Get Updates
Get notified of breaking news, exclusive insights, and must-see stories!

ಜಾರಕಿಹೊಳಿ ಸಹೋದರರಿಂದ ಸರ್ಕಾರ ಉರುಳಿಸುವುದು ಅಸಾಧ್ಯ: ಮೊಯ್ಲಿ

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 15: ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಕೆಲ ಮಾಫಿಯಾಗಳು ಕೈ ಹಾಕಿವೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಯಲ್ಲಿ ಸತ್ಯಾಂಶ ಇದ್ದೇ ಇರುತ್ತೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಂಸದ ವೀರಪ್ಪ ಮೊಯ್ಲಿ ಹೇಳಿದರು.

ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಅಂಗವಾಗಿ ಮುದ್ದೇನಹಳ್ಳಿ ಗ್ರಾಮದ ವಿಶ್ವೇಶ್ವರಯ್ಯ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಮ ನಮನ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ವೀರಪ್ಪ ಮೊಯ್ಲಿ ಯಡಿಯೂರಪ್ಪ ನವರು ವಾಮಮಾರ್ಗದಿಂದ ಆಧಿಕಾರ ಹಿಡಿಯಲು ಯತ್ನ ನಡೆಸುತ್ತಿದ್ದಾರೆ ಎಂದರು.

ಅಪರೇಷನ್ ಕಮಲ ಮಾಡಿ ಈ ಹಿಂದೆ ಯಡಿಯೂರಪ್ಪ ಅವರೇ ಪಕ್ಷದಿಂದ ಹೊರಗೆ ಬಂದರು. ಕರ್ನಾಟಕದ ಜನ ಸುಸಂಸ್ಕೃತರು ಹಾಗೂ ನಮ್ಮ ಶಾಸಕರು ಹಣ ಅಮಿಷಗಳಿಗೆ ಶಾಸಕರು ಬಗ್ಗಲ್ಲ . ಬಿಜೆಪಿಯವರು ಭ್ರಮೆಯಿಂದ ಅಪರೇಷನ್ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದರು.

Jarkiholi brother can not de stabelize the government: Veerappa Moily

ಕಳೆದ ಬಾರಿ 18 ಸಂಸದರು ಬಿಜೆಪಿಯಿಂದ ಆಯ್ಕೆಯಾಗಿದ್ರು. ಅದ್ರೆ ಈ ಬಾರಿ ಕೇವಲ 2-3 ಸ್ಥಾನ ಬರಬೇಕು ಎಂಬುದು ಅವರ ಆಸೆಯಾದರೆ ಸಮ್ಮಿಶ್ರ ಸರ್ಕಾರ ಉರುಳಿಸಲಿ ಎಂದರು.

ಜಾರಕಿಹೊಳಿ ವಿಷಯ ಮಾತನಾಡಿದ ಅವರು, ದಿನ ಬೆಳಗಾದರೆ ಜಾರಕಿಹೊಳಿ ವಿಚಾರ ಮಾತನಾಡಿ ಮಾದ್ಯಮದವರು ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಆದರೆ ಒಬ್ಬ ಜಾರಕಿಹೊಳಿ ಅಥವಾ ಮತ್ತೊಬ್ಬರು ಈ ಪಕ್ಷ ಹಾಗೂ ಸರ್ಕಾರ ಉರುಳಿಸೋಕೆ ಆಗಲ್ಲ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+