ಪ್ರೀತಿಯ ತಮ್ಮನ 'ಪೈಲ್ವಾನ್' ಸಿನಿಮಾಗೆ ರೆಡ್ಡಿ ಶುಭ ಹಾರೈಕೆ
Recommended Video
ಬೆಂಗಳೂರು, ಸೆಪ್ಟೆಂಬರ್ 12 : ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಸುದೀಪ್ ಮತ್ತು ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಫೇಸ್ ಬುಕ್ ಪುಟದಲ್ಲಿ "ಕನ್ನಡದ ಹೆಮ್ಮೆಯ ಪೈಲ್ವಾನ್ ಚಿತ್ರ ಯಶಸ್ಸು ಕಾಣಲಿ" ಎಂದು ಶುಭ ಹಾರೈಸಿದ್ದಾರೆ. ಮೂರು ಸಾವಿರಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿರುವ ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಒಂದು ದಾಖಲೆಯಾಗಲಿದೆ ಎಂದು ಬಣ್ಣಿಸಿದ್ದಾರೆ.
"ನನ್ನ ಪ್ರೀತಿಯ ತಮ್ಮ, ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿರುವ ಸಾಮ್ರಾಟ ಕೆಚ್ಚೆದೆಯ ಹೆಮ್ಮೆಯ ಕಿಚ್ಚನ ಅತ್ಯಂತ ಸಾಹಸದಿಂದ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ಪೈಲ್ವಾನ್ ಚಿತ್ರ ವಿಶ್ವದಾದ್ಯಂತ ವಿಜಯ ಸಾಧಿಸಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇನೆ" ಎಂದು ಹೇಳಿದ್ದಾರೆ.

"ಸ್ಯಾಂಡಲ್ವುಡ್ನಲ್ಲಿ ಹೆಮ್ಮೆಯ ಮೇರು ನಟ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಸೆಪ್ಟೆಂಬರ್ ಹನ್ನೆರಡರಂದು ತೆರೆ ಕಾಣಲಿದ್ದು, ಕನ್ನಡ , ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ನಿರ್ಮಾಣವಾಗಿರುವ ಪೈಲ್ವಾನ್ ಚಿತ್ರ, ಇಡೀ ದೇಶದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಗಮನ ಸೆಳೆದಿದೆ" ಎಂದು ಬರೆದಿದ್ದಾರೆ.
"ಮೂರು ಸಾವಿರಕ್ಕೂ ಹೆಚ್ಚು ಚಲನಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿರುವ ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಒಂದು ದಾಖಲೆಯಾಗಲಿದೆ. ಈಗಾಗಲೇ ಬಾಲಿವುಡ್ ಮೇರು ನಟ ಅಮಿತಾಬ್ ಬಚ್ಚನ್ , ಸಲ್ಮಾನ್ ಖಾನ್, ಇನ್ನೋರ್ವ ಮೆಗಾ ಸ್ಟಾರ್ ಚಿರಂಜೀವಿ ಅವರೊಂದಿಗೆ ಅಭಿನಯಿಸಿರುವ ಸುದೀಪ್ ಚಿತ್ರ ಪ್ರೇಮಿಗಳ ಹೃದಯದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದ್ದಾರೆ" ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

"ಬಿಡುಗಡೆಯಾಗಿರುವ ಟೀಸರ್, ಟ್ರೈಲರ್ ಹಾಗೂ ಹಾಡುಗಳ ಮೂಲಕ ಜನಮನ ಗೆದ್ದಿರುವ ಪೈಲ್ವಾನ್ ವಿಜಯಿಯಾಗಲಿ ಎಂದು ಹಾರೈಸುತ್ತೇನೆ. ಶ್ರಮ ವಹಿಸಿದ ಎಲ್ಲ ಸಿಬ್ಬಂದಿ ವರ್ಗದವರಿಗೆ ನನ್ನ ಶುಭಾಶಯಗಳು" ಎಂದು ಪೋಸ್ಟ್ ಹಾಕಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications