ಜನಾರ್ದನ ರೆಡ್ಡಿಗೆ ಮತ್ತೆ ಜೈಲುವಾಸ ಶುರು, ಖೈದಿ ನಂ 10902
ಬೆಂಗಳೂರು, ನವೆಂಬರ್ 11: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಜೈಲು ವಾಸ ಶುರುವಾಗಿದೆ. ಪರಪ್ಪನ ಅಗ್ರಹಾರ ಸೇರಿರುವ ಅವರ ಖೈದಿ ಸಂಖ್ಯೆ 10902.
ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಇಡಿ ಯಲ್ಲಿದ್ದ ಕೇಸನ್ನು ಆರೋಪಿಗಳ ಪರ ಮಾಡಿಕೊಡುತ್ತೇನೆ ಎಂದು ಹೇಳಿ ರೆಡ್ಡಿ ಅವರು ಆರೋಪಿಗಳಿಂದ 20 ಕೋಟಿ ಲಂಚ ಪಡೆದಿದ್ದಾರೆ ಹಾಗೂ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂಬ ಆರೋಪವನ್ನು ಸಿಸಿಬಿಯು ಜನಾರ್ದನ ರೆಡ್ಡಿ ಮೇಲೆ ಹೊರಿಸಿ ಅವರನ್ನು ಬಂಧಿಸಿದೆ.

ಸಿಸಿಬಿ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಜನಾರ್ದನ ರೆಡ್ಡಿ ಅವರಿಗೆ ನ್ಯಾಯಾಧೀಶಕರು ನವೆಂಬರ್ 24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಬೇಲ್ ದೊರಕುವವರೆಗೆ ರೆಡ್ಡಿ ಅವರು ವಿಚಾರಣಾಧೀನ ಖೈದಿಗಳ ಜೊತೆ ಇರಲಿದ್ದಾರೆ.
ರೆಡ್ಡಿ ಪರ ಹನುಮಂತರಾಯಪ್ಪ, ಹಿರಿಯ ವಕೀಲ ಆಚಾರ್ಯ, ಚಂದ್ರಶೇಖರ್ ಅವರುಗಳು ಜಾಮೀನಿಗಾಗಿ ಹೋರಾಡಲು ತಯಾರಿ ನಡೆಸಿದ್ದಾರೆ. ನಾಳೆ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸುತ್ತಿದ್ದು ಜಾಮೀನು ನೀಡಬೇಕೆಂದು ಮನವಿ ಮಾಡಲಿದ್ದಾರೆ.
ಆಂಬಿಡೆಂಟ್ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಆರನೇ ಆರೋಪಿಯನ್ನಾಗಿ ಮಾಡಲಾಗಿದೆ. ರೆಡ್ಡಿ ಅವರ ಮೇಲೆ 419,420,468, 120 (b), 201 ಐಪಿಸಿ ಸೆಕ್ಷನ್ ಸೇರಿದಂತೆ ಇನ್ನು ಕೆಲವು ಸೆಕ್ಷನ್ಗಳಡಿ ಆರೋಪಗಳನ್ನು ಹೊರಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications