ಜಂತಕಲ್ ಗಣಿಗಾರಿಕೆ: ಎಚ್ಡಿಕೆ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ
ಮಂಗಳವಾರ ಜಾಮೀನು ಅವಧಿ ಮುಗಿದಿದ್ದರಿಂದ ಮತ್ತೆ ನ್ಯಾಯಾಧೀಶೆ ವನಮಾಲ ಆನಂದರಾವ್ ಕುಮಾರಸ್ವಾಮಿಗೆ 7 ದಿನಗಳ ರಿಲೀಫ್ ನೀಡಿದ್ದು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 30ರವರೆಗೆ ಮುಂದೂಡಿದ್ದಾರೆ.
ಬೆಂಗಳೂರು, ಮೇ 24: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಮೇ 30ರವರೆಗೆ ವಿಸ್ತರಿಸಲಾಗಿದೆ.
ಜಂತಕಲ್ ಎಂಟರ್ಪ್ರೈಸಸ್'ಗೆ ಅಕ್ರಮವಾಗಿ ಅದಿರು ಸಾಗಿಸಲು ಅನುಮತಿ ನೀಡಿದ್ದ ಪ್ರಕರಣದಲ್ಲಿ ಕುಮಾರಸ್ವಾಮಿ ಆರೋಪಿಯಾಗಿದ್ದಾರೆ. ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಕಳೆದ 17ರಂದು 53ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಕುಮಾರಸ್ವಾಮಿಗೆ ಮೇ 23ರವರೆಗೆ ಜಾಮೀನು ನೀಡಿ ವಿಚಾರಣೆ ಮುಂದೂಡಿತ್ತು.

ಮಂಗಳವಾರ ಜಾಮೀನು ಅವಧಿ ಮುಗಿದಿದ್ದರಿಂದ ಮತ್ತೆ ನ್ಯಾಯಾಧೀಶೆ ವನಮಾಲ ಆನಂದರಾವ್ ಕುಮಾರಸ್ವಾಮಿಗೆ 7 ದಿನಗಳ ರಿಲೀಫ್ ನೀಡಿದ್ದು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 30ರವರೆಗೆ ಮುಂದೂಡಿದ್ದಾರೆ.
ಇದೇ ಪ್ರಕರಣದಲ್ಲಿ ಮೇ 18ರಂದು ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಿದ್ದ ಪ್ರಕರಣದ ದೂರುದಾರ ಜನಾರ್ಧನ್ ರೆಡ್ಡಿ ಸೂಕ್ತ ಸಾಕ್ಷ್ಯಗಳನ್ನು ನೀಡಲು ಮೂರು ವಾರಗಳ ಕಾಲಾವಕಾಶ ಕೇಳಿದ್ದರು. ಇನ್ನು ಇದೇ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಬಂಧಿತರಾಗಿದ್ದನ್ನೂ ಇಲ್ಲಿ ಸ್ಮರಿಸಬಹುದು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications