ಜಯಲಲಿತಾ ಕೇಸ್ : ಬಿವಿ ಆಚಾರ್ಯ ನೂತನ ಎಸ್ಪಿಪಿ
ಬೆಂಗಳೂರು, ಏ. 28 : ಕರ್ನಾಟಕ ಸರ್ಕಾರ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಹಿರಿಯ ವಕೀಲ ಬಿ.ವಿ.ಆಚಾರ್ಯ ಅವರನ್ನು ನೇಮಕ ಮಾಡಿದೆ.
ಮಂಗಳವಾರ ಬೆಳಗ್ಗೆ ಕಾನೂನು ಸಚಿವರು ಮತ್ತು ಕಾನೂ ಕಾರ್ಯದರ್ಶಿಗಳ ಜೊತೆ ಬಿ.ವಿ.ಆಚಾರ್ಯ ಅವರು ಮಾತುಕತೆ ನಡೆಸಿದ್ದು, ಪ್ರಕರಣದಲ್ಲಿ ಸರ್ಕಾರದ ಪರವಾದ ಲಿಖಿತ ವಿವರಣೆಯನ್ನು ಹೈಕೋರ್ಟ್ ರಿಜಿಸ್ಟ್ರಾಟ್ ಅವರಿಗೆ ಸಲ್ಲಿಕೆ ಮಾಡಲಿದ್ದಾರೆ. [ಜಯಲಲಿತಾ ಮೇಲ್ಮನವಿ ತೀರ್ಪು ಏ.30ಕ್ಕೆ?]

ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಕರ್ನಾಟಕ ಸರ್ಕಾರ ಹೈಕೋರ್ಟ್ಗೆ ಲಿಖಿತ ವಿವರಣೆಯನ್ನು ಸಲ್ಲಿಸಬೇಕಾಗಿದೆ. ಸರ್ಕಾರದ ಲಿಖಿತ ವಿವರಣೆ ಮತ್ತು ಡಿಎಂಕೆ ಮುಖಂಡ ಅನ್ಬಳಗನ್ ಅವರು ಸಲ್ಲಿಸುವ ದಾಖಲೆಗಳ ಪರಿಶೀಲನೆ ನಂತರ ಪ್ರಕರಣದ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. [ಜಯಾ ಕೇಸ್: ಮ್ಯಾನ್ ಆಫ್ ದಿ ಮ್ಯಾಚ್ ಆಚಾರ್ಯ ಸಂದರ್ಶನ]
ಮೂಲಗಳ ಪ್ರಕಾರ ಸಿಬಿಐ ವಿಶೇಷ ನ್ಯಾಯಾಲಯ ಜಯಲಲಿತಾ ಮತ್ತು ಇತರ ನಾಲ್ವರಿಗೆ ವಿಧಿಸಿದ ಶಿಕ್ಷೆಯನ್ನು ಎತ್ತಿ ಹಿಡಿಯಬೇಕು ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್ ವಿಶೇಷ ಪೀಠಕ್ಕೆ ಸಲ್ಲಿಕೆ ಮಾಡುವ ಲಿಖಿತ ವಿವರಣೆಯಲ್ಲಿ ಮನವಿ ಮಾಡಲಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ವಿಶೇಷ ನ್ಯಾಯಪೀಠ ಪ್ರಕಟಿಸಲಿದ್ದು, ಅದಕ್ಕೂ ಮೊದಲು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಡಿಎಂಕೆ ಮುಖಂಡ ಅನ್ಬಳಗನ್ ಮತ್ತು ಕರ್ನಾಟಕ ಸರ್ಕಾರದ ಲಿಖಿತ ವಿವರಣೆಗಳನ್ನು ಪರೀಶಿಲಿಸಲಿದ್ದಾರೆ.
ಈಗಾಗಲೇ ಪ್ರಕರಣದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಪ್ರಕಟಿಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಮೇ 1ರಿಂದ ಒಂದು ತಿಂಗಳ ಕಾಲ ಹೈಕೋರ್ಟ್ಗೆ ಬೇಸಿಗೆ ರಜೆ ಇದೆ. ಆದ್ದರಿಂದ, ಏ.30ರಂದು ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.
-
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ












Click it and Unblock the Notifications