ಜಯಲಲಿತಾ ಜೈಲುವಾಸ ಅಂತ್ಯ, ಚೆನ್ನೈನತ್ತ ಅಮ್ಮ
ಬೆಂಗಳೂರು, ಅ. 18 : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶುಕ್ರವಾರ ಸುಪ್ರೀಂಕೋರ್ಟ್ನಿಂದ ಜಾಮೀನು ಪಡೆದಿದ್ದ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಅಕ್ರಮ ಆಸ್ತಿಗಳಿಗೆ ಪ್ರಕರಣ ಸಾಬೀತಾಗಿದ್ದರಿಂದ ಜಯಲಲಿತಾ ಅವರು 22 ದಿನಗಳಿಂದ ಜೈಲಿನಲ್ಲಿದ್ದರು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು, ನ್ಯಾ. ಮದನ್ ಬಿ ಲೋಕೂರ್ ಹಾಗೂ ನ್ಯಾ. ಎ.ಕೆ.ಸಿಕ್ರಿ ಅವರ ಪೀಠ ಅಕ್ರಮ ಆಸ್ತಿಗಳಿಗೆ ಪ್ರಕರಣದ ಎಲ್ಲಾ ನಾಲ್ವರು ಅಪರಾಧಿಗಳಿಗೂ ಶುಕ್ರವಾರ ಜಾಮೀನು ಮಂಜೂರು ಮಾಡಿತ್ತು. ಶನಿವಾರ ಜಾಮೀನು ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಧ್ಯಾಹ್ನ 3.15ಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಸೆ.27ರಂದು ಜೆ.ಜಯಲಲಿತಾ ಮತ್ತು ಅವರ ಆಪ್ತರಾದ ಶಶಿಕಲಾ, ಇಳವರಸಿ ಮತ್ತು ಸಾಕುಮಗ ಸುಧಾಕರನ್ಗೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಕಳೆದ 22 ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಲ್ಲರೂ ಇಂದು ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಬಿಡುಗಡೆಯಾಗಿದ್ದಾರೆ. [ಶನಿವಾರ ಬೆಳಗ್ಗೆಯಿಂದ ಏನಾಯ್ತ? ಇಲ್ಲಿದೆ ಮಾಹಿತಿ]
ಜೈಲಿನಿಂದ ಹೊರಬಂದ ಜಯಲಲಿತಾ ಅವರು ಝೆಡ್ ಪ್ಲಸ್ ಭದ್ರತೆ ನಡುವೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದರು. ಎಚ್ಎಎಲ್ನಿಂದ ವಿಶೇಷ ವಿಮಾನದಲ್ಲಿ ಜಯಲಲಿತಾ ಅವರು ಚೆನ್ನೈನ ಪೋಯಾಸ್ ಗಾರ್ಡ್ನ್ನಲ್ಲಿರುವ ತಮ್ಮ ನಿವಾಸಕ್ಕೆ ತೆರಳಲಿದ್ದಾರೆ. [ಜಯಲಲಿತಾ ಪ್ರಕರಣದ ಸಂಪೂರ್ಣ ಮಾಹಿತಿ ಇಲ್ಲಿದೆ]
ಜಯಲಲಿತಾ ಅವರ ಬಿಡುಗಡೆಗೆ 1 ಕೋಟಿ ರೂ.ಮೌಲ್ಯದ ಶ್ಯೂರಿಟಿಯನ್ನು ನೀಡಲಾಗಿದೆ. ಬೆಂಗಳೂರಿನ ಗುಣಜ್ಯೋತಿ ಮತ್ತು ಭರತ್ ಎನ್ನುವವರು ಜಿಗಣಿಯಲ್ಲಿರುವ 1 ಕೋಟಿ ಮೌಲ್ಯದ ಆಸ್ತಿಯನ್ನು ಶ್ಯೂರಿಟಿಯಾಗಿ ನೀಡಿದ್ದಾರೆ. ಅಪರಾಧಿಗಳು ನಾಪತ್ತೆಯಾದರೆ ನೀವೆ ಹೊಣೆಗಾರರು ಎಂದು ಶ್ಯೂರಿಟಿ ನೀಡಿದವರಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications