ಸಿದ್ದ'ರಾಮ'ಯ್ಯನ ಹನುಮಂತ ಜಮೀರ್ ಅಹ್ಮದ್, ಅತೃಪ್ತರ ಹಿಡಿದಿಟ್ಟುಕೊಂಡಿದ್ದಾರೆ
ಬೆಂಗಳೂರು, ಸೆಪ್ಟೆಂಬರ್ 22: ಸಿದ್ದರಾಮಯ್ಯ ಅವರ ಕರೆಗೆ ಓಗೊಟ್ಟು ಜೆಡಿಎಸ್ ಬಿಟ್ಟು ಕಾಂಗ್ರೆಸ್ಗೆ ಬಂದು ಈಗ ಮಂತ್ರಿಯೂ ಆಗಿರುವ ಜಮೀರ್ ಅಹ್ಮದ್ ಅವರು ಸರ್ಕಾರ ಉಳಿಸಲು ಟೊಂಕ ಕಟ್ಟಿರುವ ಸಿದ್ದರಾಮಯ್ಯ ಅವರಿಗೆ ರಾಮ ಭಂಟ ಹನುಮಂತನಂತೆ ಸಾಥ್ ನೀಡುತ್ತಿದ್ದಾರೆ.
ಹೌದು, ಇತ್ತಕಡೆ ಬಿಜೆಪಿ ಒಬ್ಬೊಬ್ಬರೇ ಶಾಸಕರನ್ನು ಸೆಳೆಯಲು ವಾಟ್ಸ್ಆಪ್ ಕಾಲ್ಗಳು, ಅಜ್ಞಾತ ಸ್ಥಳಗಳಲ್ಲಿ ಭೇಟಿಯಂತಹಾ ತಂತ್ರಗಳಿಗೆ ಮೊರೆ ಹೋಗಿದ್ದರೆ. ಅತೃಪ್ತರನ್ನು ಕಾಂಗ್ರೆಸ್ನಲ್ಲೇ ಉಳಿಸಲು ಸಿದ್ದರಾಮಯ್ಯ ಅವರು ಜಮೀರ್ ಅವರನ್ನು ಬಾಣವಾಗಿ ಅಖಾಡಕ್ಕೆ ಬಿಟ್ಟಿದ್ದಾರೆ.
ಅತೃಪ್ತ ಶಾಸಕರನ್ನೆಲ್ಲಾ ನಿನ್ನೆಯೇ ಭೇಟಿ ಮಾಡಿರುವ ಜಮೀರ್ ಅಹ್ಮದ್ ಅವರು, ಸಿದ್ದರಾಮಯ್ಯ ಅವರು ತಮಗೆ ನೀಡಿದ್ದ ಸಂದೇಶವನ್ನು ಸ್ಪಷ್ಟವಾಗಿ ದಾಟಿಸಿದ್ದಾರೆ. ಅಷ್ಟೆ ಅಲ್ಲದೆ ಆನಂದ್ ಸಿಂಗ್ ಹಾಗೂ ಶಾಸಕ ಶಂಕರ್ ಅವರನ್ನು ಸಿದ್ದರಾಮಯ್ಯ ಅವರ ಮುಂದೆ ಕರೆದುತಂದು ಚರ್ಚೆಗೆ ಬಿಟ್ಟಿದ್ದಾರೆ.

ಆನಂದ್ ಸಿಂಗ್ ಅವರನ್ನು ಕರೆತಂದ ಜಮೀರ್
ಆನಂದ್ ಸಿಂಗ್ ಅವರೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಅವರು, ನೀವು ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳಿ ಹೋಗಬಾರದು, ನಿಮ್ಮನ್ನು ಸೋಲಿಸಲು ಬಿಜೆಪಿ ಎಷ್ಟೆಲ್ಲಾ ತಂತ್ರಗಳನ್ನು ಹೂಡಿತು ಆದರೆ ನಾವು ಗೆಲ್ಲಿಸಿದ್ದೇವೆ ಅಲ್ಲಿಗೆ ಹೋದರೆ ಮತ್ತೆ ಅದೇ ಹೀನ ರಾಜಕಾರಣದಲ್ಲಿ ಸಿಲುಕುತ್ತೀರಿ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಎಂಬಿ ಪಾಟೀಲ್ ಭೇಟಿ ಮಾಡಿರುವ ಜಮೀರ್
ಇತ್ತೀಚೆಗಷ್ಟೆ ಜಮೀರ್ ಅವರು ಪ್ರಮುಖ ಅತೃಪ್ತ ಶಾಸಕರಲ್ಲಿ ಒಬ್ಬರಾಗಿರುವ ಎಂ.ಬಿ.ಪಾಟೀಲ್ ಅವರನ್ನು ಅವರ ನಿವಾಸದಲ್ಲಿಯೇ ಭೇಟಿಯಾಗಿ ಮಾತನಾಡಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ಬಂಡಾಯ ಏಳಬಾರದೆಂದು, ಉಳಿದ ಅತೃಪ್ತರಿಗೆ ಬೆಂಬಲ ನೀಡಬಾರದೆಂಬ ಸಿದ್ದರಾಮಯ್ಯ ಅವರ ಸಂದೇಶವನ್ನು ತಲುಪಿಸಿದ್ದಾರೆ.

ಶಂಕರ್ ಅವರನ್ನೂ ಭೇಟಿ ಮಾಡಿರುವ ಜಮೀರ್
ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿ ಕಾಂಗ್ರೆಸ್ಗೆ ಬೆಂಬಲ ನೀಡಿರುವ ಶಾಸಕ ಕಮ್ ಅರಣ್ಯ ಸಚಿವ ಶಂಕರ್ ಅವರನ್ನೂ ಜಮೀರ್ ಭೇಟಿಯಾಗಿದ್ದಾರೆ. ಅವರೂ ಸಹ ಪಕ್ಷ ಬಿಡುವ ಸೂಚನೆ ಸಿಕ್ಕ ಕಾರಣ ಅವರನ್ನೂ ಸಿದ್ದರಾಮಯ್ಯ ಅವರ ಅಣತಿಯಂತೆ ಜಮೀರ್ ಭೇಟಿ ಆಗಿದ್ದಾರೆ ಎನ್ನಲಾಗಿದೆ.

ಉತ್ತರ ಕರ್ನಾಟಕದ ಅತೃಪ್ತರ ಭೇಟಿ?
ಉಳಿದಂತೆ ಬಿ.ಸಿ.ಪಾಟೀಲ್ ಸೇರಿ ಉತ್ತರ ಕರ್ನಾಟಕ ಭಾಗದ ಕೆಲವು ಶಾಸಕರನ್ನು ಜಮೀರ್ ನಿನ್ನೆಯೇ ಭೇಟಿಯಾಗಿದ್ದು ಸಿದ್ದರಾಮಯ್ಯ ಪರ ಮಾತನಾಡಿ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಕೈಜೋಡಿಸಬಾರದು ಎಂದಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರಿಗೆ ಸೂಕ್ಷ್ಮ ವರದಿಯನ್ನೂ ನೀಡಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications