Get Updates
Get notified of breaking news, exclusive insights, and must-see stories!

ಯಡಿಯೂರಪ್ಪ ಹುಟ್ಟುಹಬ್ಬ: ನೆನಪಿನ ಅಂಗಳಕ್ಕೆ ಜಾರಿದ ಜನಾರ್ದನ ರೆಡ್ಡಿ

ಬೆಂಗಳೂರು, ಫೆಬ್ರವರಿ 27; ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಶುಭಾಶಯಗಳನ್ನು ಕೋರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ದಿನಗಳನ್ನು ನೆನಪು ಮಾಡಿಕೊಂಡು ನೆನಪಿನ ಅಂಗಳಕ್ಕೆ ಜಾರಿದ್ದಾರೆ.

ಫೆಬ್ರವರಿ 27ರಂದು ಬಿ. ಎಸ್. ಯಡಿಯೂರಪ್ಪ ಹುಟ್ಟುಹಬ್ಬ. ಅವರ 81ನೇ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಸದ್ಯ ಚುನಾವಣಾ ರಾಜಕೀಯದಿಂದ ವಿಶ್ರಾಂತಿ ಪಡೆದಿರುವ ಯಡಿಯೂರಪ್ಪ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

Janardhana Reddy Wishes For Former CM B S Yediyurappa Birthday

ಜನಾರ್ದನ ರೆಡ್ಡಿ ಶುಭಾಶಯ: ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಮತ್ತು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಅವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ.

"ಬಡವರ ಬಂಧು, ರೈತ ನಾಯಕ, ನಮ್ಮೆಲ್ಲರ ನೆಚ್ಚಿನ ಆತ್ಮೀಯರಾದ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು" ಎಂದು ಹೇಳಿದ್ದಾರೆ.

"ಈ ನಾಡು ಕಂಡ ಅಪ್ರತಿಮ ಜನ ನಾಯಕ, ನೇಗಿಲ ಯೋಗಿ, ರೈತರ ಕಣ್ಮಣಿ, ಬಿಜೆಪಿ ಪಕ್ಷದ ಕಟ್ಟಾಳು, ಹುಟ್ಟು ಹೋರಾಟಗಾರರು ಹಾಗೂ ಈ ನಾಡಿನ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ"

"ರಾಜ್ಯ ಬಿಜೆಪಿ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ, ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ಯಡಿಯೂರಪ್ಪನವರು ರಾಜ್ಯದ ಜನ ಮೆಚ್ಚಿದ ಜನನಾಯಕರಾಗಿದ್ದಾರೆ. ಅಲ್ಲದೆ ರಾಜ್ಯ ರಾಜಕೀಯ ಇತಿಹಾಸದಲ್ಲಿ ದೃಢ ತೀರ್ಮಾನಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ ಮಹಾನ್ ನಾಯಕರು ನಮ್ಮ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು" ಎಂದು ಬಣ್ಣಿಸಿದ್ದಾರೆ.

"ಬಿ. ಎಸ್. ಯಡಿಯೂರಪ್ಪನವರೊಂದಿಗೆ ನನ್ನದು ವಿಶೇಷವಾದ ಬಾಂಧವ್ಯವಿದೆ. 2008ರಲ್ಲಿ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ನಾನು ಅವರೊಂದಿಗೆ ರಾಜ್ಯದ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಗೊಂಡು, ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಅಳಿಲು ಸೇವೆಯನ್ನು ಸಲ್ಲಿಸುವ ಮೂಲಕ ಬಿ. ಎಸ್. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ನಾನು ಸಂತೋಷಪಟ್ಟು ಸಂಭ್ರಮಿಸಿದ್ದೆ" ಎಂದು ಹಿಂದಿನ ದಿನಗಳ ನೆನೆಪು ಮಾಡಿಕೊಂಡಿದ್ದಾರೆ.

"ಅಂದು ನಾನು ಯಡಿಯೂರಪ್ಪನವರ ಸಚಿವ ಸಂಪುಟದ ಸದಸ್ಯನಾಗಿ ರಾಜ್ಯದಾದ್ಯಂತ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವರು ನೀಡಿರುವ ಸಹಕಾರವನ್ನು ನಾನೆಂದಿಗೂ ಮರೆಯಲು ಸಾಧ್ಯವಿಲ್ಲ. ಅದೇ ರೀತಿಯಲ್ಲಿ ಅಲವು ಬಾರಿ ಚುನಾವಣಾ ಪ್ರಚಾರದ ವೇಳೆ ನಾನು ಯಡಿಯೂರಪ್ಪನವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಹಾಗೂ ಅನೇಕ ಬಾರಿ ನಮ್ಮ ಕುಟುಂಬದ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಂಡಿರುವುದು ನನ್ನ ಅದೃಷ್ಟವೆಂದೆ ಭಾವಿಸುತ್ತೇನೆ" ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

"ನಮ್ಮ ನಾಡಿನ ನೆಚ್ಚಿನ ಮುಖ್ಯಮಂತ್ರಿಗಳಾಗಿದ್ದ BS Yediyurappaನವರು ಸಂತೋಷದಿಂದ ಬಾಳಲಿ, ಆ ದೇವರು ಅವರಿಗೆ ಆರೋಗ್ಯ, ಶ್ರೇಯಸ್ಸು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತಾ, ಅವರಿಗೆ ಮತ್ತೊಮ್ಮೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ" ಎಂದು ಪೋಸ್ಟ್ ಹಾಕಿದ್ದಾರೆ.

2018ರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಈ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದರು.

2021ರ ಜುಲೈ 26ರಂದು ಯಡಿಯೂರಪ್ಪ ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ಬಳಿಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು. ಸದ್ಯ ಅವರ ಪುತ್ರ ಬಿ. ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+