿಂದೆ ಯಾವುದಾದರೂ ಶಕ್ತಿಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಆಗ್ರಹಿಸುವುದಾಗಿ ತಿಳಿಸಿದರು. ಇದರ ಹಿಂದಿರುವ ಯಾವುದೇ ಶಕ್ತಿಯ ಬಂಧನ, ಕಠಿಣ ಶಿಕ್ಷೆ ಆಗಬೇಕೆಂದು ಬಿಜೆಪಿ ಒತ್ತಾಯಿಸುವುದಾಗಿ ಹೇಳಿದರು.

ಒಬ್ಬ ಸಂತರ ಹತ್ಯೆ ಆದಾಗ ಎಲ್ಲ ಪಕ್ಷಗಳಿಗೆ ಜವಾಬ್ದಾರಿ ಇದೆ. ಸಂತರು, ಮಠಾಧೀಶರು ಈ ಭೀಕರ ಹತ್ಯೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ. ಸಮಾಜದಲ್ಲಿ ಎಲ್ಲರಿಗೂ ವಿಶ್ವಾಸ ಒದಗಿಸಲು ಸ್ಪಷ್ಟ, ಪಾರದರ್ಶಕ ತನಿಖೆ ಮಾಡಬೇಕು ಎಂದ ಅವರು, ಒಂದು ಹೆಸರನ್ನು ವಿಳಂಬವಾಗಿ ಎಫ್ಐಆರ್ನಲ್ಲಿ ಸೇರಿಸಿದ್ದರ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.
ಪಾರದರ್ಶಕವಾಗಿ ತನಿಖೆ ಮಾಡಿ ಸಂಶಯ ನಿವಾರಿಸಿ ಎಂದು ಅವರು ಒತ್ತಾಯಿಸಿದರು. ಪೊಲೀಸರ ಮೇಲೆ ವಿಶ್ವಾಸ ಇಲ್ಲದ ಕಾರಣ ಹಿಂದೆ ಹರ್ಷ ಮತ್ತು ಪ್ರವೀಣ್ ನೆಟ್ಟಾರ್ ಅವರ ಕೊಲೆಯ ತನಿಖೆಗಳನ್ನು ಎನ್ಐಎಗೆ ನೀಡಿರಲಿಲ್ಲ. ಅಂತರಜಿಲ್ಲೆ ಆರೋಪಿಗಳಿರುವ ಸಾಧ್ಯತೆ ಗಮನಿಸಿ ಮತ್ತು ಕೃತ್ಯದ ಹಿಂದಿನ ಎಲ್ಲ ಶಕ್ತಿಗಳನ್ನು ಪತ್ತೆ ಹಚ್ಚುವ ದೃಷ್ಟಿಯಿಂದ ತನಿಖೆಯನ್ನು ಹಸ್ತಾಂತರ ಮಾಡಿದ್ದೆವು. ಇವರೊಬ್ಬ ಶ್ರೇಷ್ಠ ಸಂತ, ವಿದ್ವಾಂಸ. ಘಟನೆಯ ಆಗುಹೋಗು, ಒಳ- ಹೊರ ವಿಚಾರಗಳು ಹೊರಬರಬೇಕಿದೆ. ಇಲ್ಲಿ ಸಂಶಯ ನಿವಾರಣೆಗೆ ಪಾರದರ್ಶಕ ತನಿಖೆಗೆ ಆಗ್ರಹಿಸಿದ್ದೇವೆ ಎಂದು ಪ್ರಶ್ನೆಗೆ ಉತ್ತರಿಸಿದರು. ಇನ್ನೂ ನಾವು ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಇದನ್ನು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಳ್ಳಬಾರದು. ಹಣಕಾಸಿನ ವ್ಯವಹಾರದ ಕುರಿತಂತೆ ಕೂಲಂಕಷ ತನಿಖೆ ಆಗಬೇಕಿದೆ. ಎರಡೇ ವ್ಯಕ್ತಿಗಳಿಂದ ಆಗಿದೆಯೇ? ಇಬ್ಬರಿಂದಲೇ ಇಂಥ ಕೃತ್ಯ ಮಾಡಲು ಸಾಧ್ಯವೇ ಎಂಬ ಕುರಿತು ಪರಿಪೂರ್ಣ ತನಿಖೆ ನಡೆಸಲು ಅವರು ಆಗ್ರಹಿಸಿದರು. ಜನರ ಮನಸ್ಸಿನ ಸಂಶಯವೂ ನಿವಾರಣೆ ಆಗಬೇಕು ಎಂದು ತಿಳಿಸಿದರು.
ಇದು ದೇಶದ ಗಮನ ಸೆಳೆದ ಹತ್ಯೆ. ಎಲ್ಲ ಸಂತರು, ಸ್ವಾಮೀಜಿಗಳಿಗೆ ಭಯ ಶುರುವಾಗಿದೆ. ಎಲ್ಲ ಮಠಾಧಿಪತಿಗಳಿಗೆ, ಮುನಿಗಳಿಗೆ ಆತಂಕದ ಸ್ಥಿತಿ ಬಂದಿದೆ. ಸಂತರು ಭಯದಿಂದ ಇರುವಂತೆ ಆಗಬಾರದು. ಪೊಲೀಸರು ಸೇರಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದೇವೆ. ಬಳಿಕ ಸತ್ಯಶೋಧನಾ ಸಮಿತಿ ತನ್ನ ವರದಿ ನೀಡಲಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ನಮ್ಮ ವರದಿಯನ್ನು ಮಾಧ್ಯಮಗಳ ಮೂಲಕ ಸಮಾಜದ ಮುಂದಿಡುವುದಾಗಿ ಅವರು ಹೇಳಿದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications