ಸಂತಾಪ; ಗೀತಾ ನಾಗಭೂಷಣ ಮಹಿಳಾ ಕುಲದ ಕಣ್ಮಣಿ
ಬೆಂಗಳೂರು, ಜೂನ್ 29 : ನಾಡೋಜ ಗೀತಾ ನಾಗಭೂಷಣ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ. ಭಾನುವಾರ ರಾತ್ರಿ 75 ವರ್ಷದ ಗೀತಾ ನಾಗಭೂಷಣ ವಿಧಿವಶರಾಗಿದ್ದಾರೆ.
ಕಲಬುರಗಿಯ ಸ್ವಸ್ತಿಕ್ ನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ ನಗರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಗೀತಾ ನಾಗಭೂಷಣ ನಿಧನಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. "ಅವರು ನಡೆದು ಬಂದ ದಾರಿ, ಪಟ್ಟ ಶ್ರಮವೇ ಹೆಣ್ಣಿನ ಹರಸಾಹಸದ ಒಂದು ಕಾದಂಬರಿಯಾಗಬಲ್ಲದು" ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

ಜನಾರ್ದನ ರೆಡ್ಡಿ ಪೋಸ್ಟ್
ಗೀತಾ ನಾಗಭೂಷಣ ಕನ್ನಡ ಸಾಹಿತ್ಯದ ಪ್ರಸಿದ್ಧ ಬರಹಗಾರ್ತಿಯರಲ್ಲೊಬ್ಬರು. ನಾಡೋಜ ಗೀತಾ ನಾಗಭೂಷಣ, ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳ ನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವಗಳಿಂದ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನಶೀಲರಾದವರು
ಅವರು ನಡೆದು ಬಂದ ದಾರಿ, ಪಟ್ಟ ಶ್ರಮವೇ ಹೆಣ್ಣಿನ ಹರಸಾಹಸದ ಒಂದು ಕಾದಂಬರಿಯಾಗಬಲ್ಲದು. ಸಿಟ್ಟು, ಸಿಡುಕು, ತಿರಸ್ಕಾರ, ಅಪಮಾನಗಳ ಮಧ್ಯೆಯೇ ಬೆಳೆದು ನಿಂತವರು. ಕಡುಬಡತನದಲ್ಲಿದ್ದ, ಹಿಂದುಳಿದ ಜಾತಿಯ ಅನಕ್ಷರಸ್ಥ ಬಡಕುಟುಂಬದಲ್ಲಿ ಹುಟ್ಟಿ ತಮ್ಮ ಬಾಲ್ಯ ಹಾಗೂ ಯೌವನದಲ್ಲಿ ಸಿಹಿಗಿಂತ ಕಹಿಯನ್ನೇ ಹೆಚ್ಚಾಗಿ ಕಂಡ ಗೀತಾ ನಾಗಭೂಷಣ್ ಅವರು ಪುಸ್ತಕದ ಪ್ರೀತಿ ಮತ್ತು ಅಧ್ಯಯನದತ್ತ ತಮ್ಮ ಗಮನವನ್ನು ಕೇಂದ್ರೀಕರಿಸಿದರು.
ಬೆತ್ತಲೆ ಸೇವೆ, ದೇವಿಯ ಹೆಸರಿನಲ್ಲಿ ನಡೆಸುವ ದೇವದಾಸಿ ಸೇವೆ, ಮುಗ್ಧ ನಿರ್ಗತಿಕ ಹೆಂಗಸರ ಮೇಲಿನ ದೌರ್ಜನ್ಯ, ಲೈಂಗಿಕ ಶೋಷಣೆ, ಮೂಢ ನಂಬಿಕೆಗಳ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ತಮ್ಮ ಬರಹಗಳ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.
ನಿರ್ಭಿಡೆಯಿಂದ, ಧೈರ್ಯದಿಂದ ಹಳ್ಳಿಯ ಹಿಂದುಳಿದ ಅಮಾಯಕ ಹೆಂಗಸರ ಸ್ಥಿತಿಗತಿಗಳ ಬಗ್ಗೆ, ಪಟ್ಟಣ ಪ್ರದೇಶಗಳ ಕೊಳಚೆ ಪ್ರದೇಶಗಳ ಹೆಣ್ಣು ಮಕ್ಕಳ ಬಗ್ಗೆ, ಅವರ ಸಂಕಟ ಶೋಷಣೆಗಳ ಬಗ್ಗೆ ಓದುಗರ ಮನ ಕುದಿಯುವಂತೆ ಬರೆದರು.
ಸಾಮಾಜಿಕ ಕಳಕಳಿ ಹೊಂದಿದ್ದ ಹಾಗೂ ಬರಹಗಳ ಮೂಲಕ ಸಮಾಜವನ್ನು ತಿದ್ದುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಗೀತಾ ನಾಗಭೂಷಣ್ ಅವರ ನಿಧನ ನಿಜಕ್ಕೂ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
- ಗಾಲಿ ಜನಾರ್ದನ ರೆಡ್ಡಿ
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications