ರಾಜ್ಯಸಭಾ ಚುನಾವಣೆ: ಡಿಕೆ ಶಿವಕುಮಾರ್ ಭೇಟಿಯಾದ ಜೈರಾಮ್ ರಮೇಶ್
ಬೆಂಗಳೂರು, ಮೇ 26: ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿದರು.
ರಾಜ್ಯಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕರ್ನಾಟಕದಿಂದ ಜೈರಾಂ ರಮೇಶ್ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಜೈರಾಮ್ ರಮೇಶ್ 2016ರಲ್ಲಿ ಕರ್ನಾಟಕದಿಂದಲೇ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ಜೈರಾಮ್ ರಮೇಶ್ ಅವರೇ ಮತ್ತೊಮ್ಮೆ ಕರ್ನಾಟಕದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿರುವ ಜೈರಾಮ್ ರಮೇಶ್ ಡಿ.ಕೆ. ಶಿವಕುಮಾರ್ ಸಹಿತ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ರಾಜ್ಯಸಭಾ ಚುನಾವಣೆ:
ಕರ್ನಾಟಕ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಗೆ ಆಯ್ಕೆಗೊಂಡ ನಾಲ್ಕು ಸದಸ್ಯರುಗಳ ಪೈಕಿ ಮೂವರು ಸದಸ್ಯರುಗಳು ಅಂದರೆ ನಿರ್ಮಲಾ ಸೀತಾರಾಮನ್, ಜೈರಾಮ್ ರಮೇಶ್ ಮತ್ತು ಕೆ.ಸಿ. ರಾಮಮೂರ್ತಿ ಅವರು ಜೂನ್ 30ರಂದು ನಿವೃತ್ತರಾಗಲಿರುವುದರಿಂದ ಹಾಗೂ 2021ರ ಸೆಪ್ಟೆಂಬರ್ 13ರಂದು ಆಸ್ಕರ್ ಫರ್ನಾಂಡಿಸ್ ಅವರ ನಿಧನದಿಂದ ತೆರವಾಗಿರುವ ಸ್ಥಾನಗಳನ್ನು ತುಂಬಲು ರಾಜ್ಯಸಭೆಗೆ ದ್ವೈವಾರ್ಷಿಕ ಚುನಾವಣೆಯನ್ನು ನಡೆಸಲು ಭಾರತದ ಚುನಾವಣಾ ಆಯೋಗವು ಚುನಾವಣೆಯನ್ನು ಘೋಷಿಸಿ, ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಚುನಾವಣಾ ವೇಳಾಪಟ್ಟಿಯಂತೆ ಮೇ 24ರ ಮಂಗಳವಾರದಂದು ಅಧಿಸೂಚನೆಯನ್ನು ಹೊರಡಿಸಿದ್ದು, ಮೇ 31ರ ಮಂಗಳವಾರದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಜೂನ್ 01ರ ಬುಧವಾರದಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಜೂನ್ 03ರ ಶುಕ್ರವಾರದಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಅವಶ್ಯವಿದ್ದಲ್ಲಿ ಜೂನ್ 10ರ ಶುಕ್ರವಾರದಂದು ಬೆಳಗ್ಗೆ 9:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಮತದಾನವನ್ನು ನಡೆಸಲಾಗುವುದು. 2022ರ ಜೂನ್ 10ರ ಶುಕ್ರವಾರ ಸಂಜೆ 5:00 ಗಂಟೆಯಿಂದ ಮತಗಳ ಏಣಿಕೆ ನಡೆಯಲಿದ್ದು, ಜೂನ್ 13ರ ಸೋಮವಾರದಂದು ಚುನಾವಣೆ ಮುಕ್ತಾಯಗೊಳ್ಳಲಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications