Jan Ki Baat Pre Poll Survey: ಹಳೆ ಮೈಸೂರು ಭಾಗದಲ್ಲಿ ಹಸ್ತಕ್ಕೆ ಅಸ್ತು ಎಂದ ಮತದಾರರು
ರಾಜ್ಯ ರಾಜಕೀಯದಲ್ಲಿ ವಿಧಾನಸಭಾ ಚುನಾವಣೆಯ ಕಿಚ್ಚು ಹೆಚ್ಚಾಗುತ್ತಿದೆ. ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಮುನ್ನವೇ ಹಲವಾರು ಸಮೀಕ್ಷೆಗಳು ನಡೆದಿವೆ. ಬಹುತೇಕ ಸಮೀಕ್ಷೆಗಳು ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದೇ ಘೋಷಣೆ ಮಾಡಿದ್ದವು. ಆದರೀಗ ಬಿಡುಗಡೆಗೊಂಡ ಸಮೀಕ್ಷೆ ಭಾರೀ ಕುತೂಹಲವನ್ನು ಮೂಡಿಸಿದೆ. ಇಂದು (ಏಪ್ರಿಲ್ 14) ಜನ್ ಕಿ ಬಾತ್ ನಡೆಸಿದ ಸಮೀಕ್ಷೆ ವರದಿಯನ್ನು ಸುವರ್ಣ ನ್ಯೂಸ್ ಬಿಡುಗಡೆ ಮಾಡಿದೆ.
ಈ ಬಾರಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಬಲ ಪೈಪೋಟಿ ನೀಡೆಸಲಿವೆ. ಬಹುತೇಕ ಕ್ಷೇತ್ರಗಳಲ್ಲಿ ಅಳೆದು ತೂಗಿ ಅಭ್ಯರ್ಥಿಗಳನ್ನು ಮೂರು ಪ್ರಬಲ ಪಕ್ಷಗಳು ಆಯ್ಕೆ ಮಾಡಿವೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆನ್ನುವ ಕುತೂಹಲ ಹೆಚ್ಚಾಗಿದೆ.

ಜನ್ ಕಿ ಬಾತ್ ಸಮೀಕ್ಷೆಯ ವರದಿ ಪ್ರಕಾರ ಹಳೆ ಮೈಸೂರು ಭಾಗದ ಒಟ್ಟು 57 ಸ್ಥಾನಗಳ ಪೈಕಿ ಬಿಜೆಪಿ 12, ಕಾಂಗ್ರೆಸ್ 23, ಜೆಡಿಎಸ್ 22 ಕ್ಷೇತ್ರಗಳಲ್ಲಿ ಗೆಲುವುದು ಸಾಧಿಸಲಿದೆ. ಸಮೀಕ್ಷೆಯಂತೆ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸುವ ವಿಚಾರದಲ್ಲಿ ಕಾಂಗ್ರೆಸ್ಗೆ ಜೆಡಿಎಸ್ ಟಫ್ ಕಾಂಪಿಟೇಷನ್ ನೀಡಲಿದೆ. ಜೊತೆಗೆ ಬಿಜೆಪಿ ಹೀನಾಯ ಸೋಲು ಕಾಣಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಬಹುತೇಕ ಸ್ಥಾನಗಳಲ್ಲಿ ಗೆದ್ದು ಬೀಗಲಿದೆ ಎಂದು ಸಮೀಕ್ಷೆ ಹೇಳುತ್ತದೆ.
ಜನ್ ಕಿ ಬಾತ್ ನಡೆಸಿದ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 98-109 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಕಾಂಗ್ರೆಸ್ 89-97 ಸೀಟುಗಳನ್ನು ಪಡೆಯಲಿದೆ. ಸಮೀಕ್ಷೆ ಪ್ರಕಾರ ಈ ಬಾರಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವುದು ನಿಶ್ಚಿತವಾಗಿದೆ. ಹೀಗಾಗಿ ಸಮೀಕ್ಷೆಯ ವರದಿ ಭಾರೀ ಕುತೂಹಲವನ್ನು ಮೂಡಿಸಿದೆ.
ಜನ್ ಕಿ ಬಾತ್ ಪ್ರಧಾನ ಸಂಪಾದಕ ಪ್ರದೀಪ್ ಭಂಡಾರಿ ದೇಶದ ಅತ್ಯುತ್ತಮ ಚುನಾವಣಾ ತಜ್ಞರಲ್ಲಿ ಒಬ್ಬರು. ದೇಶದ ಚುನಾವಣಾ ಪೂರ್ವ ಸಮೀಕ್ಷೆಗಳಾಗಲಿ, ಮತಗಟ್ಟೆ ಸಮೀಕ್ಷೆಗಳಾಗಲಿ, ವಸ್ತು ನಿಷ್ಠವಾಗಿ ಜನರ ನಾಡಿ ಮಿಡಿತವನ್ನ ಸಮರ್ಥವಾಗಿ ಗ್ರಹಿಸಿ ಫಲಿತಾಂಶಕ್ಕೆ ಹತ್ತಿರದ ಸಂಖ್ಯೆಗಳನ್ನ ಕೊಡುವ ಹೆಗ್ಗಳಿಗೆ ಜನ್ ಕಿ ಬಾತ್ ಸಂಸ್ಥೆಯದ್ದು.
2018ರ ಜನ್ ಕಿ ಬಾತ್ ಸಮೀಕ್ಷೆ ವರದಿಯಂತೆ ಪಕ್ಷಗಳು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಬಿಜೆಪಿ 102 ರಿಂದ 108 ಸೀಟ್ಗಳನ್ನು ಗೆಲ್ಲಲಿದೆ ಎಂದು ಕಳೆದ ಬಾರಿ 2018ರ ಚುನಾವಣೆಯಲ್ಲಿ ಜನ್ ಕಿ ಬಾತ್ ಸಮೀಕ್ಷೆ ವರದಿ ಹೇಳಿತ್ತು. ಕಾಂಗ್ರೆಸ್ 72-74, ಜೆಡಿಎಸ್ 42-44 ಹಾಗೂ ಇತರೆ 2-4 ಸೀಟ್ಗಳನ್ನು ಗೆಲ್ಲಲಿವೆ ಎಂದು ಸಮೀಕ್ಷೆ ವರದಿ ಬಹಿರಂಗಪಡಿಸಿತ್ತು. ಸಮೀಕ್ಷೆಯಂತೆಯೇ ಬಿಜೆಪಿ 104, ಕಾಂಗ್ರೆಸ್ 81, ಜೆಡಿಎಸ್ 37 ಹಾಗೂ ಇತರೆ 2 ಸೀಟ್ಗಳನ್ನು ಪಡೆದುಕೊಂಡಿವೆ. ಈ ಬಾರಿಯೂ ಜನ್ ಕಿ ಬಾತ್ ಸಮೀಕ್ಷೆ ವರದಿಯಂತೆಯೇ ಫಲಿತಾಂಶ ಹೊರಬೀಳಲಿದೆಯೇ ಎಂದು ಕಾದು ನೋಡಬೇಕಿದೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications