ಮೈತ್ರಿ ಸರ್ಕಾರ ಉರುಳಿಸಲು ಜನಾರ್ದನ ರೆಡ್ಡಿ ಬಂಡವಾಳ?
ಬೆಂಗಳೂರು, ಸೆಪ್ಟೆಂಬರ್ 13: ಮೈತ್ರಿ ಸರ್ಕಾರ ಉರುಳಿಸಿ ಯಡಿಯೂರಪ್ಪ ಸಿಎಂ, ಶ್ರೀರಾಮುಲು ಉಪಮುಖ್ಯಮಂತ್ರಿ ಮಾಡಲು ಗಣಿ ದೊರೆ ಜನಾರ್ದನ ರೆಡ್ಡಿ ಅವರೇ ಬೆನ್ನೆಲುಬಾಗಿ ನಿಂತಿದ್ದು, ಮೈತ್ರಿ ಸರ್ಕಾರ ಉರುಳಿಸಲು ಅವರೇ ಬಂಡವಾಳ ಹೂಡಿದ್ದಾರೆ! ಎನ್ನಲಾಗಿದೆ.
ತಮ್ಮ ಪ್ರಿಯ ಶಿಷ್ಯ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಜನಾರ್ದನ ರೆಡ್ಡಿ ಅವರು, ಯಡಿಯೂರಪ್ಪ ಅವರ ಹಿಂದೆ ನಿಂತು ಮೈತ್ರಿ ಸರ್ಕಾರ ಉರುಳಿಸು ಎಲ್ಲ ರೀತಿಯ ಸಹಾಯ ಮಾಡುತ್ತಿದ್ದಾರೆ ಎಂದು ಕೆಲವು ಮೂಲಗಳಿಂದ ತಿಳಿದಿವೆ.
ಮೈತ್ರಿ ಸರ್ಕಾರವನ್ನು ಉರುಳಿಸಲು ಯಡಿಯೂರಪ್ಪ ಮಾಡುತ್ತಿರುವ ಯತ್ನಗಳ ಹಿಂದೆ ಜನಾರ್ದನ ರೆಡ್ಡಿ ಅವರು ಇದ್ದಾರೆ ಎಂಬ ಗುಮಾನಿ ದಟ್ಟವಾಗಿ ಎದ್ದಿದೆ. ಯಡಿಯೂರಪ್ಪ ಅವರನ್ನು ಹಿಂದೆ ನಿಂತು ಮುನ್ನಡೆಸುತ್ತಿರುವುದೇ ಜನಾರ್ದನ ರೆಡ್ಡಿ ಎಂಬ ಮಾತುಗಳು ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ಯಡಿಯೂರಪ್ಪ ನೀಡಿದ್ದರು ಬೆಂಬಲ
ಯಡಿಯೂರಪ್ಪ ಅವರು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಜನಾರ್ಧನ ರೆಡ್ಡಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಮರಳಿ ತರಲು ಪ್ರಯತ್ನ ಮಾಡಿದ್ದರು. ರಾಮುಲು ಅವರಂತೂ ಜನಾರ್ಧನ ರೆಡ್ಡಿ ಅವರನ್ನು ವಿಧಾನಸೌಧದಲ್ಲಿ ಮತ್ತೆ ಕೂರಿಸಲು ಇನ್ನಿಲ್ಲದ ಯತ್ನ ಮಾಡುತ್ತಿದ್ದಾರೆ. ಸ್ವತಃ ರಾಜಕಾರಣಕ್ಕೆ ಮರಳುವ ಯತ್ನದಲ್ಲಿರುವ ರೆಡ್ಡಿ ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರನ್ನು ಶಕ್ತಿಯುತ ಸ್ಥಾನದಲ್ಲಿ ಕೂರಿಸಲು ತೆರೆಹಿಂದೆ ನಿಂತು ಯತ್ನ ನಡೆಸುತ್ತಿದ್ದಾರೆ.

ಉ.ಕರ್ನಾಟಕ ಶಾಸಕರ ಮೇಲೆ ಪ್ರಭಾವ
ಶಾಸಕರ ಖರೀದಿ, ಉತ್ತರ ಕರ್ನಾಟಕ ಭಾಗದ ಶಾಸಕರ ಮೇಲೆ ಪ್ರಭಾವ ಇನ್ನುಳಿದ ಹಲವು ವಿಷಯಗಳಲ್ಲಿ ಜನಾರ್ಧನ ರೆಡ್ಡಿ ಅವರು ರಾಮುಲು ಹಾಗೂ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎನ್ನಲಾಗಿದೆ. ಕಳೆದ ಚುನಾವಣೆ ಸಮಯದಲ್ಲಿ ಸಹ ತೆರೆಮರೆಯಲ್ಲಿದ್ದುಕೊಂಡೆ ಬಳ್ಳಾರಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ರೆಡ್ಡಿ ಅವರ ಪ್ರಭಾವ ಕಾರಣವಾಗಿತ್ತು.

ಶಾಸಕರ ಖರೀದಿಗೆ ಹಣಕಾಸಿನ ನೆರವು?
ಶಾಸಕರ ಖರೀದಿಗೆ ಹಣಕಾಸಿನ ನೆರವನ್ನೂ ಜನಾರ್ಧನ ರೆಡ್ಡಿ ನೀಡುತ್ತಿದ್ದಾರೆ. ಎಂಬ ಗುಲ್ಲು ಹಬ್ಬಿದ್ದು, ರಾಜ್ಯ ರಾಜಕಾರಣ ರಾಜಕೀಯಕ್ಕೆ ಮರಳಿ ಬರಲು ಜನಾರ್ಧನ ರೆಡ್ಡಿ ಬಹಳ ಪ್ರಯತ್ನ ಪಡುತ್ತಿದ್ದಾರೆ ಎನ್ನಲಾಗಿದೆ.

ಆಪರೇಷನ್ ಕಮಲಕ್ಕೆ ರೆಡ್ಡಿ ಸಾಥ್
ಕಳೆದ ಬಾರಿ ಬಿಜೆಪಿ ಆಪರೇಷನ್ ಕಮಲ ಹೆಸರಿನಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷದ ಶಾಸಕರನ್ನು ಬಿಜೆಪಿಗೆ ಸೆಳೆದಾಗಲೂ ಸಹ ಇದೇ ಜನಾರ್ಧನ ರೆಡ್ಡಿ ಅವರು ಬಿಜೆಪಿಯ ಬೆನ್ನಿಗೆ ನಿಂತಿದ್ದರು. ಬಿಜೆಪಿಯ ಬಹುತೇಕ ರಾಜಕೀಯ ಸಾಹಸಗಳಿಗೆ ರೆಡ್ಡಿ ಸಯೋದರರು ಬೆನ್ನೆಲುಬಾಗಿ ನಿಂತಿದ್ದರು. ಆದರೆ ಸಿಬಿಐ ದಾಳಿ ಬಳಿಕ ಜನಾರ್ಧನ ರೆಡ್ಡಿ ಅವರನ್ನು ರಾಜಕೀಯದಿಂದ ದೂರ ಇಡಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications