ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ? ; ಕೆಟ್ಟ ದಾರಿಯಲ್ಲಿ ಅಧಿಕಾರ ಹಿಡಿಯುವುದು ನಿಮ್ಮ ಚಾಳಿ: ಜೆಡಿಎಸ್ ಕಿಡಿ
ಬೆಂಗಳೂರು, ಸೆಪ್ಟೆಂಬರ್ 22: ಕೆಟ್ಟ ದಾರಿಯಲ್ಲಿ ಅಧಿಕಾರ ಹಿಡಿಯುವುದು ಕಾಂಗ್ರೆಸ್ ಚಾಳಿ. ಶೆಟ್ಟರ್, ಸವದಿಯಂಥ ಬಿಜೆಪಿಗರನ್ನು ಬಲೆಬೀಸಿ ಬಿಗಿದಪ್ಪಿಕೊಂಡ ಹಸ್ತಪಕ್ಷಕ್ಕೆ, ಮೈಯ್ಯೆಲ್ಲಾ ಉರಿ ಹತ್ತಿಕೊಂಡಿದೆ ಎಂದು ರಾಜ್ಯ ಜೆಡಿಎಸ್ ಘಟಕ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಪರಿಯ ಅಜ್ಞಾನವೇ? ಪರಮಾಶ್ಚರ್ಯ!! ವರ್ಷದ ಕೂಳಿನ ಪಂಚರತ್ನಗಳಿಗೂ, ಒಪ್ಪೊತ್ತಿನ ಹರುಷದ ನಕಲಿ ಗ್ಯಾರಂಟಿಗಳಿಗೂ ಹೋಲಿಕೆಯೇ? ಎಲ್ಲರಿಗೂ ಫ್ರೀ ಫ್ರೀ ಎಂದು ಹೇಳಿ ಪಂಗನಾಮ ಹಾಕಿದ್ದು ಗೊತ್ತಿಲ್ಲದ ಸಂಗತಿಯೇ? ಎಲ್ಲಾ ಕಾಲದಲ್ಲಿಯೂ ಟೋಪಿ ಹಾಕಬಹುದು ಎನ್ನುವ ಅಹಂಕಾರವೇ? 3/6
— Janata Dal Secular (@JanataDal_S) September 22, 2023
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಜೆಡಿಎಸ್ ಘಟಕ, ಸ್ವಇಚ್ಛೆಯಿಂದಲೇ ಉರಿ ಇಟ್ಟುಕೊಂಡರೆ ಹೊಣೆ ಯಾರು? ಬಹುಶಃ, ಅಂಗೈಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ ಕಾಂಗ್ರೆಸ್? ಎಂದು ರಾಜ್ಯ ಜೆಡಿಎಸ್ ಘಟಕ ಪ್ರಶ್ನಿಸಿದೆ.

ಬಾಳೆಗೊಂದು ಏಟು, ಬಾಳಿಗೊಂದು ಮಾತುʼ ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!! ಮೂರ್ಖರಿಗೆ ಎಷ್ಟು ಹೇಳಿದರೂ ಅಷ್ಟೇ, ಅರ್ಥವೇ ಆಗುವುದಿಲ್ಲ.
ಎಚ್ ಡಿ ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಲ್ಲಿ ಪಕ್ಷ ವಿಸರ್ಜನೆ ಮಾತು ಹೇಳಿದ್ದು ನಿಜ. ನನಗೆ ಬಹುಮತದ ಸರಕಾರ ಕೊಟ್ಟರೆ 5 ವರ್ಷದಲ್ಲಿ ಪಂಚರತ್ನಗಳನ್ನು ಜಾರಿ ಮಾಡುವೆ. ಮಾತು ತಪ್ಪಿದರೆ ಮತ್ತೆಂದೂ ಮತ ಕೇಳಲು ಬರುವುದಿಲ್ಲ, ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದಿದ್ದರು. ಈ ಹೇಳಿಕೆಯ ವಿಡಿಯೋ, ಸುದ್ದಿಗಳಿವೆ.. ಗಮನಿಸಬಹುದು
ಕಾಂಗ್ರೆಸ್ ಪಕ್ಷಕ್ಕೆ ಈ ಪರಿಯ ಅಜ್ಞಾನವೇ? ಪರಮಾಶ್ಚರ್ಯ!! ವರ್ಷದ ಕೂಳಿನ ಪಂಚರತ್ನಗಳಿಗೂ, ಒಪ್ಪೊತ್ತಿನ ಹರುಷದ ನಕಲಿ ಗ್ಯಾರಂಟಿಗಳಿಗೂ ಹೋಲಿಕೆಯೇ? ಎಲ್ಲರಿಗೂ ಫ್ರೀ ಫ್ರೀ ಎಂದು ಹೇಳಿ ಪಂಗನಾಮ ಹಾಕಿದ್ದು ಗೊತ್ತಿಲ್ಲದ ಸಂಗತಿಯೇ? ಎಲ್ಲಾ ಕಾಲದಲ್ಲಿಯೂ ಟೋಪಿ ಹಾಕಬಹುದು ಎನ್ನುವ ಅಹಂಕಾರವೇ? ಎಂದು ಪ್ರಶ್ನಿಸಿದೆ.
ಜೆಡಿಎಸ್ ಬಿಜೆಪಿ ಬಾಗಿಲಿಗೆ ಪದೇಪದೆ ಹೋಗುತ್ತದೆಂದು ಹಲ್ಲು ಗಿಂಜುವ ಕಾಂಗ್ರೆಸ್ಸಿಗರಿಗೆ; ಅದೇ ಬಿಜೆಪಿ ಜತೆ ಅಧಿಕಾರ ಅನುಭವಿಸಿದ ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವಠಾಕ್ರೆ ಮನೆಗಳ ಸುತ್ತ ಗಿರಕಿ ಹೊಡೆಯಲು ಸಂಕೋಚವಿಲ್ಲ! ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ? ಎಂದು ಪ್ರಶ್ನಿಸಿದರು.
ಪ್ರಜಾಪ್ರಭುತ್ವದಲ್ಲಿ ಮೈತ್ರಿ, ಹೊಂದಾಣಿಕೆ ಸಾಮಾನ್ಯ. ಆಯಾ ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತದೆ. ದೇಶ ವಿದೇಶದಲ್ಲೂ ಇದ್ದದ್ದೇ. ಆದರೆ, ನಮ್ಮ ಪಕ್ಷವನ್ನು ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ, ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ. ದುರದೃಷ್ಟಕ್ಕೆ ಇಂಥ ಜಾಣರೋಗಕ್ಕೆ ಮದ್ದಿಲ್ಲ ಎಂದು ಕಿಡಿಕಾರಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications