Janardhana Reddy: ನನ್ನ ಮೇಲೆ ಕೊಲೆ ಯತ್ನ; ಬಳ್ಳಾರಿ ಪ್ರಕರಣ ಸಿಬಿಐಗೆ ಕೊಡಲು ಹಿಂದೇಟೇಕೆ?: ಜನಾರ್ದನ ರೆಡ್ಡಿ
ಬೆಂಗಳೂರು: ಸಿದ್ದರಾಮಯ್ಯನವರು ಪ್ರಾಮಾಣಿಕರೆಂದು ಬಿಂಬಿಸಲು, ಈ ರಾಜ್ಯದ ಸಿಎಂ ಆಗಿ ಕಾನೂನು ರಕ್ಷಿಸಲು ನಾನು ನಿಜವಾಗಿಯೂ ಕಂಕಣಬದ್ಧವಾಗಿ ಇದ್ದೇನೆ ಎಂದು ತೋರಿಸಲು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟವರು. ಅಂಥ ಮಹಾನುಭಾವ, ಬಳ್ಳಾರಿಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಾರೆ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಅವರು ಸವಾಲು ಹಾಕಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಇರುವ ಸಂದರ್ಭದಲ್ಲಿ ಸುಮಾರು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಬಿಜೆಪಿಯವರು ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ ಎಂದು ಮುಖ್ಯಮಂತ್ರಿಗಳು ಕೇಳಿದ್ದಾರೆ. ಯಡಿಯೂರಪ್ಪ ಅವರ ಸರಕಾರದ ಅವಧಿಯಲ್ಲಿ ಎಷ್ಟು ಸಿಬಿಐಗೆ ಕೊಟ್ಟಿದ್ದಾರೆ, ಸಿದ್ದರಾಮಯ್ಯರ ಅವಧಿಯಲ್ಲಿ ಎಷ್ಟು ಸಿಬಿಐಗೆ ವಹಿಸಿದ್ದಾರೆ ಎಂಬ ಪ್ರಶ್ನೆ ಮುಖ್ಯವಲ್ಲ ಎಂದು ಹೇಳಿದರು.

ನಿಮ್ಮ ಶಾಸಕನೇ ಕೊಲೆ ಮಾಡಿಸಿದ್ದೆಂದು ನಿಮಗೆ ಈಗಾಗಲೇ ಗೊತ್ತಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಮುಜುಗರ ಆಗಿದೆ. ಕೇವಲ ಮೂವರು ಖಾಸಗಿ ಗನ್ಮೆನ್ಗಳನ್ನು ಬಂಧಿಸಿ, ಸಿಐಡಿಗೆ ಕೊಡುವ ಮೂಲಕ ಇದನ್ನು ಜನರು ಮರೆಯುವಂತೆ ಮಾಡಬೇಕು. ಶಾಸಕರ ಬಂಧನ ಮಾಡಬಾರದೆಂಬ ನಿಮ್ಮ ಕೆಟ್ಟ ಯೋಚನೆ ಇದರಿಂದ ಬಹಿರಂಗ ಆಗುತ್ತಿದೆ ಎಂದು ಆರೋಪಿಸಿದರು. 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ ಎಂದು ಎದೆ ತಟ್ಟಿಕೊಳ್ಳುವ ಸಿದ್ದರಾಮಯ್ಯನವರು, ಈ ಪ್ರಕರಣವನ್ನೂ ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಿದ್ದಾರೆಂದು ರಾಜ್ಯದ ಜನರಿಗೆ ತಿಳಿಸಬೇಕಾಗಿದೆ ಎಂದು ಆಗ್ರಹಿಸಿದರು. ಅದನ್ನು ಬಿಟ್ಟು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.
'ಬಳ್ಳಾರಿ ವಿಚಾರದಲ್ಲಿ ಕ್ರಿಮಿನಲ್ ಶಾಸಕ ನಾ.ರಾ. ಭರತ್ ರೆಡ್ಡಿ, ಐದಾರು ಸಾವಿರ ಜನರ ಜೊತೆಗೆ ನಮ್ಮ ಮನೆಗೆ ಬಂದು ಪೆಟ್ರೋಲ್ ಬಾಂಬ್ ಎಸೆದು, ಗನ್ ಫೈರಿಂಗ್ ಮಾಡುವ ಮೂಲಕ ಒಬ್ಬ ಅಮಾಯಕ ಮೃತಪಟ್ಟಿದ್ದಾರೆ ಎಂದು ಗಮನ ಸೆಳೆದರು. ಇದು ನನ್ನ ಮೇಲಿನ ಕೊಲೆ ಯತ್ನ' ಎಂದು ತಿಳಿಸಿದರು. ಬಳ್ಳಾರಿ ಪ್ರಕರಣದ ಸಿಬಿಐ ತನಿಖೆಗೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಿರ್ಣಯ ಮೂಲಕ ಒತ್ತಾಯಿಸಿದೆ. ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನಾವು ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ ಎಂದು ವಿವರಿಸಿದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ಶಿವಮೊಗ್ಗದಲ್ಲಿ ಒಬ್ಬ ಅಮಾಯಕ ಪ್ರಾಣ ಕಳೆದುಕೊಂಡ. ಅದೇ ವಾಲ್ಮೀಕಿ ಬ್ಯಾನರ್ ಹೆಸರಿನಲ್ಲಿ ಜನಾರ್ಧನ ರೆಡ್ಡಿ ಕೊಲೆ ಪ್ರಯತ್ನ ಮಾಡುತ್ತೀರಿ. ಬ್ಯಾನರ್ ಹೆಸರಿನಲ್ಲಿ ರಾತ್ರಿ 9 ಗಂಟೆಗೆ ಒಬ್ಬ ಶಾಸಕ ಐದಾರು ಸಾವಿರ ಜನರನ್ನು ಕರೆದುಕೊಂಡು ಬಂದು ಮನೆ ಮೇಲೆ ಫೈರಿಂಗ್ ಮಾಡಿ, ಪೆಟ್ರೋಲ್ ಬಾಂಬ್ಗಳನ್ನು ಎಸೆದಿದ್ದಾರೆ. ಅವರ ಕಾರ್ಯಕರ್ತನನ್ನೇ ಅವರ ಖಾಸಗಿ ಗನ್ಮೆನ್ಗಳು ಸಾಯಿಸಿದ್ದಾರೆ. ಅದನ್ನು ನಮ್ಮ ಮೇಲೆ ಹಾಕಿ ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆದಿದೆ. ವಾಲ್ಮೀಕಿ ಹೆಸರಿನಲ್ಲಿ ಇನ್ನೆಷ್ಟು ಅಮಾಯಕರ ಪ್ರಾಣ ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತೀರಿ? ಅನ್ನುವ ವಿಚಾರದಲ್ಲಿ ಶ್ರೀರಾಮುಲು ಅವರು ಆ ಜನಾಂಗದ ಒಬ್ಬ ದೊಡ್ಡ ನಾಯಕನಾಗಿ ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಬಯಕೆ ಅವರಲ್ಲಿದೆ ಎಂದು ಸ್ಪಷ್ಟಪಡಿಸಿದರು.
ವಾಲ್ಮೀಕಿ ಜನಾಂಗಕ್ಕೆ ನೀವು ಮಾಡಿದ್ದು ಏನೂ ಇಲ್ಲ.
ಹೊಟ್ಟೆಕಿಚ್ಚಿನಿಂದ ಪಾದಯಾತ್ರೆ ಮಾಡಬೇಕೆಂಬ ಯೋಚನೆ ಯಾವತ್ತೂ ಇರಲಿಲ್ಲ. ಸಾಕ್ಷಾತ್ ರಾಮಾಯಣವನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ ಮಹರ್ಷಿಗಳ ಹೆಸರು ಹೇಳಿಕೊಂಡು ಆ ಜನಾಂಗಕ್ಕೆ ನೀವು ಮಾಡಿದ್ದು ಏನೂ ಇಲ್ಲ. ಆದರೆ, ವಾಲ್ಮೀಕಿ ಹೆಸರಿನಲ್ಲಿ ಇನ್ನೆಷ್ಟು ಮಂದಿ ಕೊಲೆ ಮಾಡುತ್ತೀರಿ? ಇನ್ನೆಷ್ಟು ಪ್ರಾಣ ತೆಗೆಯುತ್ತೀರಿ ಎಂದು ಕೇಳುವ ಉದ್ದೇಶದಂದ ಶ್ರೀರಾಮುಲು ಅವರು ಪಾದಯಾತ್ರೆ ಮಾಡುವ ತೀರ್ಮಾನ ಮಾಡಿದ್ದರು. ಅದನ್ನು ಪಕ್ಷದ ಗಮನಕ್ಕೆ ತರಲಾಗಿತ್ತು ಎಂದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications