'ಜಪಾನ್ ಕಂಪನಿಯಿಂದ ಬೆಂಗಳೂರಿನಲ್ಲಿ ಅನಿಲ ತಯಾರಿಕೆಯ 2ನೇ ಘಟಕ'
ಬೆಂಗಳೂರು, ಸೆಪ್ಟಂಬರ್ 12: ಕೈಗಾರಿಕಾ ಅನಿಲ ತಯಾರಿಸುವ ಜಪಾನಿನ ಏರ್ ವಾಟರ್ ಕಂಪನಿ, ಬೆಂಗಳೂರಿನ ಸಮೀಪ ತನ್ನ ಎರಡನೇ ಘಟಕವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ. ಅಧಿಕೃತ ಮಾಹಿತಿ ನೀಡಿದೆ. ಈಗಾಗಲೇ ಈ ಕಂಪನಿಯು ವಿಜಯನಗರದಲ್ಲಿ ಮೊದಲ ಘಟಕ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದಲ್ಲಿ ಜೈವಿಕ ಅನಿಲ ತಯಾರಿಕಾ ಘಟಕ ಸ್ಥಾಪನೆಗೂ ಕಂಪನಿಯು ಆಸಕ್ತಿ ತೋರಿದೆ.
ಜಪಾನ್ಗೆ ಭೇಟಿ ನೀಡಿದ ಸಚಿವ ಎಂಬಿ ಪಾಟೀಲ್ ಮತ್ತು ಅಧಿಕಾರಿಗಳ ನಿಯೋಗ ಏರ್ ವಾಟರ್ ಕಂಪನಿ ಮುಖ್ಯಸ್ಥರ ಒತೆ ಮಾತನಾಡಿದ್ದಾರೆ. ಏರ್ ವಾಟರ್ ಅಧಿಕಾರಿಗಳೊಂದಿಗೆ ನಡೆದ ಸಮಲೋಚನೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕರ್ನಾಟಕವು ತಮ್ಮ ವಹಿವಾಟಿನ ಪ್ರಮುಖ ವಲಯವಾಗಿದ್ದು, ಜೈವಿಕ ಅನಿಲದ ಸ್ಥಳೀಯ ಬೇಡಿಕೆಯನ್ನು ಪೂರೈಸಲು ಈ ಯೋಜನೆಯು ನೆರವಾಗಲಿದೆ ಎಂದು ಕಂಪನಿಯು ತಿಳಿಸಿದೆ ಎಂದರು.

ಇದೇ ಸಂದರ್ಭದಲ್ಲಿ, ಶಿಂಕೊ ನೇಮ್ಪ್ಲೇಟ್ ಕಂಪನಿಯು ₹100 ಕೋಟಿ ಹೂಡಿಕೆಯ ಮೂಲಕ ವಾಹನ ಭಾಗ ತಯಾರಿಕಾ ಘಟಕವನ್ನು ಬೆಂಗಳೂರು ಬಳಿ ಆರಂಭಿಸಲು ನಿರ್ಧರಿಸಿದೆ. ಟೊಯೋಟ ಗ್ರೂಪ್ನ ಕ್ಯಾಟಲರ್ ಕಂಪನಿಯು ಬಿಡದಿಯಲ್ಲಿನ ತನ್ನ ತಯಾರಿಕಾ ಚಟುವಟಿಕೆಗೆ 140 ಕೋಟಿ ರೂಪಾಯಿ ಹೆಚ್ಚುವರಿ ಹೂಡಿಕೆ ಮೂಲಕ 2030ರ ವೇಳೆಗೆ ವಿಸ್ತರಿಸುವುದಾಗಿ ತಿಳಿಸಿದೆ. ಈ ಮೂಲಕ ಕರ್ನಾಟಕದ ವಿದೇಶ ಕಂಪನಿಗಳಿಂದ ಬಂಡವಾಳ ಹರಿವು ಹೆಚ್ಚಾಗುತ್ತಿದೆ.
ಮಾತ್ರವಲ್ಲದೇ ಸುಧಾರಿತ ಸ್ವಯಂಚಾಲಿತ ನಿಯಂತ್ರಣ ಸಾಧನ ತಯಾರಿಸುವ ಸಗಿನೋಮಿಯಾ, ಕರ್ನಾಟಕದಲ್ಲಿ ಹೊಸ ಘಟಕ ಸ್ಥಾಪಿಸಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಜಪಾನ್ ಪ್ರವಾಸದಲ್ಲಿ ಹತ್ತು ಹಲವು ಕಂಪನಿಗಳೊಂದಿಗೆ ನಿರಂತರ ಸಮಾಲೋಚನೆ ನಡೆಸುತ್ತಿರುವ ಸಚಿವರು ಬಂಡವಾಳ ಆಕರ್ಷಿಸುತ್ತಿದ್ದ, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ವಿಫುಲ ಅವಕಾಶಗಳ ಬಗ್ಗೆ ಮನವರಿಕೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಎನ್ಜಿಇಎಫ್ ಪುನಶ್ಚೇತನ
ಪಾಲುದಾರಿಕೆಯಡಿ ಹುಬ್ಬಳ್ಳಿಯಲ್ಲಿರುವ ಪ್ರತಿಷ್ಠಿತ ಎನ್ಜಿಇಎಫ್ ಕಾರ್ಖಾನೆ ಪುನ:ಶ್ಚೇತನದ ಸಾಧ್ಯತೆಗಳ ಕುರಿತು ಜಪಾನಿನ ಜೆಎಫ್ಇ ಷೋಜಿ ಕಂಪನಿ ಜೊತೆ ಚರ್ಚಿಸಿ ಎನ್ಜಿಇಎಫ್ ಪುನಶ್ಚೇತನದ ಪ್ರಸ್ತಾವ ಮುಂದಿಟ್ಟಿದ್ದಾರೆ. ವಿದ್ಯುತ್ ಪರಿವರ್ತಕಗಳ ತಯಾರಿಕೆಯಲ್ಲಿ ಜೆಎಫ್ಇ ಮುಂಚೂಣಿಯಲ್ಲಿ ಇದೆ. ಹುಬ್ಬಳ್ಳಿಯಲ್ಲಿ ಇರುವ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ಯಮವಾಗಿರುವ ನ್ಯೂ ಗವರ್ನಮೆಂಟ್ ಎಲೆಕ್ಟ್ರಿಕಲ್ ಫ್ಯಾಕ್ಟರಿಯನ್ನು (ಎನ್ಜಿಇಎಫ್) ರಾಜ್ಯ ಸರ್ಕಾರದ ಪಾಲುದಾರಿಕೆಯಡಿ ಪುನಶ್ಚೇತನಗೊಳಿಸುವ ಸಂಬಂಧ ಪೂರ್ವಭಾವಿ ಮಾತುಕತೆ ನಡೆಸಲು ಕಂಪನಿಯ ಉನ್ನತಾಧಿಕಾರಿಗಳು ಹುಬ್ಬಳ್ಳಿಯ ಘಟಕಕ್ಕೆ ಭೇಟಿ ನೀಡಲು ಆಹ್ವಾನಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications