Jan Ki Baat Pre Poll Survey: ಕರಾವಳಿ ಭಾಗದಲ್ಲಿ ಬಿಜೆಪಿ ಮುಂದು
ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದರೆ ಪಕ್ಷಗಳು ತಮ್ಮ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈವರೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ತಲಾ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿವೆ. ಆದರೆ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆಯಾಗಬೇಕಿದೆ. ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಭರದ ಸಿದ್ದತೆ ನಡೆಸಿವೆ. ಈ ನಡುವೆ ಇಂದು (ಏಪ್ರಿಲ್ 14) ಜನ್ ಕಿ ಬಾತ್ ನಡೆಸಿದ ಸಮೀಕ್ಷೆ ವರದಿಯನ್ನು ಸುವರ್ಣ ನ್ಯೂಸ್ ಬಿಡುಗಡೆ ಮಾಡಿದೆ.
ನಿಖರ ನಂಬರ್ಗಳಿಗೆ ಹೆಸರುವಾಸಿಯಾಗಿರುವ ಜನ್ ಕೀ ಬಾತ್, ಈಗ 2023ರ ಚುನಾವಣಾ ಪೂರ್ವ ಸಮೀಕ್ಷೆ ಮಾಡಿದೆ. ಮತ್ತೆ ಅಧಿಕಾರದ ಗದ್ದುಗೆಗೆ ಬಿಜೆಪಿ ಏರುತ್ತಾ? ಕಾಂಗ್ರೆಸ್ ನಾಯಕರ ರಣತಂತ್ರ ವರ್ಕೌಟ್ ಆಗುತ್ತಾ? 2 ರಾಷ್ಟ್ರೀಯ ಪಕ್ಷಗಳ ಮಧ್ಯೆ ಜೆಡಿಎಸ್ ಕಥೆ ಏನು? ಎನ್ನುವುದರ ಬಗ್ಗೆ ಸಮಗ್ರವಾಗಿ ಜನ್ ಕೀ ಬಾತ್ ಸಮೀಕ್ಷೆ ತಿಳಿಸಲಿದೆ.

ಈ ಸಮೀಕ್ಷೆಯ ವರದಿ ಪ್ರಕಾರ ರಾಜ್ಯದ ಕರಾವಳಿಯ ಒಟ್ಟು 19 ಸ್ಥಾನಗಳ ಪೈಕಿ, ಬಿಜೆಪಿ 16, ಕಾಂಗ್ರೆಸ್ 03, ಜೆಡಿಎಸ್ ಯಾವುದೇ ಸ್ಥಾನವನ್ನು ಪಡೆಯುದಿಲ್ಲ. ಬಿಜೆಪಿ 16 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದು ಕಾಂಗ್ರೆಸ್ ಅತ್ಯಂತ ಕಡಿಮೆ ಸ್ಥಾನ ಪಡೆಯಲಿದ್ದು ಜೆಡಿಎಸ್ ಹೀನಾಯ ಸೋಲನ್ನು ಅನುಭವಿಸಲಿದೆ ಎನ್ನುತ್ತದೆ ಸಮೀಕ್ಷೆಯ ವರದಿ.
ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಎಂಟು, ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿವೆ. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಮಂಗಳೂರು, ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ, ಬಂಟ್ವಾಳ, ಮೂಡಬಿದರೆ, ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರವನ್ನು ಹೊಂದಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಉಡುಪಿ, ಕಾರ್ಕಳ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರವನ್ನು ಹೊಂದಿದೆ.

ಚುನಾವಣೆಯಲ್ಲಿ ಪಕ್ಷ ಪಡೆದುಕೊಳ್ಳುವ ವೋಟ್ ಶೇರಿಂಗ್ ಅತ್ಯಂತ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮತ ಹಂಚಿಕೆ ಶೇಕಡಾವಾರು ಉತ್ತಮಪಡಿಸಿಕೊಂಡಿದೆ. ಕಾಂಗ್ರೆಸ್ ಒಳ ಜಗಳ, ಕೆಲ ಕ್ಷೇತ್ರದಲ್ಲಿ ಆಡಳಿತವಿರೋಧಿ ಅಲೆ, ಇತ್ತ ಜೆಡಿಎಸ್ ಪ್ರಯತ್ನಗಳಿಂದ ಅತಂತ್ರ ವಿಧಾನಸಭಾ ಚುನಾವಣೆ ಸೃಷ್ಟಿಯಾಗಲಿದೆ ಅನ್ನೋದು ಸಮೀಕ್ಷೆ ಹೇಳುತ್ತಿದೆ. ಸ್ಥಾನಗಳ ಪೈಕಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿರುವ ಬಿಜೆಪಿ 98 ರಿಂದ 109 ಸ್ಥಾನ ಗೆಲ್ಲಲಿದೆ ಎಂದಿದೆ. ಕಾಂಗ್ರೆಸ್ 89 ರಿಂದ 97 ಸ್ಥಾನ ಗೆಲ್ಲಲಿದೆ ಎಂದು ವರದಿ ಹೇಳುತ್ತಿದೆ. ಇತ್ತ ಜೆಡಿಎಸ್ 25 ರಿಂದ 29 ಹಾಗೂ ಇತರರ ಗರಿಷ್ಠ 1 ಸ್ಥಾನ ಗೆಲ್ಲಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
2018ರ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ಸಿನ ಯು.ಟಿ.ಖಾದರ್ ಗೆಲುವು ಸಾಧಿಸಿದ್ದರು.ಇನ್ನು, ಮಂಗಳೂರು ದಕ್ಷಿಣದಿಂದ ವೇದವ್ಯಾಸ ಕಾಮತ್, ಉತ್ತರದಿಂದ ಡಾ.ಭರತ್ ಶೆಟ್ಟಿ, ಬೆಳ್ತಂಗಡಿಯಿಂದ ಹರೀಶ್ ಪೂಂಜಾ, ಮೂಡಬಿದರೆಯಿಂದ ಉಮಾನಾಥ ಕೋಟ್ಯಾನ್, ಬಂಟ್ವಾಳದಿಂದ ರಾಜೇಶ್ ನಾಯಕ್, ಪುತ್ತೂರಿನಿಂದ ಸಂಜೀವ ಮಠಂದೂರು ಆಯ್ಕೆಯಾಗಿದ್ದರು. ಇವೆರೆಲ್ಲರೂ ಬಿಜೆಪಿಯ ಅಭ್ಯರ್ಥಿಗಳಾಗಿದ್ದರು.
ಇನ್ನು, ಉಡುಪಿಯಲ್ಲಿ ರಘುಪತಿ ಭಟ್, ಕಾಪುವಿನಿಂದ ಲಾಲಾಜಿ ಮೆಂಡನ್, ಕಾರ್ಕಳದಿಂದ ಸುನೀಲ್ ಕುಮಾರ್, ಬೈಂದೂರಿನಿಂದ ಸುಕುಮಾರ್ ಶೆಟ್ಟಿ ಮತ್ತು ಕುಂದಾಪುರದಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ ಆಯ್ಕೆಯಾಗಿದ್ದರು, ಎಲ್ಲರೂ ಬಿಜೆಪಿಯವರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications