ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ಗಣಿಗಾರಿಕೆ ಪ್ರಕರಣ : 4 ಅರ್ಜಿ ವಾಪಸ್ ಪಡೆದ ಜನಾರ್ದನ ರೆಡ್ಡಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 27 : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ವಾಪಸ್ ಪಡೆದಿದ್ದಾರೆ. ಪ್ರಕರಣದಲ್ಲಿ ಜೈಲು ಸೇರಿದ್ದ ಜನಾರ್ದನ ರೆಡ್ಡಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಜನಾರ್ದನ ರೆಡ್ಡಿ ಅವರ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಇದನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್‌ಗೆ ನಾಲ್ಕು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್

Janardhana Reddy withdraws petition in High Court

ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಪರ ವಕೀಲರು ಅರ್ಜಿಯನ್ನು ವಾಪಸ ಪಡೆಯುತ್ತೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸಿಬಿಐ ಪರ ವಕೀಲರು ಸಹ ಇದಕ್ಕೆ ಸಮ್ಮತಿ ಸೂಚಿಸಿದರು.

ಹೊಸ ವರ್ಷ, ಹುಟ್ಟುಹಬ್ಬದ ಬಯಕೆ ಬಿಚ್ಚಿಟ್ಟ ಗಾಲಿ ರೆಡ್ಡಿಹೊಸ ವರ್ಷ, ಹುಟ್ಟುಹಬ್ಬದ ಬಯಕೆ ಬಿಚ್ಚಿಟ್ಟ ಗಾಲಿ ರೆಡ್ಡಿ

ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಮತ್ತು ಸೆಂಟ್ರಲ್ ಎಂಪವರ್ ಕಮಿಟಿ ವರಧಿ ಆಧರಿಸಿ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ನನ್ನ 'ಪಾರಿಜಾತ' ಜಪ್ತಿಯಾಗಿಲ್ಲ, ಮನೆ ಮಾರಾಟಕ್ಕಿಲ್ಲ : ಗಾಲಿ ರೆಡ್ಡಿನನ್ನ 'ಪಾರಿಜಾತ' ಜಪ್ತಿಯಾಗಿಲ್ಲ, ಮನೆ ಮಾರಾಟಕ್ಕಿಲ್ಲ : ಗಾಲಿ ರೆಡ್ಡಿ

ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದೆ. ಈ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಜನಾರ್ದನ ರೆಡ್ಡಿ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ, ಈಗ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

English summary
Former minister Janardhana Reddy withdraw the petition in Karnataka high court seeking quash the FIR lodged against him by CBI in illegal mining case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X