ಜನಾರ್ಧನ ರೆಡ್ಡಿ ಭವಿಷ್ಯ ಜನರೇ ನಿರ್ಧರಿಸುತ್ತಾರೆ: ಅಶ್ವತ್ಥ್‌ ನಾರಾಯಣ

ಬೆಂಗಳೂರು, ಡಿಸೆಂಬರ್‌ 27: ಹೊಸ ರಾಜಕೀಯ ಪಕ್ಷವನ್ನು ರಚಿಸುವ ಹಕ್ಕು ದೇಶದ ಪ್ರತಿಯೊಬ್ಬರಿಗೂ ಇದೆ. ಆದರೆ ಇದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಸಿಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಹೊಸ ರಾಜಕೀಯ ಪಕ್ಷ ಸ್ಥಾಪಿಸಿರುವ ಜನಾರ್ಧನ ರೆಡ್ಡಿ ಅವರ ನಡೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಚಿವ ಅಶ್ವತ್ಥ್‌ ನಾರಾಯಣ ಅವರು ಈ ಮೇಲಿನಂತೆ ತಿಳಿಸಿದ್ದಾರೆ. ಬಿಜೆಪಿಯ ಮಾಜಿ ನಾಯಕ ಹಾಗೂ ಗಣಿ ಉದ್ಯಮಿ ಜನಾರ್ದನರೆಡ್ಡಿ ಅವರು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷದ ಭವಿಷ್ಯವನ್ನು ದೇಶದ ಜನತೆ ನಿರ್ಧರಿಸುತ್ತಾರೆ ಎಂದೂ ಅವರು ಹೇಳಿದರು.

ಇದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇಲ್ಲಿ ರಾಜಕೀಯ ಪಕ್ಷಗಳನ್ನು ಸ್ಥಾಪಿಸಲು ಎಲ್ಲರಿಗೂ ಅವಕಾಶವಿದೆ, ಜನಾರ್ದನರೆಡ್ಡಿ ಅವರು ಅದೇ ಹಾದಿಯಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಮುಂದೊಂದು ದಿನ ಈ ಪಕ್ಷದ ಭವಿಷ್ಯವನ್ನು ದೇಶದ ಜನತೆ ನಿರ್ಧರಿಸುತ್ತಾರೆ ಎಂದು ಹೇಳಿದರು.

Janardhana Reddys future will be decided by the people: Ashwath Narayan

ಬಿಜೆಪಿ ಮಾಜಿ ನಾಯಕ ಜನಾರ್ಧನ ರೆಡ್ಡಿ ಭಾನುವಾರ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಎಂಬ ಹೊಸ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದರು. ಈ ವೇಳೆ ಅವರು ಮುಂಬರುವ ರಾಜ್ಯ ಚುನಾವಣೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿಯೂ ಹೇಳಿದ್ದಾರೆ. ಹೊಸ ಪಕ್ಷದ ಘೋಷಣೆಯೊಂದಿಗೆ ಕರ್ನಾಟಕದ ಮಾಜಿ ಸಚಿವರಾದ ರೆಡ್ಡಿ ರಾಜಕೀಯಕ್ಕೆ ಮರಳಲು ನಿರ್ಧರಿಸಿದ್ದಾರೆ.

ಅವರಿಗೆ 10 ವಿಧಾನಸಭಾ ಸ್ಥಾನಗಳಲ್ಲಿ ಜನ ಬೆಂಬಲವನ್ನು ಹೊಂದಿದ್ದಾರೆ. ಇದರಿಂದ 2023ರಲ್ಲಿ ಮುಂಬರುವ 224 ಸ್ಥಾನಗಳ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ನೀಡಬಹುದು ಎಂದು ಹೇಳಲಾಗುತ್ತದೆ. 2008ರಲ್ಲಿ ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಗಾಲಿ ಜನಾರ್ದನರೆಡ್ಡಿ ಮೊದಲ ಬಾರಿಗೆ ಸಚಿವರಾಗಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಬಹುಮತದ ಕೊರತೆಯನ್ನು ಎದುರಿಸಿತು. ಕಾಂಗ್ರೆಸ್ 78 ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ 37 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಯಿತು. ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ, ಒಂದು ವರ್ಷದ ನಂತರ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡಿತು ಮತ್ತು ಬಿಜೆಪಿ ಸರ್ಕಾರ ರಚಿಸಿತು.

Janardhana Reddys future will be decided by the people: Ashwath Narayan

ಜನಾರ್ಧನ ರೆಡ್ಡಿ ಅವರು ಸ್ವಂತ ಪಕ್ಷ ಸ್ಥಾಪನೆ ಮಾಡಿರುವುದರಿಂದ ಬಿಜೆಪಿಗೆ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ಹಿರಿಯ ನಾಯಕರು ಈಗಾಗಲೇ ತಿಳಿಸಿದ್ದಾರೆ. ರೆಡ್ಡಿ ಅವರು ಬಳ್ಳಾರಿಗೆ ಭೇಟಿ ನೀಡುವಂತಿಲ್ಲ. ಅಲ್ಲದೆ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಜಾತಿ ಬೆಂಬಲದ ಕೊರತೆಯಿಂದಾಗಿ ನ್ಯಾಯಾಲಯದ ನಿರ್ಬಂಧಗಳಿಂದ ಅವರಿಗೆ ಹಿನ್ನಡೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಗೆ ಚುನಾವಣಾ ಪ್ರಚಾರಕ್ಕೆ ಬರಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಅವರು ಯಶಸ್ವಿಯಾಗಿದ್ದಾರೆ ಎಂದು ನಾವು ಭಾವಿಸಿದರೂ, ಚುನಾವಣೆಯಲ್ಲಿ ಅವರನ್ನು ಬೆಂಬಲಿಸಲು ವಾಲ್ಮೀಕಿ ಸಮುದಾಯದ (ಎಸ್‌ಟಿ) ಸಾರಿಗೆ ಸಚಿವ ಬಿ ಶ್ರೀರಾಮುಲು ಅವರಂತಹ ಪ್ರಬಲ ಜಾತಿ ಆಧಾರಿತ ನಾಯಕರಿಲ್ಲ ಎಂದು ಬಳ್ಳಾರಿಯ ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ಡಿಎಚ್‌ ವರದಿ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+