ಜನಾರ್ದನ ರೆಡ್ಡಿ ಹೊಸವರ್ಷಾಚರಣೆ ಜೈಲಿನಲ್ಲೇ!
ಬೆಂಗಳೂರು, ಡಿ. 17 : ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಹೊಸ ವರ್ಷವನ್ನು ಜೈಲಿನ ಹೊರಗೆ ಆಚರಿಸಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆಗೆ ಪ್ರಕರಣದಲ್ಲಿ ರೆಡ್ಡಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿಗೆ ಮುಂದೂಡಲಾಗಿದೆ.
ಮಂಗಳವಾರ ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸಿದ ಸುಪ್ರೀಂಕೋರ್ಟ್, ದೈನಂದಿನ ಕಲಾಪದೊಂದಿಗೆ ಕೈಗೆತ್ತಿಕೊಳ್ಳುವುದಾಗಿ ಸ್ಪಷ್ಟಪಡಿಸಿತು. ಆದ್ದರಿಂದ ಜನವರಿ 5ರ ನಂತರ ಅರ್ಜಿ ವಿಚಾರಣೆ ನಡೆಯಲಿದೆ. [ರೆಡ್ಡಿಗೆ ಕರ್ನಾಟಕ ಎಲ್ಲಾ ಪ್ರಕರಣದಲ್ಲಿ ಜಾಮೀನು]

ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠದ ಮುಂದೆ ಮಂಗಳವಾರ ಜನಾರ್ದನ ರೆಡ್ಡಿ ಅರ್ಜಿಯು ವಿಚಾರಣೆ ಇತ್ತು. ಇತರ ಪ್ರಕರಣಗಳ ವಿಚಾರಣೆಗೆ ಹೆಚ್ಚಿನ ಸಮಯ ತೆಗೆದುಕೊಂಡಿದ್ದರಿಂದ ಬೆಳಗಿನ ಕಲಾಪದ ವೇಳೆ ಈ ಜಾಮೀನು ಅರ್ಜಿ ವಿಚಾರಣೆಗೆ ಬರಲಿಲ್ಲ.[ರೆಡ್ಡಿ ಬಿಡುಗಡೆಗೆ ಸಿಬಿಐ 7 ಷರತ್ತುಗಳು]
ಭೋಜನ ವಿರಾಮದ ಬಳಿಕ ನ್ಯಾಯಪೀಠ ವಿಚಾರಣಾ ಕಲಾಪ ಆರಂಭಿಸುತ್ತಿದ್ದಂತೆ ತಮ್ಮ ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ರೆಡ್ಡಿ ಪರ ವಕೀಲರು ಮನವಿ ಮಾಡಿಕೊಂಡರು. ಆದರೆ, ನ್ಯಾಯಮೂರ್ತಿಗಳು ಈ ಬೇಡಿಕೆಯನ್ನು ತಳ್ಳಿಹಾಕಿದರು.
ನ್ಯಾಯಪೀಠದ ಮಂಗಳವಾರದ ಕಲಾಪ ಮುಗಿದು ನ್ಯಾಯಮೂರ್ತಿಗಳು ವಿಶೇಷ ಪೀಠದ ವಿಚಾರಣೆಗೆ ಹೊರಡುತ್ತಿದ್ದಂತೆ ರೆಡ್ಡಿ ಪರ ವಕೀಲರು ಮತ್ತೂಮ್ಮೆ ತಮ್ಮ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದರು. ಅವರ ಮನವಿಯನ್ನು ತಳ್ಳಿ ಹಾಕಿದ ಮುಖ್ಯ ನ್ಯಾಯಮೂರ್ತಿಗಳು, ಅರ್ಜಿಯ ವಿಚಾರಣೆಯನ್ನು ದೈನಂದಿನ ಕಲಾಪದೊಂದಿಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.
ಅಂದಹಾಗೆ ಡಿ.19ರಿಂದ ಜನವರಿ 4ರವರೆಗೆ ಸುಪ್ರೀಂಕೋರ್ಟ್ಗೆ ಕ್ರಿಸ್ಮಸ್ ರಜೆ ಇದೆ. ಆ ಬಳಿಕವೇ ರೆಡ್ಡಿ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಆದ್ದರಿಂದ ಹೊಸವರ್ಷವನ್ನು ಜೈಲಿನ ಹೊರಗೆ ಆಚರಿಸಬೇಕೆಂಬ ಜನಾರ್ದನ ರೆಡ್ಡಿ ಅವರ ನಿರೀಕ್ಷೆಗಳು ಹುಸಿಯಾಗಿವೆ.
ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ, ರಾಯದುರ್ಗ ತಾಲೂಕಿನ ಓಬಳಾಪುರಂ ಗ್ರಾಮದ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಿ ಸಾಕಷ್ಟು ಅಕ್ರಮ ನಡೆಸಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ, ಈ ಪ್ರಕರಣದಲ್ಲಿ ಜಾಮೀನು ಸಿಕ್ಕರೆ ರೆಡ್ಡಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications