ಜಯಾ ಕೇಸ್ : ಕರ್ನಾಟಕದ ಮೇಲ್ಮನವಿ ಹೋರಾಟ ಹೇಗೆ?
ಬೆಂಗಳೂರು, ಜೂ. 02 : ಕರ್ನಾಟಕದ ಕಾನೂನು ಇಲಾಖೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಆರಂಭಿಸಿದೆ. ಇದೇ ವಾರದಲ್ಲಿ ಸರ್ಕಾರ ಮೇಲ್ಮನವಿ ಸಲ್ಲಿಸಲಿದೆ.
ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲ ಬಿ.ವಿ.ಆಚಾರ್ಯ ಮತ್ತು ವಕೀಲ ಸಂದೇಶ್ ಚೌಟ ಅವರು ವಾದ ಮಂಡನೆ ಮಾಡಲಿದ್ದಾರೆ. ಕಾನೂನು ಇಲಾಖೆ ಮೇಲ್ಮನವಿ ಸಲ್ಲಿಸಲು ಬೇಕಾದ ಅರ್ಜಿಯ ತಯಾರಿಯಲ್ಲಿ ತೊಡಗಿದೆ. [ಮೇಲ್ಮನವಿ ಸಲ್ಲಿಕೆ ಕೈಬಿಡಿ : ಸಿಎಂ ಸಿದ್ದುಗೆ ಸಲಹೆ]

ಅರ್ಜಿಯಲ್ಲೇನಿರುತ್ತದೆ? : ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನಲ್ಲಿನ ಆಸ್ತಿಯ ಲೆಕ್ಕಾಚಾರಗಳು ತಪ್ಪಾಗಿರುವುದನ್ನು ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಪತ್ತೆ ಹಚ್ಚಿದ್ದರು. ಇದನ್ನು ಪ್ರಮುಖವಾಗಿ ಮೇಲ್ಮನವಿ ಅರ್ಜಿಯಲ್ಲಿ ಉಲ್ಲೇಖಿಸಲಾಗುತ್ತದೆ. [ಮೇಲ್ಮನವಿ ಸಲ್ಲಿಸಲು ಕರ್ನಾಟಕದ ತೀರ್ಮಾನ]
ಪ್ರತಿವಾದಿಯನ್ನಾಗಿ ಮಾಡಲಿಲ್ಲ : ಪ್ರಕರಣದಲ್ಲಿ ಕರ್ನಾಟಕ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡಲಿಲ್ಲ ಎಂದು ಮೇಲ್ಮನವಿ ಅರ್ಜಿಯಲ್ಲಿ ಸರ್ಕಾರ ಗಮನಸೆಳೆಯಲಿದೆ. ತಮಿಳುನಾಡಿನಿಂದ ಕರ್ನಾಟಕಕ್ಕೆ ಆಕ್ರಮ ಆಸ್ತಿಗಳಿಕೆ ಪ್ರಕರಣ ವರ್ಗಾವಣೆಯಾದರೂ ರಾಜ್ಯವನ್ನು ಪ್ರತಿವಾದಿ ಮಾಡಲಿಲ್ಲ ಎಂದು ಅರ್ಜಿಯಲ್ಲಿ ಕರ್ನಾಟಕ ತಿಳಿಸಲಿದೆ. [ಜಯಲಲಿತಾ ಪ್ರಕರಣ Timeline]
ಪ್ರಕರಣದ ವಿಚಾರಣೆ ಸಂದರ್ಭದಲ್ಲಿಯೂ ಕರ್ನಾಟಕದ ವಾದವನ್ನು ಮಂಡನೆ ಮಾಡಲು ಅವಕಾಶ ನೀಡಲಿಲ್ಲ. ಜಯಲಲಿತಾ ಪರ ವಕೀಲರಿಗೆ ವಾದ ಮಂಡನೆಗೆ ಎರಡು ತಿಂಗಳ ಕಾಲಾವಕಾಶ ನೀಡಲಾಯಿತು. ಆದರೆ, ಕರ್ನಾಟಕಕ್ಕೆ ಅವಕಾಶ ನೀಡಲಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗುತ್ತದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿಗಳನ್ನು ನಿರ್ದೋಷಿಗಳು ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. [ಪಿಟಿಐ ಚಿತ್ರ]
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications