ಜಯದೇವ ನಿರ್ದೇಶಕ ಡಾ. ಮಂಜುನಾಥ್ ಅವಧಿ ವಿಸ್ತರಣೆ
ಬೆಂಗಳೂರು, ಜುಲೈ 17; ಕರ್ನಾಟಕ ಸರ್ಕಾರ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವರ ಅವಧಿ 6ಯನ್ನು ಆರು ತಿಂಗಳ ಕಾಲ ವಿಸ್ತರಣೆ ಮಾಡಿದೆ. ನಿರ್ದೇಶಕರ ಅವಧಿ ಜುಲೈ 19ಕ್ಕೆ ಅಂತ್ಯವಾಗಬೇಕಿತ್ತು.
ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಾ. ಸಿ. ಎನ್. ಮಂಜುನಾಥ್ ಅಧಿಕಾರಾವಧಿಯನ್ನು 2024ರ ಜನವರಿ ತಿಂಗಳ ತನಕ ವಿಸ್ತರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಡಾ. ಮಂಜುನಾಥ್ ಕಳೆದ 16 ವರ್ಷಗಳಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾಗಿದ್ದಾರೆ. ಅವರ ಅವಧಿ ಪೂರ್ಣಗೊಂಡ ಬಳಿಕವೂ ವಿವಿಧ ಸರ್ಕಾರಗಳು ನಿರ್ದೇಶಕ ಹುದ್ದೆಯಲ್ಲಿ ಅವರನ್ನು ಮುಂದುವರೆಸುತ್ತಾ ಬಂದಿವೆ.
ಸೋಮವಾರ ನಡೆದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಮತ್ತು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಡಾ. ಮಂಜುನಾಥ್ ಅವಧಿ ವಿಸ್ತರಣೆ ಮಾಡುವ ಒಮ್ಮತದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವಧಿ ಕಳೆದ ವರ್ಷವೇ ಅಂತ್ಯಗೊಂಡಿತ್ತು. ಆಸ್ಪತ್ರೆಯ ಸಿಬ್ಬಂದಿ ಒತ್ತಾಯದ ಮೇರೆಗೆ ಮತ್ತೆ ಒಂದು ವರ್ಷ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಈ ಅವಧಿ ಜುಲೈ 19ಕ್ಕೆ ಅಂತ್ಯಗೊಳ್ಳಬೇಕಿತ್ತು. ಈ ಹಿನ್ನಲೆಯಲ್ಲಿ ಇಂದು ನಿರ್ದೇಶಕರ ಆಯ್ಕೆ ಸಂಬಂಧ ಸಭೆಯನ್ನು ನಡೆಸಲಾಯಿತು.
18/07/2022ರ ಆದೇಶ; ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಮುಖ್ಯಮಂತ್ರಿಯವರ ಅನುಮೋದನೆಯಂತೆ ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಎ. ಶ್ರೀನಿಧಿ ಸರ್ಕಾರದ ಆಧೀನ ಕಾರ್ಯದರ್ಶಿ-3, ವೈದ್ಯಕೀಯ ಶಿಕ್ಷಣ ಇಲಾಖೆ 18/7/2022ರಂದು ಆದೇಶವೊಂದನ್ನು ಹೊರಡಿಸಿದ್ದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲ್ಲಿಗೆ ಸರ್ಕಾರದ ಅಧಿಸೂಚನೆ ದಿನಾಂಕ 25/6/2021ರಲ್ಲಿ ಡಾ. ಸಿ. ಎನ್. ಮಂಜುನಾಥ್ ಇವರನ್ನು ನಿರ್ದೇಶಕರ ಹುದ್ದೆಗೆ ನೇಮಕ ಮಾಡಲಾಗಿರುವ ಅವಧಿಯು ದಿನಾಂಕ 19/7/2022ಕ್ಕೆ ಮುಕ್ತಾಯಗೊಳ್ಳುವುದರಿಂದ, ಸಂಸ್ಥೆಯ ಆಡಳಿತ ಮಂಡಳಿಯ ಘಟನೋತ್ತರ ಅನುಮೋದನೆ ಪಡೆಯುವ ಷರತ್ತಿಗೊಳಪಟ್ಟು, ಸಂಸ್ಥೆಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಡಾ. ಸಿ. ಎನ್. ಮಂಜುನಾಥ್ ಇವರನ್ನು ದಿನಾಂಕ 20/7/2022ರಿಂದ ದಿನಾಂಕ 19/7/2023ರ ತನಕ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಿ ಆದೇಶಿಸಿದೆ ಎಂದು ಹೇಳಿದ್ದರು.
ಜಯದೇವ ಆಸ್ಪತ್ರೆಯನ್ನು ದೊಡ್ಡ ಮಟ್ಟಿಗೆ ಕಟ್ಟಿ ಬೆಳೆಸುವಲ್ಲಿ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವರ ಶ್ರಮವಿದೆ. ಮೈಸೂರಿನಲ್ಲೂ ಜಯದೇವ ಆಸ್ಪತ್ರೆಯನ್ನು ನಿರ್ಮಾಣ ಮಾಡಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಕಲಬುರಗಿಯಲ್ಲಿಯೂ ಮಂಜುನಾಥ್ ಉಸ್ತುವಾರಿಯಲ್ಲೇ 371 ಹಾಸಿಗೆ ಸಾಮರ್ಥ್ಯದ ಜಯದೇವ ಸಂಸ್ಥೆಯ ಶಾಖೆಯನ್ನು ನಿರ್ಮಿಸಲಾಗುತ್ತಿದೆ. 2024ರ ಜನವರಿಯಲ್ಲಿ ಈ ಆಸ್ಪತ್ರೆ ಲೋಕಾರ್ಪಣೆಯಾಗಲಿದೆ.
ಕಲಬುರಗಿ ನಗರದ ಹೃದಯ ಭಾಗದಲ್ಲಿ 6.8 ಎಕರೆ ಪ್ರದೇಶದಲ್ಲಿ 183 ಕೋಟಿ ರೂ. ವೆಚ್ಚದಲ್ಲಿ ಸಂಸ್ಥೆಯ ಕಲಬುರಗಿ ಶಾಖೆ ನಿರ್ಮಾಣವಾಗುತ್ತಿದೆ. ಬರೀ ಕಟ್ಟಡ ಉದ್ಘಾಟನೆ ಅಷ್ಟೆ ಅಲ್ಲ. ಸುಮಾರು 56 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳೊಂದಿಗೆ ಆಸ್ಪತ್ರೆ ತನ್ನ ಸೇವೆ ಆರಂಭಿಸಲಿದೆ.
ನೂತನ ಆಸ್ಪತ್ರೆಗೆ ತಕ್ಕಂತೆ ರೋಗಿಗಳಿಗೆ ಸೇವೆ ನೀಡಲು ಸಿಬ್ಬಂದಿಗಳ ನೇಮಕಾತಿಗೂ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಹಣಕಾಸು ಇಲಾಖೆಯೂ ಸಹಮತಿ ನೀಡಿದೆ. ಜಯದೇವ ಸಂಸ್ಥೆ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳ ಪಾಲಿಗೆ ಸಂಜೀವಿನಿಯಾಗಿ ಕಾರ್ಯನಿರ್ವಹಿಸಲಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ನಿಂಗ್ ವಾಕ್ vs ಈವಿನಿಂಗ್ ವಾಕ್: ಯಾವುದು ಉತ್ತಮ? -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications