ಜಯ ಕೇಸ್ : ಸುಪ್ರೀಂಗೆ ಹೋಗಲು ಸರ್ಕಾರಕ್ಕೆ ಆಚಾರ್ಯ ಶಿಫಾರಸು
ಬೆಂಗಳೂರು, ಮೇ 15 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ದೋಷಮುಕ್ತರಾಗಿರುವ ಜಯಲಲಿತಾ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಜಯಲಲಿತಾ ದೋಷಮುಕ್ತಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಎಸ್ಪಿಪಿ ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಪ್ರತಿಯನ್ನು ಅಧ್ಯಯನ ಮಾಡಿದ ಬಳಿಕ ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಅವರು ಹೈಕೋರ್ಟ್ ತೀರ್ಪಿನ ಕುರಿತು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದು. ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ಸರ್ಕಾರಕ್ಕೆ ತಿಳಿಸಿದ್ದಾರೆ.[ಜಯಾ ಭವಿಷ್ಯ ಸಿದ್ದು ಕೈಯಲ್ಲಿ: ಪ್ರಮಾಣವಚನ ಮುಂದಕ್ಕೆ?]

ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು 90 ದಿನಗಳ ಕಾಲಾವಕಾಶವಿದೆ. ಕರ್ನಾಟಕ ಸರ್ಕಾರ ಬಿ.ವಿ.ಆಚಾರ್ಯ ಅವರ ಶಿಫಾರಸನ್ನು ಪರಿಗಣಿಸಿ ಪ್ರಕರಣದ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಿದೆಯೇ? ಎಂದು ಕಾದು ನೋಡಬೇಕು. [ಜಯಲಲಿತಾ ಆರೋಪ ಮುಕ್ತ, ಬಿ.ವಿ.ಆಚಾರ್ಯ ಸಂದರ್ಶನ]
ತೀರ್ಪು ಬದಲಾವಣೆ ಇಲ್ಲ : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಬ್ಯಾಂಕ್ ಸಾಲದ ಲೆಕ್ಕದಲ್ಲಿ ತಪ್ಪಾಗಿದೆ ಎಂದು ಬಿ.ವಿ.ಆಚಾರ್ಯ ಅವರು ಹೇಳಿದ್ದರು. ಹೈಕೋರ್ಟ್ ಈ ಗಣಿತದ ತಪ್ಪುಗಳನ್ನು ಸರಿಪಡಿಸಬಹುದು. ಆದರೆ, ನೀಡಿರುವ ಅಂತಿಮ ತೀರ್ಪನ್ನು ಬದಲಾವಣೆ ಮಾಡುವಂತಿಲ್ಲ. ['ಅಕ್ರಮ ಆಸ್ತಿ ಪ್ರಕರಣ: ಜಯಲಲಿತಾ ನಿರ್ದೋಷಿ']
ಮುಂದೇನು? : ಜಯಲಲಿತಾ ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರ ಬಿ.ವಿ.ಆಚಾರ್ಯ ಅವರ ಶಿಫಾರಸನ್ನು ಪರಿಗಣಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಕಾನೂನು ಇಲಾಖೆ ಮತ್ತು ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಬಹುದಾಗಿದೆ.
ಒಂದು ವೇಳೆ ಸರ್ಕಾರದ ಮೇಲ್ಮನವಿ ಪರಿಗಣಿಸಿ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ಕೊಟ್ಟರೆ, ಸಿಬಿಐ ವಿಶೇಷ ನ್ಯಾಯಾಲಯ ಜಯಲಿತಾ ಅವರಿಗೆ ನೀಡಿದ 4 ವರ್ಷದ ಜೈಲು ಶಿಕ್ಷೆ ಜಾರಿಗೆ ಬರಲಿದ್ದು, ಅವರು ಪುನಃ ತಮಿಳುನಾಡು ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಹೋಗಲಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications